Homeಮುಖಪುಟಮೋದಿಗೆ ಚೀನಾದ ಹೆಸರು ಉಚ್ಚರಿಸಲು ಭಯ: ರಣದೀಪ್ ಸುರ್ಜೇವಾಲ

ಮೋದಿಗೆ ಚೀನಾದ ಹೆಸರು ಉಚ್ಚರಿಸಲು ಭಯ: ರಣದೀಪ್ ಸುರ್ಜೇವಾಲ

ಇಂದು, ಇಂತಹ ಸ್ವಾತಂತ್ರ್ಯದ ಮೇಲೆ ಆಕ್ರಮಣ ಮಾಡುವವರ ವಿರುದ್ಧ ನಿರ್ಣಾಯಕ ಯುದ್ಧವನ್ನು ಧ್ವನಿಸುವ ಪ್ರತಿಜ್ಞೆಯನ್ನು ನಾವೆಲ್ಲರೂ ತೆಗೆದುಕೊಳ್ಳಬೇಕು. ಇದು ನಿಜವಾದ ರಾಷ್ಟ್ರೀಯತೆಯಾಗಿರುತ್ತದೆ.

- Advertisement -
- Advertisement -

ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಚೀನಾವನ್ನು ಹೆಸರಿಸದ ಟೀಕಿಸಿದ ಕಾರಣಕ್ಕಾಗಿ ಕಾಂಗ್ರೆಸ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದೆ. ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವ ಚೀನಾದ ಪಡೆಗಳನ್ನು ಹಿಂದಕ್ಕೆ ಕಳುಹಿಸಲು ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಎಂದು ಜನರಿಗೆ ತಿಳಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

ಸರ್ಕಾರದ ‘ಆತ್ಮನಿರ್ಭರ್ (ಸ್ವಾವಲಂಬಿ)’ ಘೋಷಣೆಯನ್ನು ಟೀಕಿಸುತ್ತಾ, 32 ಸಾರ್ವಜನಿಕ ವಲಯದ ಉದ್ಯಮಗಳನ್ನು ಮಾರಾಟ ಮಾಡಿ, ರೈಲ್ವೆ ಮತ್ತು ವಿಮಾನ ನಿಲ್ದಾಣಗಳನ್ನು ಖಾಸಗಿ ಕೈಗಳಿಗೆ ಹಸ್ತಾಂತರಿಸಿ, ಫುಡ್ ಕಾರ್ಪೊರೇಶನ್ ಆಫ್ ಇಂಡಿಯಾ (ಎಫ್‌ಸಿಐ), ಜೀವ ವಿಮಾ ನಿಗಮದ (ಎಲ್‌ಐಸಿ) ಮೇಲೆ ದಾಳಿ ಮಾಡಿದಾಗ ದೇಶದ ಸ್ವಾತಂತ್ರ್ಯವನ್ನು ಹೇಗೆ ಉಳಿಸಿಕೊಳ್ಳುತ್ತದೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ 130 ಕೋಟಿ ಭಾರತೀಯರು ನಮ್ಮ ಸಶಸ್ತ್ರ, ಅರೆಸೈನಿಕ ಮತ್ತು ಪೊಲೀಸ್ ಪಡೆಗಳ ಬಗ್ಗೆ  ಹೆಮ್ಮೆಪಡುತ್ತೇವೆ. ನಮ್ಮ ಮೇಲೆ ದಾಳಿ ನಡೆದಾಗಲೆಲ್ಲಾ ದಾಳಿಕೋರರನ್ನು ಅವರ ಹೆಸರಿಡಿದು ತೀವ್ರವಾಗಿ ಟೀಕಿಸಿದ್ದೇವೆ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

“ಆದರೆ ನಮ್ಮ ಆಡಳಿತಗಾರರು ಚೀನಾದ ಹೆಸರನ್ನು ಉಚ್ಚರಿಸಲು ಏಕೆ ಹೆದರುತ್ತಾರೆ ಎಂಬುದರ ಬಗ್ಗೆಯೂ ನಾವು ಯೋಚಿಸಬೇಕು. ಚೀನಾ ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಾಗ, ಚೀನಾದ ಪಡೆಗಳನ್ನು ಹಿಂದಕ್ಕೆ ಕಳುಹಿಸಲು ಮತ್ತು ನಮ್ಮ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಹೇಗೆ ಕ್ರಮವಹಿಸುತ್ತದೆ ಎಂದು ನಾವು ಸರ್ಕಾರವನ್ನು ಕೇಳಬೇಕು” ಎಂದು ಅವರು ಹೇಳಿದರು.

ಕೆಂಪು ಕೋಟೆಯ ವೇದಿಕೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಚೀನಾ ಮತ್ತು ಪಾಕಿಸ್ತಾನಕ್ಕೆ ತೀಕ್ಷ್ಣವಾದ ಸಂದೇಶವನ್ನು ನೀಡಿದರು. ಉಭಯ ದೇಶಗಳ ಗಡಿಯುದ್ದಕ್ಕೂ ನಿಯೋಜಿಸಲಾಗಿರುವ ಸಶಸ್ತ್ರ ಪಡೆಗಳು ಭಾರತದ ಸಾರ್ವಭೌಮತ್ವವನ್ನು ಪ್ರಶ್ನಿಸಲು ಯತ್ನಿಸಿದವರಿಗೆ ಸೂಕ್ತವಾದ ಉತ್ತರವನ್ನು ನೀಡಿವೆ ಎಂದು ಘೋಷಿಸಿದರು. ಆದರೆ, ಅವರು ಉಭಯ ದೇಶಗಳ ಹೆಸರನ್ನು ಸೂಚಿಸಲಿಲ್ಲ.

ತಮ್ಮ 90 ನಿಮಿಷಗಳ ಭಾಷಣದಲ್ಲಿ ಪ್ರಧಾನಿ ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಅಭಿಯಾನದ ಬಗ್ಗೆ ವ್ಯಾಪಕವಾಗಿ ಮಾತನಾಡಿದರು. “ಆತ್ಮನಿರ್ಭರ್” ಬಗ್ಗೆ ಮಾತನಾಡುವವರು, ಅದರ ಅಡಿಪಾಯವನ್ನು ಪಂಡಿತ್ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯ್ ಪಟೇಲ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರು ಹಾಕಿದ್ದಾರೆ ಎಂಬುದನ್ನು ಮರೆತಿದ್ದಾರೆ ಎಂದು ಸುರ್ಜೇವಾಲ ಹೇಳಿದ್ದಾರೆ.

“ಇಂದು, ಇಂತಹ ಸ್ವಾತಂತ್ರ್ಯದ ಮೇಲೆ ಆಕ್ರಮಣ ಮಾಡುವವರ ವಿರುದ್ಧ ನಿರ್ಣಾಯಕ ಯುದ್ಧವನ್ನು ಧ್ವನಿಸುವ ಪ್ರತಿಜ್ಞೆಯನ್ನು ನಾವೆಲ್ಲರೂ ತೆಗೆದುಕೊಳ್ಳಬೇಕು. ಇದು ನಿಜವಾದ ರಾಷ್ಟ್ರೀಯತೆಯಾಗಿರುತ್ತದೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...