HomeಮುಖಪುಟJNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

JNU ಭೇಟಿ ಬಳಿಕ ದೀಪಿಕಾ ಪಡುಕೋಣೆಯ ಸ್ಕಿಲ್‌ ಇಂಡಿಯಾ ಪ್ರೊಮೊ ವಿಡಿಯೋ ಕೈಬಿಟ್ಟ ಸಚಿವಾಲಯ!

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ದೀಪಿಕಾ ಪಡುಕೋಣೆ ಅಚ್ಚರಿಯ ಭೇಟಿ ನೀಡಿದ ಎರಡು ದಿನಗಳ ನಂತರ, ನರೇಂದ್ರ ಮೋದಿ ಸರ್ಕಾರದ ಕೌಶಲ್ಯ ಅಭಿವೃದ್ಧಿ ಸಚಿವಾಲಯವು ದೀಪಿಕಾರವರ ಪ್ರಚಾರದ ವೀಡಿಯೊವನ್ನು ಕೈಬಿಟ್ಟಿದೆ. ಆಸಿಡ್ ದಾಳಿಯ ಸಂತ್ರಸ್ತರು ಮತ್ತು ಸ್ಕಿಲ್ ಇಂಡಿಯಾ ಬಗ್ಗೆ ನಟಿ ಮಾತನಾಡಿದ್ದ ವಿಡಿಯೋ ಅದಾಗಿದೆ.

“ಸ್ಕಿಲ್ ಇಂಡಿಯಾವನ್ನು ಉತ್ತೇಜಿಸುವ ಪ್ರಚಾರದ ವೀಡಿಯೊವನ್ನು ಬುಧವಾರ ದೀಪಿಕಾ ಪಡುಕೋಣೆ ಬಿಡುಗಡೆ ಮಾಡಬೇಕಿತ್ತು. ಇದನ್ನು ಶ್ರಮ ಶಕ್ತಿ ಭವನ (ಸಚಿವಾಲಯ ಕಚೇರಿ) ಯಲ್ಲಿಯೂ ಪ್ರಸಾರ ಮಾಡಲಾಗುತ್ತಿತ್ತು. ಆದರೆ ಮಂಗಳವಾರದ ಘಟನೆಗಳ ಸರಣಿಯ ನಂತರ ವೀಡಿಯೊವನ್ನು ಥಟ್ಟನೆ ಕೈಬಿಡಲಾಯಿತು ”ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ದಿ ಪ್ರಿಂಟ್‌ಗೆ ತಿಳಿಸಿದ್ದಾಗಿ ವರದಿಯಾಗಿದೆ.

ಆದಾಗ್ಯೂ, ಸಚಿವಾಲಯವು ಗುರುವಾರ ವೀಡಿಯೊ ಬಿಡುಗಡೆ ಕುರಿತು ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಸ್ಕಿಲ್ ಇಂಡಿಯಾದ 45 ಸೆಕೆಂಡುಗಳ ಪ್ರಚಾರದ ವಿಡಿಯೋದಲ್ಲಿ ಪಡುಕೋಣೆ ಅವರು ದೇಶದ ಎಲ್ಲ ನಾಗರಿಕರಿಗೆ ಸಮಾನ ಅವಕಾಶಗಳ ಬಗ್ಗೆ ಮಾತನಾಡುತ್ತಾ, ಶುಕ್ರವಾರ ಬಿಡುಗಡೆಯಾಗಲಿರುವ ಆಸಿಡ್ ದಾಳಿಯ ಸಂತ್ರಸ್ತರ ಜೀವನಚರಿತ್ರೆಯ ಕುರಿತ ತನ್ನ ಚಲನಚಿತ್ರವಾದ ಚಪಾಕ್ ಮೇಲೆ ಚಿತ್ರಿಸಿದ್ದಾರೆ. ವೀಡಿಯೊ ತಯಾರಿಸುವ ಮೊದಲು ಆಸಿಡ್ ದಾಳಿಯ ಸಂತ್ರಸ್ತರೊಂದಿಗೆ ಪಡುಕೋಣೆ ಅವರ ಭೇಟಿಗೆ ಕೌಶಲ್ಯ ಸಚಿವಾಲಯ ಅನುಕೂಲ ಮಾಡಿಕೊಟ್ಟಿತ್ತು.

ಈ ಕುರಿತ ಪ್ರಶ್ನೆಗೆ ಸಚಿವಾಲಯವು ಪಡುಕೋಣೆ ಅವರೊಂದಿಗೆ ಯಾವುದೇ ಔಪಚಾರಿಕ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಿದೆ.

“ಸ್ಕಿಲ್ ಇಂಡಿಯಾದ ಸಂವಹನ ಮತ್ತು ಪ್ರಚಾರ ಚಟುವಟಿಕೆಯ ಅಡಿಯಲ್ಲಿ ನಿಯಮಿತ ಪ್ರಕ್ರಿಯೆಯ ಭಾಗವಾಗಿ, ತಂಡವು ಪರಸ್ಪರ ಪ್ರಚಾರಕ್ಕಾಗಿ ಮಾಧ್ಯಮ ಸಂಸ್ಥೆಗಳಿಂದ ವಿಚಾರಗಳನ್ನು ಪಡೆಯುತ್ತಲೇ ಇರುತ್ತದೆ. ಚಿತ್ರದ ವಿಷಯವನ್ನು ಪ್ರಚಾರ ಮಾಡಲು ಚಪಾಕ್‌ ಚಿತ್ರ ನಿರ್ಮಾಣ ತಂಡವು ಸ್ಕಿಲ್ ಇಂಡಿಯಾವನ್ನು ಸಂಪರ್ಕಿಸಿತ್ತು” ಎಂದು ಸಚಿವಾಲಯ ತಿಳಿಸಿದೆ.

“ಚಲನಚಿತ್ರದ ನಟರು ಕೆಲವು ಆಸಿಡ್ ದಾಳಿಯ ಸಂತ್ರಸ್ತರು ಮತ್ತು ನಮ್ಮ ಪರಿಸರ ವ್ಯವಸ್ಥೆಯಿಂದ ವಿಶೇಷ-ಚೇತನ ಅಭ್ಯರ್ಥಿಗಳನ್ನು ಭೇಟಿ ಮಾಡಿದ್ದಾರೆ, ಅವರು ಸ್ಕಿಲ್ ಇಂಡಿಯಾ ಫಲಾನುಭವಿಗಳಾಗಿದ್ದು ಅವರು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಈ ಮೊದಲು, ಸಚಿವಾಲಯದ ಮಾಧ್ಯಮ ಸಲಹೆಗಾರ “ವೀಡಿಯೊವನ್ನು ದೀಪಿಕಾ ತಂಡವು ಸಲ್ಲಿಸಿದೆ” ಮತ್ತು ಅದನ್ನು “ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ತಿಳಿಸಿತ್ತು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಮಂಗಳವಾರ ಭೇಟಿ ನೀಡಿದ ನಂತರ ದೀಪಿಕಾ ಪಡುಕೋಣೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾಗಿದ್ದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಅವರನ್ನು ದೀಪಿಕಾ ಭೇಟಿಯಾಗಿದ್ದರು.

ಪಡುಕೋಣೆ ಕ್ಯಾಂಪಸ್‌ನಲ್ಲಿದ್ದಾಗ ಯಾವುದೇ ಹೇಳಿಕೆ ನೀಡಲಿಲ್ಲ. ತದನಂತರ ಅವರು ಸುದ್ದಿ ಚಾನೆಲ್ ಆಜ್ ತಕ್‌ ಜೊತೆ ಮಾತನಾಡಿ “ದೇಶದ ಪರಿಸ್ಥಿತಿ ನನಗೆ ನೋವುಂಟುಮಾಡಿದೆ. ಜೆಎನ್‌ಯು ಹಿಂಸೆಯ ಪ್ರಕರಣದಲ್ಲಿ ಯಾವುದೇ ಕ್ರಮವಿಲ್ಲ ತೆಗೆದುಕೊಂಡಿಲ್ಲ ಎಂದು ಕೋಪ ವ್ಯಕ್ತಪಡಿಸಿದ ಅವರು ದೆಹಲಿ ಪೊಲೀಸರು ಇನ್ನೂ ಯಾರನ್ನು ಬಂಧಿಸಿಲ್ಲ ಎಂದು ನೋವು ವ್ಯಕ್ತಪಡಿಸಿದ್ದರು.

ಜೆಎನ್‌ಯು ಭೇಟಿಯ ನಂತರ ಬಿಜೆಪಿ ನಾಯಕರ ಒಂದು ಭಾಗವು ನಟಿಯ ವಿರುದ್ಧ ಮಾತನಾಡಿ ಅವರು “ತುಕ್ಡೆ ತುಕ್ಡೆ ಗ್ಯಾಂಗ್” ಅನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು. ಕೆಲವರು ಚಪಾಕ್ ಬಹಿಷ್ಕಾರಕ್ಕೆ ಒತ್ತಾಯಿಸಿದರು. ಆದರೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಯಾರಾದರೂ ಎಲ್ಲಿ ಬೇಕಾದರೂ ಹೋಗಬಹುದು ಮತ್ತು ಯಾವುದೇ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದರು.

ಸ್ಕಿಲ್ ಇಂಡಿಯಾ ಪ್ರಚಾರ

ಕೌಶಲ್ಯ ಅಭಿವೃದ್ಧಿ ಸಚಿವಾಲಯವು ಈ ಹಿಂದೆ ಇತರ ಬಾಲಿವುಡ್ ತಾರೆಯರ ಸೇವೆಗಳನ್ನು ತನ್ನ ಯೋಜನೆಗಳ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

2018 ರಲ್ಲಿ, ನಟರಾದ ವರುಣ್ ಧವನ್ ಮತ್ತು ಅನುಷ್ಕಾ ಶರ್ಮಾ ತಮ್ಮ ಚಲನಚಿತ್ರ ಸುಯಿ ಧಾಗಾ: ಮೇಡ್ ಇನ್ ಇಂಡಿಯಾ ಬಿಡುಗಡೆಯ ಸಮಯದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮವನ್ನು ಪ್ರಚಾರ ಮಾಡಿದ್ದರು. ಪ್ರಚಾರದ ವೀಡಿಯೊಗಳಲ್ಲಿ, ಧವನ್ ಮತ್ತು ಶರ್ಮಾ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ, ಐಟಿಐ ಮತ್ತು ಅಪ್ರೆಂಟಿಸ್‌ಶಿಪ್ ಯೋಜನೆಗಳ ಕುರಿತು ಮಾತನಾಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...