Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

‘ಏಕರೂಪ ಭಾರತವನ್ನಲ್ಲ, ಏಕೀಕೃತ ಭಾರತವನ್ನ ಸಂಭ್ರಮಿಸೋಣ’: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ 

ಚೆನ್ನೈ: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.  ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸ್ಟಾಲಿನ್, "ಏಕರೂಪದ ಭಾರತವಲ್ಲ, ಏಕೀಕೃತ ಭಾರತವನ್ನು...

ಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಅರೆಸೈನಿಕ ಪಡೆಯ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದರು. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯವರಾದ...

ಉತ್ತರಾಖಂಡ: ಸೂಫಿ ಕವಿ ಬಾಬಾ ಬುಲ್ಲೆ ಶಾ ಅವರ ಮಂದಿರವನ್ನು ಧ್ವಂಸಗೊಳಿಸಿದ ಹಿಂದೂ ರಕ್ಷಣಾ ದಳದ ದುಷ್ಕರ್ಮಿಗಳು

ಉತ್ತರಾಖಂಡದ ಮಸ್ಸೂರಿಯಲ್ಲಿರುವ 18 ನೇ ಶತಮಾನದ ಸೂಫಿ ಕವಿ ಬಾಬಾ ಬುಲ್ಲೆಹ್ ಷಾ ಅವರ ದೇವಾಲಯವನ್ನು ಶುಕ್ರವಾರ ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿರುವವರು ಧ್ವಂಸಗೊಳಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. "ಜೈ...

ಅಕ್ಷರಧಾಮ ದೇವಾಲಯ ದಾಳಿ ಪ್ರಕರಣ: 6 ವರ್ಷಗಳ ನಂತರ ಮೂವರ ಮುಸ್ಲಿಂ ವ್ಯಕ್ತಿಗಳನ್ನು ಖುಲಾಸೆಗೊಳಿಸಿದ ಅಹಮದಾಬಾದ್ ಪೋಟಾ ನ್ಯಾಯಾಲಯ

ಅಕ್ಷರಧಾಮ ದೇವಾಲಯದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮೂವರು ಮುಸ್ಲಿಂ ಪುರುಷರನ್ನು ಕಳೆದ ವಾರ ಅಹಮದಾಬಾದ್‌ನ ವಿಶೇಷ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ) ನ್ಯಾಯಾಲಯವು ಖುಲಾಸೆಗೊಳಿಸಿದ್ದು, ವರ್ಷಗಳ ಕಾನೂನು ಪ್ರಕ್ರಿಯೆಗಳ ನಂತರ...

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು...

ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದ: ಬಿಎಂಡಬ್ಲ್ಯು, ವೋಕ್ಸ್‌ವ್ಯಾಗನ್, ಮರ್ಸಿಡಿಸ್ ಬೆಂಜ್ ಮೇಲಿನ ಸುಂಕ ಶೇ. 110 ರಿಂದ ಶೇ. 40ಕ್ಕೆ ಇಳಿಕೆಯಾಗುವ ಸಾಧ್ಯತೆ

ಯುರೋಪಿಯನ್ ಒಕ್ಕೂಟದಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲಿನ ಸುಂಕವನ್ನು ಪ್ರಸ್ತುತ ಶೇ. 110 ರಿಂದ ಶೇ. 40 ಕ್ಕೆ ಇಳಿಸಲು ಭಾರತ ಯೋಜಿಸಿದೆ, ಇದು ದೇಶದ ವಿಶಾಲ ಮಾರುಕಟ್ಟೆಯಲ್ಲಿ ಇದುವರೆಗಿನ ಅತಿದೊಡ್ಡ ಆರಂಭವಾಗಿದೆ,...

ಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್

ಸಂವಿಧಾನವು ತನ್ನ ಮೊದಲ ಅನುಚ್ಛೇದದಲ್ಲಿಯೇ ಭಾರತವನ್ನು ಒಂದು ರಾಜ್ಯಗಳ ಒಕ್ಕೂಟ ಎಂದು ಘೋಷಿಸುತ್ತದೆ. ಸಶಕ್ತ ರಾಜ್ಯಗಳ ಮೂಲಕ ಸಶಕ್ತ ಭಾರತ ನಿರ್ಮಿಸುವುದು ನಮ್ಮ ಸಂವಿಧಾನದ ನಿರ್ಮಾತೃಗಳ ಕನಸಾಗಿತ್ತು. ಆ ಕನಸಿಗೆ ಕುಂದುಂಟಾಗದಂತೆ ನಮ್ಮ...

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...