Homeಕರ್ನಾಟಕಶಾಸ್ತ್ರೀಯ ಭಾಷಾ ಸಂಸ್ಥೆ- ಕನ್ನಡಕ್ಕೆ ಅನ್ಯಾಯ: ಸಾಹಿತಿಗಳಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ಶಾಸ್ತ್ರೀಯ ಭಾಷಾ ಸಂಸ್ಥೆ- ಕನ್ನಡಕ್ಕೆ ಅನ್ಯಾಯ: ಸಾಹಿತಿಗಳಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ದೇವನೂರು ಮಹಾದೇವ, ಡಾ.ತಾರಿಣಿ ಶುಭದಾಯಿನಿ, ಎಸ್.ಎಲ್.ಭೈರಪ್ಪ, ಡಾ.ಸಬಿತಾ ಬನ್ನಾಡಿ ಸೇರಿದಂತೆ ಹಲವಾರು ಸಾಹಿತಿಗಳು ದೂರವಾಣಿ ಮತ್ತು ವಾಟ್ಸಾಪ್‌ನಲ್ಲಿ ಚರ್ಚಿಸಿಕೊಂಡು ಪತ್ರ ಬರೆದಿದ್ದಾರೆ.

- Advertisement -
- Advertisement -

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ಕನ್ನಡದ 25 ಸಾಹಿತಿಗಳು ಬಹಿರಂಗ ಪತ್ರ ಬರೆದಿದಿದ್ದಾರೆ.

ದೇವನೂರು ಮಹಾದೇವ, ಡಾ.ತಾರಿಣಿ ಶುಭದಾಯಿನಿ, ಎಸ್.ಎಲ್.ಭೈರಪ್ಪ, ಡಾ.ಸಬಿತಾ ಬನ್ನಾಡಿ ಸೇರಿದಂತೆ ಹಲವಾರು ಸಾಹಿತಿಗಳು ದೂರವಾಣಿ ಮತ್ತು ವಾಟ್ಸಾಪ್‌ನಲ್ಲಿ ಚರ್ಚಿಸಿಕೊಂಡು ಮುಖ್ಯಮಂತ್ರಿಗಳಿಗೆ ಕಳಿಸಿರುವ ಬಹಿರಂಗ ಪತ್ರವನ್ನು ಪತ್ರಿಕಾ ಹೇಳಿಕೆಯಾಗಿ ನೀಡಿದ್ದಾರೆ.

ಕರ್ನಾಟಕದ ಜನರ ಒತ್ತಾಸೆ, ಹೋರಾಟ ಮತ್ತು ಕನ್ನಡದ ಹಲವಾರು ಹಿರಿಯ ಸಾಹಿತಿಗಳೂ, ಕನ್ನಡಪರ ಹೋರಾಟಗಾರರೂ ದನಿಯೆತ್ತಿದ್ದರಿಂದ ಮೈಸೂರಿನಲ್ಲಿ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಪ್ರಾರಂಭಗೊಂಡು ಸುಮಾರು ಹತ್ತು ವರ್ಷಗಳಾಗಿವೆ. ಆದರೆ ತಮಿಳು ಮತ್ತು ತೆಲುಗು ಶಾಸ್ತ್ರೀಯ ಅಧ್ಯಯನ ವಿಭಾಗಗಳು ಬೆಳವಣಿಗೆ ಹೊಂದಿದ್ದಷ್ಟು ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಬೆಳೆಯದಿರುವುದಕ್ಕೆ ಕನ್ನಡದ ಸಾಹಿತಿಗಳು ವಿಷಾಧ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ವಿಳಂಬವಾಗಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸಿ.ಟಿ.ರವಿ ಅವರು ಪ್ರಯತ್ನಶೀಲರಾಗಿದ್ದರೂ ಅದಕ್ಕೆ ಭಾರತೀಯ ಭಾಷಾ ಸಂಸ್ಥಾನದ ಪ್ರಭಾರ ನಿರ್ದೇಶಕರಾದ ಪ್ರೊ.ಡಿ.ಜಿ.ರಾವ್ ಅವರು ಸ್ಪಂದಿಸುತ್ತಿಲ್ಲ ಎಂದು ಸಾಹಿತಿಗಳು ಹೇಳಿಕೆಯಲ್ಲಿ ದೂರಿದ್ದಾರೆ.

ಅಲ್ಲದೇ ನಿರ್ದೇಶಕರು ಶಾಸ್ತ್ರೀಯ ಕನ್ನಡವು ಸ್ವಾಯತ್ತತೆ ಪಡೆಯುವಷ್ಟು ಬೆಳವಣಿಗೆ ಆಗಿಲ್ಲವೆಂದು ಕೇಂದ್ರಕ್ಕೆ ತಪ್ಪು ಮಾಹಿತಿಯನ್ನು ನೀಡಿರುವುದು ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಭಾರತೀಯ ಭಾಷಾಜ್ಞಾನವುಳ್ಳ ಯಾರೂ ಕೂಡ ಹೀಗೆ ಬರೆಯಲು ಸಾಧ್ಯವಿಲ್ಲ. ಹೀಗೆ ಬರೆಯುವುದರ ಮೂಲಕ ಡಿ.ಜಿ.ರಾವ್ ಅವರು ಭಾರತೀಯ ಭಾಷಾ ಸಂಸ್ಥಾನಕ್ಕೂ, ಭಾಷಾ ವಿಜ್ಞಾನಕ್ಕೂ ಅವಮಾನ ಮಾಡಿದ್ದಾರೆ. ಮಾತ್ರವಲ್ಲದೆ, ಸ್ವಾಯತ್ತತೆಗೆ ಸಂಬಂಧಿಸಿದಂತೆ ಕೇಂದ್ರದ ಸಂಶೋಧನ ಕಾರ್ಯಗಳ ಪ್ರಗತಿಯನ್ನು ಹಿನ್ನಡೆಗೊಳಿಸುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ನಿಯಮಗಳಿಗೆ ವಿರುದ್ಧವಾಗಿ ಈಚೆಗೆ ಹಾಲಿ ಸಂಶೋಧನ ಸಿಬ್ಬಂದಿಯನ್ನು ಬದಲಿಸುವ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮಧ್ಯಪ್ರವೇಶಿಸಿ, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ಸ್ಥಾನಮಾನ ದೊರಕಿಸಿಕೊಳ್ಳಲು ತುರ್ತಾಗಿ ಕ್ರಮಕೈಗೊಳ್ಳುವುದು. ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಚಟುವಟಿಕೆಗಳಿಗೆ ಹಿನ್ನೆಡೆಯುಂಟು ಮಾಡುವ ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್) ಪ್ರಭಾರಿ ನಿರ್ದೇಶಕರು ಹೊರಡಿಸಿದ ಕಾನೂನುಬಾಹಿರವಾದ ಹೊಸ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆಯಲು ಸಂಬಂಧಪಟ್ಟವರಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರೊ. ನಂಜರಾಜೇ ಅರಸ್, ಜಿ.ಎಸ್.ಜಯದೇವ, ಪ್ರೊ. ಕೃಷ್ಣಮೂರ್ತಿ ಹನೂರು, ಡಾ.ಬಸವರಾಜ ಕಲ್ಗುಡಿ, ಪ.ಮಲ್ಲೇಶ್, ಡಾ.ಓ.ಎಲ್.ನಾಗಭೂಷಣಸ್ವಾಮಿ, ಡಾ.ಚಂದ್ರಶೇಖರ ನಂಗಲಿ, ಪ್ರೊ.ಎನ್.ಬೋರಲಿಂಗಯ್ಯ,
ಡಾ.ರಾಜಪ್ಪ ದಳವಾಯಿ, ಡಾ.ಕಾಳೇಗೌಡ ನಾಗವಾರ, ಜಿ.ಪಿ.ಬಸವರಾಜ, ಡಾ.ಅರವಿಂದ ಮಾಲಗತ್ತಿ, ಡಾ.ನಟರಾಜ್ ಬೂದಾಳು, ನಾ.ದಿವಾಕರ, ಡಾ.ವೀರಣ್ಣ ರಾಜೂರ, ವೆಂಕಟೇಶ ಮಾಚಕನೂರು, ಡಾ.ಬಸವರಾಜ್ ಮೈಸೂರು, ಡಾ.ಬಸವರಾಜ ಸಾದರ, ಡಾ.ದೇವರ ಕೊಂಡಾರೆಡ್ಡಿ, ಡಾ.ಕೇಶವ ಶರ್ಮ, ಪ್ರೊ. ಪಂಡಿತಾರಾಧ್ಯ ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ ಇತರರಾಗಿದ್ದಾರೆ.


ಇದನ್ನೂ ಓದಿ: ಕರ್ನಾಟಕ ಸಂಗೀತ, ಕನ್ನಡ ಮತ್ತು ಕನ್ನಡಿಗರು: ಹತ್ತೊಂಬತ್ತನೇ ಶತಮಾನದ ಮೈಸೂರು ಸಂಸ್ಥಾನದ ಕೆಲವು ನೋಟಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡ ವಿರೋಧಿ ಡಿ.ಜಿ.ರಾವ್ ಮೊದಲು ಸಿಐಐಎಲ್ ನಿಂದ ತೊಲಗಬೇಕು.

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...