Homeಮುಖಪುಟಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

'ನಾನು ಬಂಗಾಳದ ಮಗಳು. 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ ಪ್ರತಿ ಜಿಲ್ಲೆ, ಪ್ರತಿ ವಿಧಾನಸಭೆ ಸ್ಥಾನ ತಿಳಿದಿದೆ. ನೀವು ಏನೇ ಮಾಡಿದರೂ ನಾನು ನಿಮ್ಮ ಪಿತೂರಿಯನ್ನು ಒಡೆಯುತ್ತೇನೆ'

- Advertisement -
- Advertisement -

ಚುನಾವಣಾ ಆಯೋಗ ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ದಿನಾಂಕಗಳನ್ನು  ಘೋಷಿಸಿದ ಬೆನ್ನಲ್ಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಬಂಗಾಳದಲ್ಲಿ ಎಂಟು ಹಂತದ ಮತದಾನವು ಕೇಂದ್ರ ಸರ್ಕಾರದ ಆಡಳಿತರೂಢ ಬಿಜೆಪಿಯ “ಪಿತೂರಿಯ” ಭಾಗವಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ಮೇರೆಗೆ ಈ ತೀರ್ಮಾನ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ’ಬಿಜೆಪಿ ಪಕ್ಷದ ಮೂಲಗಳಿಂದ, ಅವರು ಬಯಸಿದ ಮತದಾನ ದಿನಾಂಕಗಳ ಪಟ್ಟಿಯನ್ನು ನಾನು ನೋಡಿದ್ದೇನೆ. ಈಗ ಚುನಾವಣಾ ಆಯೋಗದ ಪಟ್ಟಿಯನ್ನು ನೋಡಿದ್ದೇನೆ. ಎರಡು ಒಂದೇ ಆಗಿವೆ. ನನಗೆ ಆಘಾತವಾಗಿದೆ’ ಎಂದಿದ್ದಾರೆ.

ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಪ್ರಾರಂಭವಾಗಲಿದೆ. ಆದರೆ ಸುದೀರ್ಘ 8 ಹಂತಗಳಲ್ಲಿ ಮತದಾನ ನಡೆಯಲಿದೆ. ಇಲ್ಲಿಗೆ ಸುಮಾರು 33 ದಿನಗಳ ನಂತರ ಮೇ 2ಕ್ಕೆ ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಇದರಿಂದ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾನು ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿ. ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ತದನಂತರ ಮೋದಿ ಮತ್ತು ಶಾ ನೀವು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಬಲ ಹೋರಾಟವನ್ನು ವೀಕ್ಷಿಸುತ್ತೀರಿ. ನಾವು ಅದರಲ್ಲೂ ಹೋರಾಡುತ್ತೇವೆ’ ಎಂದಿದ್ದಾರೆ.

ಬಂಗಾಳದಲ್ಲಿ 2016 ರ ರಾಜ್ಯ ಚುನಾವಣೆಯಲ್ಲಿ ಮತ್ತು 2019 ರ ರಾಷ್ಟ್ರೀಯ ಚುನಾವಣೆಯಲ್ಲಿ ಏಳು ಹಂತಗಳಲ್ಲಿ ಮತದಾನ ನಡೆದಿದೆ. ಸಂಭವನೀಯ ಹಿಂಸಾಚಾರದ ಆತಂಕ ಹೆಚ್ಚಿನ ಮತದಾನದ ಹಂತಗಳಿಗೆ ಕಾರಣ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಮತಾ ಬ್ಯಾನರ್ಜಿ ಮತದಾನದ ವೇಳಾಪಟ್ಟಿಯನ್ನು ಬಿಜೆಪಿ ನಿರ್ದೇಶಿಸುತ್ತಿದೆ ಎಂದು ಆರೋಪಿಸಿದ್ದಾರೆ. “ಒಂದೇ ದಿನದಲ್ಲಿ ಸರಿಸಮ ಒಂದೇ ಸಂಖ್ಯೆಯ ಕ್ಷೇತ್ರಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದೇ ದಿನದಲ್ಲಿ ಮತದಾನ ನಡೆಯುತ್ತಿದೆ. ಆದರೆ ಬಂಗಾಳಕ್ಕೆ ಮಾತ್ರ 8 ಹಂತಗಳ ಮತದಾನ ನೀಡಿ ಏಕೆ ಅವಮಾನಿಸಲಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್ ತಿವಾರಿ

ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ಚುನಾವಣೆ ಮುಗಿದ ಬಳಿಕ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸಲು ಮೋದಿ ಮತ್ತು ಶಾ ಅವರಿಗೆ ಸಮಯವಿದೆಯೇ ಎಂದು ನೋಡಿಕೊಂಡು ರಾಜ್ಯದ ಜಿಲ್ಲೆಗಳಲ್ಲಿ ಚುನಾವಣೆ ನಿಗದಿಪಡಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ನಾನು ಬಂಗಾಳದ ಮಗಳು. ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ ಪ್ರತಿ ಜಿಲ್ಲೆ, ಪ್ರತಿ ವಿಧಾನಸಭೆ ಸ್ಥಾನ ತಿಳಿದಿದೆ. ನೀವು ಏನೇ ಮಾಡಿದರೂ ನಾನು ನಿಮ್ಮ ಪಿತೂರಿಯನ್ನು ಒಡೆಯುತ್ತೇನೆ. ಬಂಗಾಳದ ಜನರು ಬಂಗಾಳವನ್ನು ಆಳುತ್ತಾರೆ. ಬಂಗಾಳದ ಜನರು ಎಂಟು ಹಂತದ ಮತದಾನದ ಅವಮಾನಕ್ಕೆ ಪ್ರತೀಕಾರ ತೀರಿಸುತ್ತಾರೆ “ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ (ಫೆ.26) ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ, ಅಸ್ಸಾಂನಲ್ಲಿ 3 ಹಂತದಲ್ಲಿ ಮತ್ತು ಕೇರಳ, ತಮಿಳುನಾಡು ಹಾಗೂ ಪುದುಚೇರಿಗಳಲ್ಲಿ ಒಂದೇ ದಿನ ಮತದಾನ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ’ಪ್ರಧಾನಿ ಒಬ್ಬ ದಂಗಾಬಾಜ್ ಮತ್ತು ರಾಕ್ಷಸ’: ಬಿಜೆಪಿ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...