Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...