Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...