Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...