Homeನಿಜವೋ ಸುಳ್ಳೋಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು...

ಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು..

- Advertisement -
- Advertisement -

ತಮ್ಮ ವಿರೋಧಿಗಳ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅಥವಾ ತಮ್ಮ ಕೆಟ್ಟ ಕೆಲಸಗಳನ್ನು ಮುಚ್ಚಿಹಾಕಲು ಫೇಕ್‌ ನ್ಯೂಸ್‌ಗಳನ್ನು ಹಲವಾರು ಜನ ಹರಡುತ್ತಿದ್ದಾರೆ. ಆದರೆ ಅದೇ ಫೇಕ್‌ನ್ಯೂಸ್‌ಗಳು ಒಂದು ದಿನ ತಮ್ಮ ವಿರುದ್ಧವೇ ತಿರುಗಿಬೀಳಬಹುದೆಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ.. ಅದು ಈ ದೇಶದ ಗೃಹಮಂತ್ರಿ, ಅತಿ ದೊಡ್ಡ ಪಕ್ಷದ ಅಧ್ಯಕ್ಷ ಅಮಿತ್‌ ಶಾರವರೆ ಅದಕ್ಕೆ ಬಲಿಯಾಗಿದ್ದಾರೆ.

ಅಂದು ಕಾಂಗ್ರೆಸ್ ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡಿತು: ಅಮಿತ್ ಶಾ

ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ವೇಳೆ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್ ಶಾ ಅಂದು 1947ರಲ್ಲಿ ಕಾಂಗ್ರೆಸ್ ಭಾರತವನ್ನು ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡದಿದ್ದರೆ ಇಂದು ಈ ಮಸೂದೆಯ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಇವರ ಈ ಹೇಳಿಕೆ ನಿಜವೇ? ಭಾರತ ಪಾಕಿಸ್ತಾನ ವಿಭಜನೆಗೆ ಕಾಂಗ್ರೆಸ್‌ ಕಾರಣವೇ ಎಂದು ಹುಡುಕಹೊರಟರೆ ಮೇಲ್ನೋಟಕ್ಕೆ ಅದು ಸುಳ್ಳು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

1947ರಲ್ಲಿ ಜೆ.ಬಿ ಕೃಪಲಾನಿಯವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅದಕ್ಕೂ ಒಂದು ವರ್ಷದ ಮೊದಲು ಜವಹಾರಲಾಲ್‌ ನೆಹರು ಅಧ್ಯಕ್ಷರಾಗಿದ್ದರು. ಇವರೆಲ್ಲರೂ ಭಾರತದ ವಿಭಜನೆಗೆ ವಿರುದ್ಧವಾಗಿದ್ದರು. ಎಲ್ಲಕ್ಕಿಂತ ಹೆಚ್ಚು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತ ವಿಭಜನೆಯ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ವಾಸ್ತವವೆಂದರೆ ಹಾಲಿ ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ನ ಮೊಹಮ್ಮದ್ ಆಲಿ ಜಿನ್ನಾ ಧಾರ್ಮಿಕ ಆಧಾರದ ಮೇಲೆ ಭಾರತ ಪಾಕಿಸ್ತಾನ ವಿಭಜನೆಯನ್ನು ಬೆಂಬಲಿಸಿದವರು. ಆದರೆ ಕಾಂಗ್ರೆಸ್ ವಿಭಜನೆಗೆ ವಿರುದ್ಧವಾಗಿತ್ತು ಎಂದು ಅಮಿತ್‌ ಶಾ ಸುಳ್ಳು ಹೇಳಿದ್ದಾರೆ. ಆ ಮೂಲಕ ಜನರಲ್ಲಿ ಕಾಂಗ್ರೆಸ್‌ ವಿರೋಧಿ ಮನೋಭಾವವನ್ನು ಬಿತ್ತುವುದು ಮತ್ತು ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ಪಡೆಯುವುದು ಅವರ ಉದ್ದೇಶವಾಗಿದೆ.

ಸತ್ಯ ಏನೆಂದರೆ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾರತ ವಿಭಜನೆಯನ್ನು ತಡೆಯಲು ಅತ್ಯುತ್ತಮ ಪ್ರಯತ್ನ ಮಾಡಿದ್ದರು..

ಈ ಸುಳ್ಳನ್ನು ಅಮಿತ್‌ ಶಾರವರು ಪಾರ್ಲಿಮೆಂಟ್‌ನಲ್ಲಿ ಹೇಳುತ್ತಿರುವಾಗಲೇ ಅವರ ಕುರಿತೇ ಇನ್ನೊಂದು ಸುಳ್ಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅದೆನೆಂದು ಓದಿಬಿಡಿ

ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿಯ ಕಾಲಿಗೆ ಬಿದ್ದ ಗೃಹ ಸಚಿವ  ಅಮಿತ್ ಶಾ..

ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಲ್ಲಿ ಭಾಗಿಯಾಗಿರುವ ನಿತ್ಯಾನಂದ ಸ್ವಾಮಿ ದೇಶಬಿಟ್ಟು ಓಡಿ ಹೋಗಿದ್ದಾರೆ. ಆದರೆ ಅವರನ್ನು ಟ್ರೋಲ್ ಮಾಡುವ ಪೋಸ್ಟ್‌ಗಳು ಮಾತ್ರ ಹೆಚ್ಚು ಹೆಚ್ಚು ಓಡಾಡುತ್ತಿವೆ. ಅದರಲ್ಲಿ ಹೆಚ್ಚು ಟ್ರೋಲ್ ಆಗಿರುವುದು ಗೃಹ ಸಚಿವ ಅಮಿತ್ ಶಾರವರು ನಿತ್ಯಾನಂದ ಸ್ವಾಮಿಯ ಕಾಲಿಗೆ ಬೀಳುತ್ತಿರುವ ಪೋಸ್ಟ್ ವೈರಲ್ ಆಗಿದೆ.

ದೇಶದ ಗೃಹಮಂತ್ರಿಗಳು ಆರೋಪಿಯನ್ನು ಜೈಲಿಗೆ ಕಳಿಸುವುದು ಬಿಟ್ಟು ಅವರ ಕಾಲಿಗೆ ಬೀಳುತ್ತಿದ್ದಾರೆ. ಈಗಾದರೆ ಭಾರತದ ಪರಿಸ್ಥಿತಿ ಉದ್ದಾರ ಎಂದು ಜನ ಟ್ರೋಲ್‌ ಮಾಡಿದ್ದಾರೆ. ನೂರಾರು ಜನ ಈ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಷೇರ್‌ ಮಾಡಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರ್‌ ಫ್ಯಾಕ್ಟ್‌ ಚೆಕ್‌ ಮಾಡಿದಾಗ ತಿಳಿದು ಬಂದ ಸತ್ಯ ಏನೆಂದರೆ ಆ ಫೋಟೊದಲ್ಲಿರುವ ವ್ಯಕ್ತಿ ಅಮಿತ್‌ ಶಾ ಅಲ್ಲ. ಅವರು ಅಮಿತ್ ಶಾರಂತೆ ಕಂಡರೂ ಸಹ ಅವರು ಮಾರಿಷಸ್‌ನ ಕಮಿಷನರ್ ಜಗದೀಶ್ವರ್‌ ಗೋಬುರ್ದನ್‌ ಆಗಿದ್ದಾರೆ. ಅವರು ನಿತ್ಯಾನಂದ ಸ್ವಾಮಿಯ ಆಶ್ರಮಕ್ಕೆ ಭೇಟಿ ನೀಡಿದ್ದಾಗ ಅವರು ಪಾದಕ್ಕೆರಗಿದ್ದರು. ಆ ಫೋಟೊವನ್ನು ತಪ್ಪಾಗಿ ಅಮಿತ್ ಶಾ ಎಂದು ಗುರುತಿಸಲಾಗಿದೆ.

ಅವರನ್ನು ಸ್ಪಷ್ಟವಾಗಿ ಗುರುತಿಸುವ ಒರಿಜಿನಲ್ ಫೋಟೊ ಇಲ್ಲಿದೆ ನೋಡಿ.

ಹಾಗಾಗಿ ಷೇರ್‌ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಬೇಕಾಗಿದೆ. ನಾವು ಯಾವುದೇ ಕಾರಣಕ್ಕೂ ಫೇಕ್‌ನ್ಯೂಸ್‌ಗಳನ್ನು ಷೇರ್ ಮಾಡಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಅಮಿತ್‌ ಶಾ ರಂತವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸುಳ್ಳನ್ನು ಹೇಳಬಾರದು. ಸುಳ್ಳು ಹೇಳದಿದ್ದವರ ವಿರುದ್ಧವೂ ಫೇಕ್‌ನ್ಯೂಸ್‌ಗಳು ಬರುತ್ತಿರುವುದು ನಿಜ. ಆದರೆ ನಮ್ಮನ್ನು ನಾವು ಸುಳ್ಳು ಹೇಳದಂತೆ, ಫೇಕ್‌ನ್ಯೂಸ್‌ ಹಂಚದಂತೆ ನೋಡಿಕೊಂಡರೆ ಈ ಸಮಸ್ಯೆಗೆ ಸ್ವಲ್ಪ ಪರಿಹಾರ ಸಿಗಬಹುದು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

0
ಜೆಡಿಯು ಯುವ ಮುಖಂಡನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ  ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಸೌರಭ್ ಕುಮಾರ್ ಹತ್ಯೆಗೀಡಾದ ಜೆಡಿಯು ಯುವ ಮುಖಂಡ....