Homeಕರ್ನಾಟಕಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ಆರ್‌ಆರ್‌ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಎರಡೂವರೆ ಕೋಟಿ ರೂ. ಆಸ್ತಿ ಹೊಂದಿದ್ದರೆ, ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ.ವಿ ತಮ್ಮ ಮತ್ತು ಪತ್ನಿಯ ಆಸ್ತಿ ಸೇರಿ 19 ಕೋಟಿ ರೂ ಎಂದು ಘೋಷಿಸಿಕೊಂಡಿದ್ದಾರೆ.

- Advertisement -
- Advertisement -

ನವೆಂಬರ್ 3 ರಂದು ನಡೆಯಲಿರುವ ಆರ್‌.ಆರ್‌.ನಗರ, ಶಿರಾ ಉಚಚುನಾವಣೆ ನಡೆಯಲಿದೆ. ಇಷ್ಟು ದಿನ ಅಭ್ಯರ್ಥಿಗಳು ಯಾರು ಎಂಬುದು ಒಂಥರಾ ಕುತೂಹಲವಾಗಿದ್ದರೇ, ನಾಮಪತ್ರ ಸಲ್ಲಿಕೆ ನಂತರ ಅಭ್ಯರ್ಥಿಗಳ ಆಸ್ತಿ ವಿವರಗಳು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ರಾಜರಾಜೇಶ್ವರಿನಗರ ಉಪಚುನಾವಣೆಯ ಬಿಜೆಪಿಯ ಅಭ್ಯರ್ಥಿ, ಅನರ್ಹ ಶಾಸಕ ಮುನಿರತ್ನ ಅವರು ತಮ್ಮ ಚುನಾವಣಾ ಅಫಿಡವಿಟ್ ಸಲ್ಲಿಸಿದ್ದು, ಅಫಿಡವಿಟ್ ಪ್ರಕಾರ ಎರಡು ವರ್ಷಗಳಲ್ಲಿ ಮುನಿರತ್ನ ಅವರ ಆಸ್ತಿ ದುಪ್ಪಟ್ಟಾಗಿದೆ. ಕೆಲವೇ ವರ್ಷಗಳಲ್ಲಿ ಮುನಿರತ್ನ ನೂರು ಕೋಟಿ ಆಸ್ತಿಯ ಒಡೆಯನಾಗಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಮುನಿರತ್ನ ಆ ಸಮಯದಲ್ಲಿ ಅವರ ಹಾಗೂ ಅವರ ಪತ್ನಿ ಒಟ್ಟು 43.71 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಚುನಾವಣಾಧಿಕಾರಿಗೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ಈಗ ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸುವಾಗ ನೀಡಿರುವ ಪ್ರಮಾಣಪತ್ರದಲ್ಲಿ 89.13 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಮುನಿರತ್ನ ಅನೇಕ ಕಡೆಗಳಲ್ಲಿ ಕೃಷಿ ಭೂಮಿಯನ್ನು ಹೊಂದಿದ್ದು, ಅವುಗಳಲ್ಲಿ ಕೆಲವು ಈ ವರ್ಷದ ಸೆಪ್ಟೆಂಬರ್, ಆಗಸ್ಟ್, ಜುಲೈ ಮತ್ತು ಫೆಬ್ರವರಿಗಳಲ್ಲಿ ಖರೀದಿಸಲ್ಪಟ್ಟಿವೆ.

ಮುನಿರತ್ನ ಒಟ್ಟು 29.11 ಕೋಟಿ ರೂ. ಅವರ ಪತ್ನಿ ಮಂಜುಳಾ ₹ 40.97 ಲಕ್ಷ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ದಂಪತಿಯ ಆಸ್ತಿಯ ಮೌಲ್ಯ ಶೇಕಡ 103ರಷ್ಟು ಹೆಚ್ಚಳವಾಗಿದೆ.

ಚಲನಚಿತ್ರ ನಿರ್ಮಾಪಕರು ಆಗಿರುವ ಮುನಿರತ್ನ ಆದಾಯಕ್ಕಿಂತ ಸಾಲ ಹೆಚ್ಚಿದೆ ಎಂದು ಹೇಳಿಕೊಂಡಿದ್ದಾರೆ. ದಂಪತಿ ಒಟ್ಟು 46.41 ಕೋಟಿ ರೂ. ಮೊತ್ತದ ಸಾಲ ಹೊಂದಿದ್ದಾರೆ. ಜೊತೆಗೆ ವಿವಿಧ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ 21.37 ಕೋಟಿ ರೂಪಾಯಿ ಸಾಲ ನೀಡಿದ್ದಾರೆ.

ಮುನಿರತ್ನ ಬಳಿ 3,930 ಗ್ರಾಂ ಬಂಗಾರ, 111.27 ಕ್ಯಾರೆಟ್ ವಜ್ರ ಇದ್ದರೆ, ಬೆಳ್ಳಿ 40 ಕೆಜಿ ಇದೆ. ಅವರ ಪತ್ನಿ ಬಳಿ 4.40 ಲಕ್ಷ ಮೌಲ್ಯದ 360 ಗ್ರಾಂ ಬಂಗಾರವಿದೆ. ಮುನಿರತ್ನ ಬಳಿ 1.31 ಕೋಟಿ ಮೌಲ್ಯದ  30 ವಾಹನಗಳು ಅವರ ಬಳಿ ಇದ್ದು, ಹೆಂಡತಿಯ ಬಳಿ ಯಾವುದೇ ವಾಹನಗಳಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದ ಒಂದು ಪ್ರಕರಣ, ನಂಬಿಕೆ ದ್ರೋಹ, ಫೋರ್ಜರಿ, ಒಳಸಂಚು ಸೇರಿದಂತೆ ಜನರ ಪ್ರಾತಿನಿಧ್ಯ ಕಾಯ್ದೆಯಡಿ ತನ್ನ ವಿರುದ್ಧ ಮೂರು ಎಫ್‌ಐಆರ್‌ ಮತ್ತು ಐದು ಕ್ರಿಮಿನಲ್‌ ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇವೆ ಎಂದು ತಿಳಿಸಿದ್ದಾರೆ.

56 ವರ್ಷದ ಮುನಿರತ್ನ ಅವರು 2013 ಮತ್ತು 2018 ರ ಚುನಾವಣೆಯಲ್ಲಿ ರಾಜರಾಜೇಶ್ವರಿನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಗಳಿಸಿದರು. ನಂತರ ಬಿಜೆಪಿ ಸೇರಿದ್ದರು. ಕಳೆದ ವರ್ಷ ಅವರು ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ 17 ಜನ ಶಾಸಕರಲ್ಲಿ ಒಬ್ಬರಾಗಿದ್ದರು.

ಇನ್ನು ಆರ್‌ಆರ್‌ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಎರಡೂವರೆ ಕೋಟಿ ರೂ. ಆಸ್ತಿ ಮತ್ತು 20 ಲಕ್ಷ ರೂಪಾಯಿ ಸಾಲ ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ.ವಿ ತಮ್ಮ ಮತ್ತು ತಮ್ಮ ಪತ್ನಿಯ ಬಳಿಯ ಆಸ್ತಿ ಸೇರಿ 19 ಕೋಟಿ ರೂಪಾಯಿ ಎಂದು ಘೋಷಿಸಿಕೊಂಡಿದ್ದಾರೆ.


ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ....

0
ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು...