ಬುಧವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಮತ್ತು ಅವರ ಸ್ಥಿತಿ ಹದಗೆಟ್ಟರೆ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಸತ್ಯೇಂದರ್ ಜೈನ್ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಮತ್ತು ಹೆಚ್ಚಿನ ಜ್ವರದಿಂದ ಬಳಲುತ್ತಿದ್ದಾರೆ. ಅವರಿಗೆ ನ್ಯುಮೋನಿಯಾವನ್ನು ಸಹ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಶೀಘ್ರ ಚೇತರಿಸಿಕೆ ಗೃಹ ಸಚಿವ ಅಮಿತ್ ಶಾ ಹಾರೈಸಿದ್ದಾರೆ. “COVID-19 ಸೋಂಕಿನೊಂದಿಗೆ ಹೋರಾಡುತ್ತಿರುವ ದೆಹಲಿಯ ಆರೋಗ್ಯ ಸಚಿವ ಶ್ರೀ ಸತ್ಯೇಂದ್ರ ಜೈನ್ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
Praying for the speedy recovery of Shri Satyendra Jain, Health Minister of Delhi who is battling with COVID-19 infection.
— Amit Shah (@AmitShah) June 19, 2020
ಉನ್ನತ ಮಟ್ಟದ ಜ್ವರದಿಂದ ಬಳಲುತ್ತಿರುವ ಮತ್ತು ಆಮ್ಲಜನಕ ಮಟ್ಟದಲ್ಲಿ ಹಠಾತ್ ಕುಸಿತದಿಂದ ಆರೋಗ್ಯ ಸಚಿವರನ್ನು ದೆಹಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ (ಆರ್ಜಿಎಸ್ಎಸ್ಎಚ್) ದಾಖಲಾಗಿಸಲಾಗಿತ್ತು. ಈಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಗ್ಯ ಸಚಿವರ ಮೊದಲ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಎರಡನೇ ವರದಿಯಲ್ಲಿ ಪಾಸಿಟಿವ್ ಬಂದ ನಂತರ “ಇಂದು ನನ್ನ ಕೋವಿಡ್ ಪರೀಕ್ಷೆಯು ಸಕಾರಾತ್ಮಕ ಎಂದು ಕಂಡುಬಂದಿದೆ” ಎಂದು ಅವರು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದರು.
“ಅವರ ಸ್ಥಿತಿ ಸುಧಾರಿಸದಿದ್ದಲ್ಲಿ ಅವರನ್ನು ದೊಡ್ಡದಾದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಬಹುದೇ ಎಂದು ನಾವು ಅನ್ವೇಷಿಸುತ್ತಿದ್ದೇವೆ” ಎಂದು ವೈದ್ಯರೊಬ್ಬರು ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ: PUC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್!: ಎಸ್ಎಸ್ಎಲ್ಸಿ ಪರೀಕ್ಷೆ ಬೇಕಾ?