Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...