Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....