HomeUncategorizedಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರವು ಮೋದಿಯನ್ನು ತಿರಸ್ಕರಿಸುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮೋದಿಯವರು ಬಿಹಾರಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹಲವರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, 2ನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ನಿನ್ನೆ ಮುಕ್ತಾಯವಾಗಿದೆ. ಇದರ ನಡುವೆಯೇ ಟ್ವಿಟ್ಟರ್‌ನಲ್ಲಿ #BiharRejectsModi ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ.

ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿಯ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಆಡಳಿತ ಮತ್ತು ಬಿಹಾರದ ನಿತಿಶ್‌ ಕುಮಾರ್ ಅವರ ಆಡಳಿತದ ವಿರುದ್ಧ ಅಲ್ಲಿನ ಜನ ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ಗೀತ್‌ ವಿ ಎಂಬುವವರು ಟ್ವೀಟ್ ಮಾಡಿ, “ಬಿಹಾರವು ಮೋದಿಯನ್ನು ತಿರಸ್ಕರಿಸುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮೋದಿಯವರು ಬಿಹಾರಿಗಳನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ಮರೆಯಲು ಸಾಧ್ಯವಿಲ್ಲ. #BiharrejectsModi” ಎಂದು ಬರೆದುಕೊಂಡು, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಪ್ರತಿನಿಧಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ವಸ್ಲಾಲಾ ಕುಮಾರಿ ಎಂಬುವವರು ಟ್ವೀಟ್ ಮಾಡಿ, “ರೈತರ ಆತ್ಮಹತ್ಯೆ, ನಿರುದ್ಯೋಗ, ಜಂಗಲ್ ರಾಜ್, ಸಾರ್ವಜನಿಕರ ಲೂಟಿ, ಕೋಮುದ್ವೇಷ, ಜುಮ್ಲಾ, ಭಾಷಾ ರಾಜಕೀಯ, ಹುಸಿ ರಾಷ್ಟ್ರೀಯತೆ, ಲಸಿಕೆ ರಾಜಕೀಯಗಳಿಗೆ ಸ್ಥಳವಿಲ್ಲ. ಬಿಹಾರ ಸಮೃದ್ಧಿಯಾಗಲಿದೆ. ಕಾಂಗ್ರೆಸ್ ಮತ್ತು ಆರ್‌ಜೆಡಿ ಮೈತ್ರಿಗೆ ಮತದಾನ ನೀಡಿ” ಎಂದು ಬರೆದಿದ್ದು, ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಜಕೀಯ ತಂತ್ರಗಳನ್ನು ಚಿತ್ರಿಸಲಾಗಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

ಎಂ.ಡಿ.ಒಬೇದುಲ್ಲಾ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ಕೊರೊನಾ ರೋಗಿಗಳ ನಿರ್ವಹಣೆಯಲ್ಲಿ ಸರ್ಕಾರ ವ್ಯವಹರಿಸುವಿಕೆಯ ರೀತಿ ಇದಾಗಿದೆ. ಕೇಂದ್ರ ಸರ್ಕಾರ ಮತ್ತು ಬಿಹಾರ ರಾಜ್ಯ ಸರ್ಕಾರದ ವಿಫಲತೆಯಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. #BiharrejectsModi” ಎಂದು ಬರೆದುಕೊಂಡಿದ್ದಾರೆ.

ಕಳೆದ 15 ವರ್ಷಗಳಿಂದಲೂ ಬಿಹಾರ ರಾಜ್ಯವು ನಿತೀಶ್ ಕುಮಾರ್ ಆಡಳಿತದಲ್ಲಿಯೇ ಇದೆ. ಆದರೂ ಯಾವುದೇ ಅಭಿವೃದ್ಧಿ ಕಂಡಿಲ್ಲ ಎಂಬುದಾಗಿ ವಿರೋಧ ಪಕ್ಷಗಳೂ ಸೇರಿದಂತೆ ಹಲವರು ಆರೋಪಿಸಿದ್ದಾರೆ. ಅದೂ ಅಲ್ಲದೇ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದರ ವಿರುದ್ಧವೂ ಈಗ ಜನ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಹಾರ ರಾಜಕೀಯ ವಲಯದಲ್ಲಿ ತೇಜಸ್ವಿ ಯಾದವ್, ಚಿರಾಗ್ ಪಾಸ್ವಾನ್ ಮತ್ತು ನಿತೀಶ್ ಕುಮಾರ್‌ ನಡುವೆ ಮಹಾ ಪೈಪೋಟಿ ನಡೆಯುತ್ತಿದೆ. ಎನ್‌ಡಿಎ ಮೈತ್ರಿಯಲ್ಲಿ ಬಿಜೆಪಿ, ‌ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳಿದ್ದವು. ಆದರೆ ನಿತೀಶ್ ಕುಮಾರ್‌ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಚಿರಾಗ್‌ ಪಾಸ್ವಾನ್ ಅವರ ಎಲ್‌ಜೆಪಿ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರಗುಳಿದಿದೆ. ಇದು ಬಿಜೆಪಿ ಮತ್ತು ನಿತೀಶ್ ಕುಮಾರ್‌ಗೆ ಹಿನ್ನಡೆಯನ್ನುಂಟುಮಾಡಿದೆ. ಇನ್ನು ತೇಜಸ್ವಿಯವರ ಆರ್‌ಜೆಡಿ ಮತ್ತು ಎಲ್ಲಾ ಎಡ ಪಕ್ಷಗಳೂ ಸೇರಿ ಮಹಾಘಟಬಂಂಧನ್ ರಚಿಸಿಕೊಂಡಿವೆ. ರಾಜ್ಯದಲ್ಲಿ ಇದಕ್ಕೆ ಉತ್ತಮ ಬೆಂಬಲವಿದೆ ಎನ್ನಲಾಗಿದೆ.

ಇದರ ನಡುವೆ ಎನ್‌ಡಿಎ ಮೈತ್ರಿಕೂಟದ ಪ್ರನಾಳಿಕೆಯಲ್ಲಿ ಉಚಿತ ಕೊರೊನಾ ಲಸಿಕೆಯ ವಿಷಯವನ್ನು ಪ್ರಸ್ತಾಪಿಸಿ ನಗೆಪಾಟಲಿಗೀಡಾಗಿದ್ದರು. ಜೊತೆಗೆ ಕೇಂದ್ರದಲ್ಲಿ ಬಿಜೆಪಿಯ ವೈಫಲ್ಯತೆ, ಆರ್ಥಿಕ ಕುಸಿತ, ಕೊರೊನಾ ನಿರ್ವಹಣೆ, ಸಿಎಎ, ಎನ್‌ಆರ್‌ಸಿ ಮುಂತಾದ ಎಲ್ಲಾ ಅಂಶಗಳೂ ಬಿಜೆಪಿಯ ವಿರುದ್ಧವಾಗಿದೆ. ಜೊತೆಗೆ ತೇಜಸ್ವಿ ಯಾದವ್ ತಮ್ಮ ರ್ಯಾಲಿಗಳಲ್ಲಿ ನಿತೀಶ್ ಮತ್ತು ಮೋದಿಯ ವಿರುದ್ಧ ತೀವ್ರವಾದ ವಾಗ್ದಾಳಿ ನಡೆಸುತ್ತಿದ್ದು ಉತ್ತಮ ಬೆಂಬಲ ಪಡೆಯುತ್ತಿದ್ದಾರೆ.

ಒಟ್ಟಾರೆಯಾಗಿ ಬಿಹಾರದ ಜನತೆ ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ನವೆಂಬರ್ 10 ರವರೆಗೆ ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪೂಂಚ್‌ನ ನ್ಯಾಷನಲ್ ಕಾನ್ಫರೆನ್ಸ್‌ ರ‍್ಯಾಲಿಯಲ್ಲಿ ಚಾಕುವಿನಿಂದ ದಾಳಿ; 3 ಮಂದಿಗೆ ಗಾಯ

0
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ನ್ಯಾಚನಲ್ ಕಾನ್ಫರೆನ್ಸ್‌ ಪಕ್ಷದ ರೋಡ್ ಶೋ ವೇಳೆ ಅಪರಿಚಿತ ದುಷ್ಕರ್ಮಿಗಳ ಚಾಕು ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೆಂಧರ್ ಪ್ರದೇಶದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ...