ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣಕ್ಕೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಬಂದು ಹೋದನೆಂಬ ಶಂಕೆಯ ಹಿನ್ನೆಲೆಯಲ್ಲಿ ಇಡೀ ಸಭಾಂಗಣವನ್ನು ಸ್ಯಾನಿಟೈಜರ್ ನಿಂದ ಶುಚಿಗೊಳಿಸಲಾಯಿತು.
ಜಿಪಂ ಸಭಾಂಗಣಕ್ಕೆ ಬಂದು ಹೋದ ಕೊರೊನ ಸೋಂಕಿತ ವ್ಯಕ್ತಿ ಯಾರೆಂಬುದು ಪತ್ತೆಯಾಗಿಲ್ಲ. ಹಾಗಾಗಿ ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಸೋಂಕಿತ ವ್ಯಕ್ತಿ ಬೇಟಿ ನೀಡಿದ್ದನೆಂಬ ಸುದ್ದಿ ಹರಡುತ್ತಿದ್ದಂತೆಯೇ ಸಿಇಒ ಶುಭಕಲ್ನಾಣ್ ನೇತೃತ್ವದಲ್ಲಿ ಸ್ನಾನಿಟೈಜ್ ಮಾಡಲಾಯಿತು.
ಹೀಗಾಗಿ ಸಿಬ್ಬಂದಿ ಹೊರಗೆ ಕುಳಿತು ಹರಟುತ್ತಿದ್ದ ಸನ್ನಿವೇಶ ಕಂಡುಬಂತು.
ಕರ್ನಾಟಕದಲ್ಲಿ ನಿನ್ನೆಯವರೆಗೆ ಒಟ್ಟು 15,242 ಪ್ರಕರಣಗಳು ವರದಿಯಾಗಿದ್ದು, ಇದುವರೆಗೆ 246 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನದಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಭಾರತದಾದ್ಯಂತ ನಿನ್ನೆಯವರೆಗೆ ಒಟ್ಟು 5.85 ಲಕ್ಷ ಪ್ರಕರಣಗಳು ವರದಿಯಾಗಿವೆ.
ಇದನ್ನೂ ಓದಿ: ತುಮಕೂರು ಫುಡ್ ಪಾರ್ಕ್ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!
ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!
ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ