Homeಅಂತರಾಷ್ಟ್ರೀಯಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕರೋನ ವೈರಸ್ ವಿರುದ್ಧ ಹೋರಾಡಲು "ಸಾರ್ಕ್" ದೇಶಗಳ ಒಗ್ಗಟ್ಟು..

- Advertisement -
- Advertisement -

ಕರೋನ ವೈರಸ್ ಹಾಗೂ ಸಾಂಕ್ರಾಮಿಕ ರೋಗಗಳ ವಿರುದ್ಧ ಒಟ್ಟಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ ಒಂದು ದಿನದ ನಂತರ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರ ಟ್ವೀಟ್ಟರ್‌ನಲ್ಲಿ  “ಕೊರೋನ ವೈರಸ್ ವಿರುದ್ಧ ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಸಂಘಟಿತ ಪ್ರಯತ್ನಗಳ ಅಗತ್ಯವಿದೆ. ಈ ವಿಷಯದ ಬಗ್ಗೆ ಸಾರ್ಕ್ ಸದಸ್ಯ ರಾಷ್ಟ್ರಗಳ ವೀಡಿಯೊ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿಯ ವಿಶೇಷ ಸಹಾಯಕ ಇರಲಿದ್ದಾರೆ” ಎಂದು ಟ್ವೀಟ್ ಮಾಡಲಾಗಿದೆ.

ಪಾಕಿಸ್ತಾನ ತನ್ನ ನೆರೆಹೊರೆಯವರಿಗೆ ನೆರವು ನೀಡಲು ಸಿದ್ಧವಾಗಿದೆ ಎಂದು ವಕ್ತಾರರು ಈ ಹಿಂದೆ ಹೇಳಿದ್ದರು.  ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈಗಾಗಲೇ ಕರೋನ ವೈರಸ್ ವಿರುದ್ಧ ರಾಷ್ಟ್ರೀಯ ಭದ್ರತೆಯ ಕುರಿತು ತುರ್ತು ಸಭೆಯನ್ನು ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ವಿಶ್ವಾದ್ಯಂತ 5,000 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ಹಾಗೂ 1.3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ ಕರೋನ ವೈರಸ್ ವಿರುದ್ದ ಹೋರಾಡಲು ಭಾರತದ ನೆರೆಹೊರೆಯವರು ಕೈಜೋಡಿಸಬೇಕೆಂದು ಶುಕ್ರವಾರ ಪ್ರಧಾನಿ ಮೋದಿ ಒತ್ತಾಯಿಸಿದ್ದರು.

“ಸಾರ್ಕ್ ರಾಷ್ಟ್ರಗಳ ನಾಯಕತ್ವವು ಕರೋನವೈರಸ್ ವಿರುದ್ಧ ಹೋರಾಡಲು ಬಲವಾದ ಕಾರ್ಯತಂತ್ರವನ್ನು ರೂಪಿಸುತ್ತದೆ ಎಂದು ನಾನು ಪ್ರಸ್ತಾಪಿಸಲು ಬಯಸುತ್ತೇನೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಾಗರಿಕರನ್ನು ಆರೋಗ್ಯವಾಗಿಡುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಬಹುದು” ಎಂದು ಪ್ರಧಾನಿ ಟ್ವೀಟ್ ಮಾಡಿದ್ದರು.

ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ ಮತ್ತು ಶ್ರೀಲಂಕಾ ದೇಶಗಳು “ಸಾರ್ಕ್” ಸದಸ್ಯರಾಗಿದ್ದಾರೆ.

ಪ್ರಧಾನ ಮಂತ್ರಿಯ ಕರೆಗೆ ಭೂತಾನ್‌ನ ಪ್ರಧಾನ ಮಂತ್ರಿ ಲೋಟೇ ತ್ಸೆರಿಂಗ್ ಉತ್ತರಿಸುತ್ತಾ: ” ಇಂತಹ ಕಾಲದಲ್ಲಿ ನಾವು ಒಗ್ಗೂಡಬೇಕು. ಸಣ್ಣ ಆರ್ಥಿಕತೆಗಳಿಗೆ ತೀವ್ರ ಹೊಡೆತ ಬಿದ್ದಿದೆ, ಆದ್ದರಿಂದ ವೀಡಿಯೋ ಕಾನ್ಫ್ರೆನ್ಸ್ ಗಾಗಿ ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷೆ ಗೋಟಬಯಾ ರಾಜಪಕ್ಸೆ ಕೂಡ ಪ್ರತಿಕ್ರಿಯಿಸಿ “ಶ್ರೀ ನರೇಂದ್ರ ಮೋದಿಯವರ ಆಹ್ವಾನಕ್ಕೆ ಧನ್ಯವಾದಗಳು. ಶ್ರೀಲಂಕಾ ಚರ್ಚೆಗೆ ಸೇರಲು, ಕಲಿಕೆಗಳನ್ನು ಮತ್ತು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಮತ್ತು  ಕಲಿಯಲು ಸಿದ್ಧರಿದ್ದೇವೆ. ಈ ಪ್ರಯತ್ನದ ಸಮಯದಲ್ಲಿ ಒಗ್ಗಟ್ಟಿನಲ್ಲಿರೋಣ ಮತ್ತು ನಮ್ಮ ನಾಗರಿಕರನ್ನು ಸುರಕ್ಷಿತವಾಗಿರಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಸಾರ್ಕ್ ಪ್ರದೇಶದಲ್ಲಿ 126 ಪ್ರಕರಣಗಳಿವೆ; ಭಾರತದಲ್ಲಿ 82 ಮತ್ತು ಪಾಕಿಸ್ತಾನದಲ್ಲಿ 20 ಕರೋನ ವೈರಸ್ ಪ್ರಕರಣಗಳಿವೆ. ಭಾರತ ತನ್ನ ಮೊದಲ ವೈರಸ್ ಸಂಬಂಧಿತ ಸಾವನ್ನು ಗುರುವಾರ ಕರ್ನಾಟಕದಲ್ಲಿ ವರದಿ ಮಾಡಿತ್ತು ಮತ್ತು ಎರಡನೇ ಸಾವು ಶುಕ್ರವಾರ ರಾತ್ರಿ ದೆಹಲಿಯಲ್ಲಿ ವರದಿಯಾಗಿದೆ. ಇತರ ಸಾರ್ಕ್ ದೇಶಗಳಿಂದ ಈವರೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...