Homeಮುಖಪುಟಬರಲಿದೆ 'ಭೀಮಾ ಕೋರೆಗಾಂವ್' ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ, ಸಾಹಸ, ಕೆಚ್ಚೆದೆಯ ಹೋರಾಟವೇ 'ಭೀಮಾ ಕೋರೆಗಾಂವ್' ಯುದ್ಧ...

- Advertisement -
- Advertisement -

ಭಾರತದ ಐತಿಹಾಸಿಕ ಘಟನೆ ‘ಭೀಮಾ ಕೋರೆಗಾಂವ್’ ಯುದ್ಧವನ್ನು ಆಧರಿಸಿದ ‘ದಿ ಬ್ಯಾಟಲ್ ಆಫ್ ಭೀಮಾ ಕೋರೆಗಾಂವ್’ ಎನ್ನುವ ಚಲನಚಿತ್ರ ಬಾಲಿವುಡ್‌ನಲ್ಲಿ ನಿರ್ಮಾಣವಾಗುತ್ತಿದ್ದು, ಖ್ಯಾತ ಗೀತ ರಚನೆಕಾರ ರಮೇಶ್ ಥೀಟೆ ಈ ಚಿತ್ರವನ್ನು ನಿರ್ಮಾಣ ಮಾಡುವುದರೊಟ್ಟಿಗೆ ನಿರ್ದೇಶನವನ್ನೂ ಮಾಡಲಿದ್ದಾರೆ.

ಅರ್ಜುನ್ ರಾಂಪಾಲ್, ದಿಗಂಗನ ಸೂರ್ಯವಂಶಿ, ಅಭಿಮನ್ಯು ಸಿಂಗ್, ಸನ್ನಿ ಲಿಯೋನ್, ಮಿಲಿಂದ್ ಗುನಾಜಿ, ಗೋವಿಂದ್ ನಾಮದೇವ್, ಯತೀನ್ ಕಾರ್ಯೇಕರ್, ಅಶೋಕ್ ಸಾಮ್ರಾತ್ ಸೇರಿದಂತೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಚಿತ್ರವು 2021 ರಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ:ಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ: ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ

ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಖ್ಯಾತ ಬಾಲಿವುಡ್ ನಟ ಅರ್ಜುನ್ ರಾಂ‌ಪಾಲ್ ಈ ಕುರಿತು ಟ್ವೀಟ್ ಮಾಡಿದ್ದು, “ನನ್ನ ಮನಸ್ಸನ್ನು ಗೆದ್ದ ಐತಿಹಾಸಿಕ ಘಟನೆಯನ್ನಾಧರಿಸಿದ ಚಿತ್ರದ ಭಾಗವಾಗಿರುವುದು ನನ್ನ ಹೆಮ್ಮೆ. ಖಂಡಿತಾ ಇದು ನಿಮ್ಮನ್ನೂ ಗೆಲ್ಲುತ್ತದೆ. 2021 ರಲ್ಲಿ ಚಿತ್ರ ಬಿಡುಗಡೆಯಾಗಲಿದೆ” ಎಂದು ಬರೆದುಕೊಂಡು ಚಿತ್ರದ ಫಸ್ಟ್‌ಲುಕ್ ಅನ್ನು ಹಂಚಿಕೊಂಡಿದ್ದಾರೆ.

ಚಿತ್ರದ ಹಾಡಿನ ಟೀಸರ್ ಅನ್ನು ಇಲ್ಲಿ ನೋಡಿ.

ಇದನ್ನೂ ಓದಿ: ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ನೂರಾರು ಜನರು ಇದನ್ನು ರೀಟ್ವೀಟ್ ಮಾಡಿದ್ದಾರೆ.

ಶ್ರೀಕಾಂತ್ ದೊಲ್ಲೆ ಎಂಬುವವರು ಟ್ವೀಟ್ ಮಾಡಿ, “ನಾವು ಕಾಯುತ್ತಿದ್ದೇವೆ!!! ಜೈಭೀಮ್” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

ಯೋಗೇಶ್ ಎಂಬುವವರು ಟ್ವೀಟ್ ಮಾಡಿ, “ಚಿತ್ರದ ಬಗ್ಗೆ ಕುತೂಹಲ ಮತ್ತು ಕಾತರನಾಗಿದ್ದೇನೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ..

ಪಂಡಿತ್ ಕ್ಷಿತಿಜ್ ಎಂಬುವವರು ಟ್ವೀಟ್ ಮಾಡಿ, “ನಮ್ಮ ಇತಿಹಾಸ ನಮ್ಮ ಹೆಮ್ಮೆ. ಮಹಾರರ (ಅಸ್ಪೃಶ್ಯರ) ಇತಿಹಾಸ ಮತ್ತು ಭೀಮಾ ಕೋರೆಗಾಂವ್ ಘಟನೆಯನ್ನು ಜಗತ್ತು ತಿಳಿದುಕೊಳ್ಳಲಿ. ಶೇರ್ ಮಾಡಿ, ರೀಟ್ವೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭೀಮಾ ಕೋರೆಗಾಂವ್ ಎಂಬ ಹೆಸರು ಸಾಕಷ್ಟು ಪ್ರಚಲಿತದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಈ ಐತಿಹಾಸಿಕ ಘಟನೆಯ ನೆನಪಿಗಾಗಿ ಮಹಾರಾ‍ಷ್ಟ್ರದಲ್ಲಿ ಉತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ಸವದಲ್ಲಿ ಗಲಭೆ ಆರಂಭವಾಗಿತ್ತು. ಇದರ ಭಾಗವಾಗಿ ಹತ್ತಾರು ಹೋರಾಟಗಾರರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ದೇಶದಾದ್ಯಂತ ನೂರಾರು ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಮಾನವ ಹಕ್ಕುಗಳ ದಿನ: ಬಂಧನದಲ್ಲಿರುವ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಿದ ರೈತರು!

ಏನಿದು ಕೋರೆಗಾಂವ್ ಯುದ್ಧ;

ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆ. ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ ಎನ್‌ಐಎಗೆ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...