Homeಮುಖಪುಟಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ...

ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ಈ ಭೀಕರ ವಿಧ್ವಂಸಕ ಕೃತ್ಯಕ್ಕೆ ಕಾರಣರಾದ ಪೊಲೀಸರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೋರಾಟಗಾರ ಕನ್ಹಯ್ಯ ಕುಮಾರ್‌ ಆಗ್ರಹಿಸಿದ್ದಾರೆ.

- Advertisement -
- Advertisement -

ಬಿಹಾರದ ವಿಧಾನಸಭಾ ಚುನಾವಣೆಗೆ ನಾಳೆ ಮೊದಲ ಹಂತದ ಮತದಾನ ಆರಂಭವಾಗಲಿದೆ. ಚುನಾವಣೆ ಇಷ್ಟು ಸಮೀಪವಿರುವಾಗಲೇ ಬಿಹಾರದಲ್ಲಿ ದುರಂತಗಳು ಶುರುವಾಗಿವೆ. ಮುಂಗೆರ್ ಪಟ್ಟಣದಲ್ಲಿ ದುರ್ಗಾ ಮೂರ್ತಿಗಳ ವಿಸರ್ಜನೆ ಮೇಳೆ ಪೊಲೀಸರು ಮತ್ತು ಜನಸಮೂಹದ ನಡುವೆ ಗುಂಪು ಘರ್ಷಣೆ ಉಂಟಾಗಿದೆ.

ಗುಂಪು ಘರ್ಷಣೆಯಲ್ಲಿ ಬುಲೆಟ್ ತಾಗಿ 18 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 20 ಮಂದಿ ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ಕೆಲವರು ಬಂದೂಕುಗಳನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರ್ಗಾ ವಿಗ್ರಹಗಳ ವಿಸರ್ಜನೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಜನ ಮತ್ತು ಕೊತ್ವಾಲಿ ಪೊಲೀಸ್ ಠಾಣಾ ಸಿಬ್ಬಂದಿ ನಡುವೆ ವಾಗ್ವಾದ ನಡೆದು, ನಂತರ ಹಿಂಸಾಚಾರ ಆರಂಭವಾಗಿದೆ. ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘರ್ಷಣೆ ತಡೆಯಲು ಮೊದಲು ಪೊಲೀಸರು ಅಶ್ರುವಾಯು ಬಳಸಿದರು. ಆದರೆ ಜನಸಮೂಹವನ್ನು ನಿಯಂತ್ರಣಕ್ಕೆ ತರುವಲ್ಲಿ ಅವು ವಿಫಲವಾದ ಪರಿಣಾಮ ಪೊಲೀಸರು ಗುಂಡು ಹಾರಿಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

“ಜನಸಮೂಹ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಗುಂಡು ಹಾರಿಸಿದ್ದು ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾಯಿತು. ಘಟನೆಯಲ್ಲಿ 20 ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ” ಎಂದು ಮುಂಗೆರ್ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೇಳಿದ್ದಾರೆ.

“ಈ ಬಾರಿ ಮುಂಗೆರ್‌ನಲ್ಲಿ 53 ಕ್ಕೂ ಹೆಚ್ಚು ದುರ್ಗಾ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ, ಅದರಲ್ಲಿ 15 ವಿಗ್ರಹಗಳನ್ನು ದೀನ್‌ದಯಾಳ್ ಚೌಕ್‌ನಲ್ಲಿ ಗಂಗಾ ನದಿಯಲ್ಲಿ ಮುಳುಗಿಸಲು ಸಂಭ್ರಮದಿಂದ ತೆಗೆದುಕೊಂಡು ಹೋಗಲಾಗುತ್ತಿತ್ತು” ಎಂದು ದುರ್ಗಾ ಐಡೆಲ್ ಇಮ್ಮರ್ಶನ್ ಸಮಿತಿಯ ಸದಸ್ಯ ಪ್ರಕಾಶ್ ಭಗತ್ ಹೇಳಿದ್ದಾರೆ.

“ಸಾಂಪ್ರದಾಯಿಕವಾಗಿ, ವಿಜಯದಶಮಿ ಹಬ್ಬದ ಮೂರು ದಿನಗಳ ನಂತರ ವಿಗ್ರಹಗಳನ್ನು ವಿಸರ್ಜಿಸಲಾಗುತ್ತದೆ. ಆದರೆ, ಈ ಬಾರಿ ಬುಧವಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇರುವ ಕಾರಣ,  ಮಂಗಳವಾರ ಬೆಳಿಗ್ಗೆ 5 ಗಂಟೆಯೊಳಗೆ ದುರ್ಗಾ ವಿಸರ್ಜನೆಗೆ ಅಧಿಕಾರಿಗಳು ಒತ್ತಾಯಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ದುರ್ಗಾ ಪೂಜಾ ಸಂಘಟಕರು ದುರ್ಗಾ ಮೂರ್ತಿ ವಿಸರ್ಜನೆಗೆ ತೆರಳುವ ಸಂದರ್ಭದಲ್ಲಿ ಜೋರಾಗಿ ಡಿಜೆ ಸಂಗೀತ ಹಾಕಲಾಗಿತ್ತು. ರಾತ್ರಿ 11.50 ರ ಸುಮಾರಿಗೆ ಪೊಲೀಸ್ ಅಧಿಕಾರಿಗಳು ವಿಗ್ರಹಗಳನ್ನು ಹೆಗಲ ಮೇಲೆ ಹೊತ್ತುಕೊಂಡಿದ್ದ ನಾಲ್ವರನ್ನು ಥಳಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ದುರಂತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

“ಏಳು ಜನರಿಗೆ ಬುಲೆಟ್ ತಾಗಿ ಗಾಯಗಳಾಗಿದ್ದು, ಅವರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಒಬ್ಬರನ್ನು ಉತ್ತಮ ಚಿಕಿತ್ಸೆಗಾಗಿ ಭಾಗಲ್‌ಪುರಕ್ಕೆ ಕರೆದೊಯ್ಯಲಾಗಿದೆ” ಎಂದು ಮುಂಗೆರ್ ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ಡಾ. ನಿರಂಜನ್ ಹೇಳಿದ್ದಾರೆ. ಮೃತ ಅನುರಾಗ್ ಕುಮಾರ್ ತಲೆಗೆ ಗುಂಡು ತಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿ ಸಾಧನಾ ಕುಮಾರ್ ಹೇಳಿದ್ದಾರೆ.

ಘರ್ಷಣೆಯಲ್ಲಿ ಸಂಗರ್‌ಪುರ, ಕೊತ್ವಾಲಿ, ಕಾಸಿಮ್ ಬಜಾರ್, ಬಸುದೇಪುರ ಪೊಲೀಸ್ ಠಾಣೆಗಳ ಎಸ್‌ಎಚ್‌ಒಗಳು ಸೇರಿದಂತೆ ಕನಿಷ್ಠ 20 ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ಘಟನೆ ನಂತರ ಜಿಲ್ಲೆಯ ಬಹುತೇಕ ಪೊಲೀಸ್ ಪಡೆಗಳನ್ನು ಕೊತ್ವಾಲಿ ಕಡೆಗೆ ಕಳುಹಿಸಲಾಗಿದೆ. ನಂತರ ಬಿಹಾರ ಮಿಲಿಟರಿ ಪೊಲೀಸ್ (ಬಿಎಂಪಿ) ಮತ್ತು ಅರೆಸೈನಿಕ ಪಡೆಗಳ ಸಿಬ್ಬಂದಿಯನ್ನು ಘರ್ಷಣಾ ಸ್ಥಳದಲ್ಲಿ ನಿಯೋಜಿಸಲಾಗಿದೆ. ಬಿಗಿ ಭದ್ರತೆಯ ನಡುವೆಯೂ ಮುಂಗೆರ್ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಪರಿಸ್ಥಿತಿ ಉದ್ವಿಗ್ನವಾಗಿದೆ.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಕುರಿತು ಹೋರಾಟಗಾರ ಕನ್ಹಯ್ಯ ಕುಮಾರ್‌ ಟ್ವೀಟ್ ಮಾಡಿದ್ದಾರೆ.

“ನಿನ್ನೆ ರಾತ್ರಿ ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಪೊಲೀಸರು ಅನಾಗರಿಕ ಲಾಠಿ ಚಾರ್ಜ್ ನಡೆಸಿ, ನಂತರ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ. ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಜನರು ಹೇಳುತ್ತಾರೆ. ಈ ಭೀಕರ ವಿಧ್ವಂಸಕ ಕೃತ್ಯಕ್ಕೆ ಕಾರಣರಾದ ಪೊಲೀಸರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...