Homeಕರ್ನಾಟಕಹೋರಾಟಗಾರ ಕೆ.ಎಲ್‌. ಅಶೋಕ್‌‌ಗೆ ನಿಂದನೆ: ರಾಜ್ಯದಾದ್ಯಂತ ಖಂಡನೆ; ಪೊಲೀಸರ ಅಮಾನತಿಗೆ ಆಗ್ರಹ

ಹೋರಾಟಗಾರ ಕೆ.ಎಲ್‌. ಅಶೋಕ್‌‌ಗೆ ನಿಂದನೆ: ರಾಜ್ಯದಾದ್ಯಂತ ಖಂಡನೆ; ಪೊಲೀಸರ ಅಮಾನತಿಗೆ ಆಗ್ರಹ

ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿರುವ ಪೇದೆ ಹಾಗೂ ಎಸ್ ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಸಂಘಟನೆಗಳು ಆಗ್ರಹಿಸಿದೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ ಕೆ. ಎಲ್. ಅಶೋಕ್ ಮತ್ತು ಅವರ ಕುಟುಂಬ ಸದಸ್ಯರನ್ನು ಟ್ರಾಫಿಕ್ ನಿಯಮ ಉಲ್ಲಂಘನೆಯ ನೆಪದಲ್ಲಿ ಕೊಪ್ಪ ಪೊಲೀಸರು ಅವಮಾನಿಸಿರುವುದು ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಘಟನೆಯನ್ನು ಹಲವಾರು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

ತಮ್ಮ ಕರ್ತವ್ಯ ದಲ್ಲಿ ಲೋಪವೆಸಗಿ ಅಶೋಕ್ ಮತ್ತು ಕಾರಿನಲ್ಲಿದ್ದ ಅವರ ಕುಟುಂಬ ಸದಸ್ಯರ ಘನತೆಗೆ ಚ್ಯುತಿ ತಂದಿರುವ ಹಾಗೂ ಆ ಮೂಲಕ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿರುವ ಪೇದೆ ಹಾಗೂ ಎಸ್ ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಹಲವಾರು ಸಂಘಟನೆಗಳು ಆಗ್ರಹಿಸಿದೆ.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

“ಇಂತಹ ಕ್ಷುಲ್ಲಕ ಕುತಂತ್ರಗಳಿಂದ ಭಿನ್ನಮತಗಳನ್ನು ಮಟ್ಟಹಾಕಬಹುದು ಎಂದು ಈ ಪೊಲೀಸರು ಭಾವಿಸಿದ್ದಲ್ಲಿ ಅವರು ಖಾಕಿ ಧರಿಸಲು ಅಯೋಗ್ಯರು ಎಂದೇ ಅರ್ಥ. ಇಂತಹ ಜನಕ್ಕೆ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂಬುದು ಶೀಘ್ರದಲ್ಲೇ ಅರಿವಾಗುವಂತೆ ಮಾಡುವುದು ಜಿಲ್ಲಾ ಎಸ್ ಪಿ ಯವರ ನೈತಿಕ ಜವಾಬ್ದಾರಿಯೂ ಆಗಿದೆ” ಎಂದು ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಲೋಲಾಕ್ಷ ಹೇಳಿದ್ದಾರೆ.

ವಿಜಯಪುರದಲ್ಲಿ ಜನಶಕ್ತಿ, ಮಹಿಳಾ ಮುನ್ನಡೆ, ಕೋಮು ಸೌಹಾರ್ದ ವೇದಿಕೆ, ನಾವೂ ಭಾರತೀಯರು ವೇದಿಕೆ ಜಂಟಿಯಾಗಿ ವಿಜಯಪುರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಕಿರುಕುಳ ನೀಡಿದ ಪೊಲೀಸರ ವಿರುದ್ದ ಕ್ರಮಕೈಗೊಳ್ಳವಂತೆ ಕೇಳಿಕೊಳ್ಳಲಾಯಿತು.

ಹೋರಾಟಗಾರ ಮತ್ತು ಕಾರಿನಲ್ಲಿದ್ದ ಅವರ ಕುಟುಂಬದ ಸದಸ್ಯರ ಘನತೆಗೆ ಚ್ಯುತಿ ತಂದಿರುವ ಪೇದೆ ಹಾಗೂ ಎಸ್ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕೆಂದು ಚಿಕ್ಕಮಗಳೂರಿನಲ್ಲಿ ಕೂಡಾ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಪೀಪಲ್ ಲಾಯರ್ಸ್ ಗಿಲ್ಡ್ ಬೆಂಗಳೂರು ಘಟನೆಯನ್ನು ಖಂಡಿಸಿದ್ದು, ಇದರ ರಾಜ್ಯ ಸಂಚಾಲಕ ಕೆ.ಕೆ.ವಕೀಲ “ಇಂತಹ ಘಟನೆ ಸಮಾಜದಲ್ಲಿ ಜನಸಾಮಾನ್ಯರು ಪೊಲೀಸರ ಮೇಲೆ ಇಟ್ಟಿರುವ ನಂಬಿಕೆಯನ್ನು ಕಳೆದುಕೊಳ್ಳುವಂತಾಗುತ್ತದೆ ಇಂತಹ ದುರಂಕಾರಿ ಪೊಲೀಸರನ್ನು ಕೂಡಲೇ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಇಂತಹ ಪೊಲೀಸರಿಂದ ಇಡೀ ಪೊಲೀಸ್ ಸಮೂಹಕ್ಕೆ ಕಪ್ಪುಚುಕ್ಕೆ ಯಾಗಿರುತ್ತದೆ. ಅಶೋಕ್‌ರವರು ತಮ್ಮ ಜೀವನಪೂರ್ತಿ ಬಡ, ನಿರ್ಗತಿಕ, ಅಲ್ಪಸಂಖ್ಯಾತರ, ದಲಿತ ಮತ್ತು ಮಹಿಳೆಯರ ಪರ ಹೋರಾಟ ಮಾಡಿಕೊಂಡು ಬಂದಂತಹ ವ್ಯಕ್ತಿಯಾಗಿದ್ದು ಅವರ ಕುಟುಂಬದ ಸಮ್ಮುಖದಲ್ಲೆ ಸಣ್ಣ ವಿಚಾರವಾಗಿ ಕೆಟ್ಟ ಶಬ್ದ ಉಪಯೋಗಿಸಿ ನಿಂದಿಸಿರುವುದು ಪೊಲೀಸ್ ಗೂಂಡಾಗಿರಿಯಾಗಿರುತ್ತದೆ. ಪೊಲೀಸರ ವರ್ತನೆ ಹೀಗೆ ಮುಂದುವರಿದರೆ ಮುಂದೊಂದು ದಿನ ಪೊಲೀಸರ ವಿರುದ್ಧ ಜನ ತಿರುಗಿ ಬೀಳುವುದರಲ್ಲಿ ಅನುಮಾನ ಇಲ್ಲ ಆದ್ದರಿಂದ ಪೊಲೀಸ್ ವರಿಷ್ಠಾಧಿಕಾರಿಯವರು ದುರಹಂಕಾರಿ ಕೊಪ್ಪ ಪಿ.ಎಸ್.ಐ ಮತ್ತು ಕಾನ್ ಸ್ಟೇಬಲ್ ಅವರನ್ನು ತಕ್ಷಣವೇ ಅಮಾನತು ಮಾಡಿ ಕಾನೂನು ರೀತಿಯಲ್ಲಿ ತನಿಖೆ ನಡೆಸಿ ಶಿಕ್ಷೆಗೆ ಗುರಿ ಮಾಡಬೇಕು ಇಲ್ಲದಿದ್ದರೆ ನಾವು ಎಲ್ಲಾ ರೀತಿಯ ಕಾನೂನು ಹೋರಾಟ ಮಾಡಬೇಕಾಗುತ್ತದೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

0
ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಭಾರತದಲ್ಲಿ ನಾಪತ್ತೆಯಾದ ಎಂಟು ದಿನಗಳ ನಂತರ ಕೋಲ್ಕತ್ತಾ ಪೊಲೀಸರು ಅವರ ತುಂಡರಿಸಿದ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಕೋಲ್ಕತ್ತಾ ಪೊಲೀಸರು ಹತ್ಯೆಯು ಪೂರ್ವ ನಿಯೋಜಿತ ಎಂದು ಹೇಳಿಕೊಂಡಿದ್ದಾರೆ. ಅನಾರ್...