Homeಕರ್ನಾಟಕಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

ಅನರ್ಹ ಶಾಸಕರನ್ನು ಬೀದಿ ಬೀದಿಯಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿರುವ ಜನರು : ವಿಡಿಯೋ ನೋಡಿ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾರಣ ಕಾಂಗ್ರೇಸ್ ಮತ್ತು ಜೆ.ಡಿಎಸ್‌ನ ಹದಿನೇಳು ಶಾಸಕರು ಅಧಿಕಾರಕ್ಕಾಗಿ ರಾಜಿನಾಮೆ ನೀಡಿ ಅನರ್ಹತೆಯ ಪಟ್ಟಕಟ್ಟಿಕೊಂಡು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈಗ ಬಿಜೆಪಿಯ ಅಭ್ಯರ್ಥಿಗಳಾಗಿ ಮತ್ತೆ ಅವರದೇ ಕ್ಷೇತ್ರಗಳಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಸರ್ಕಾರ ಬೀಳಿಸಿದ ಈ ಬೇಜವಾಬ್ದಾರಿ ಅನರ್ಹ ಶಾಸಕರು ಮತ್ತೆ ಚುನಾವಣೆಗೆ ನಿಂತಿರುವುದು ಕೆಲ ಜನಸಾಮಾನ್ಯರಿಗೆ ಪಿತ್ತನೆತ್ತಿಗೇರುವಂತೆ ಮಾಡಿದೆ. ಚುನಾವಣೆ ಎಂದರೆ ಸರ್ಕಾರದ ಬೊಕ್ಕಸದಿಂದ ಜನರ ಹಣ ಕೋಟಿ ಕೋಟಿ ಖರ್ಚಾಗುವ ಸಾಧ್ಯತೆಯಿದೆ. ಮಾದರಿ ಚುನಾವಣಾ ನೀತಿ ಸಂಹಿತೆಗಳು ಬಂದರೆ ಆ ಸಮಯದಲ್ಲಿ ತಿಂಗಳುಗಟ್ಟಲೆ ಜನರ ಸರ್ಕಾರಿ ಕೆಲಸಗಳೇ ನಡೆಯುವುದಿಲ್ಲ.

ಇಷ್ಟೆಲ್ಲಾ ಕಷ್ಟಗಳ ನಡುವೆ ಕೆಲ ಅನರ್ಹ ಶಾಸಕರ ’ಸ್ವಾಭಿಮಾನಕ್ಕಾಗಿ, ಕ್ಷೇತ್ರದ ಅಭಿವೃದ್ದಿಗಾಗಿ’ ಎಂಬಂತಹ ಬಂಡಲ್ ಮಾತುಗಳನ್ನು ಕೇಳಿಸಿಕೊಳ್ಳಬೇಕಾದೆ ಅನಿವಾರ್ಯತೆ ಜನರಿಗೆ ರೇಜಿಗೆ ಹುಟ್ಟಿಸಿದೆ. ಇದರಿಂದ ಕೋಪಗೊಂಡ ಕೆಲವರು ’ಜನರ ಕಷ್ಟಗಳನ್ನು ಪರಿಹರಿಸದೆ ಕೇವಲ ತಮ್ಮ ಹಣ ಅಧಿಕಾರದ ಸ್ವಾರ್ಥಕ್ಕಾಗಿ ರಾಜಿನಾಮೆ ನೀಡಿದ ಅನರ್ಹ ಶಾಸಕರಿಗ’ ಬೀದಿಗಳಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ಕೆ.ಆರ್ ಪೇಟೆಯಲ್ಲಿ ಅನರ್ಹ ಶಾಸಕ ನಾರಾಯಣಗೌಡ, ಸಚಿವ ಮಾಧುಸ್ವಾಮಿ ಮತ್ತು ಬಿಜೆಪಿ ಮುಖಂಡರಿಗೆ ಜನ ಚಪ್ಪಲಿ ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳ್ಳ ಕಳ್ಳ ಎಂದು ಕೂಗಿದ್ದಾರೆ. ಜನರ ಸಿಟ್ಟಿಗೆ ಬೇಜಾರಾದ ನಾರಾಯಣಗೌಡರು ಮನೆಯಲ್ಲಿ ಬೇಕಾದರೆ ಹೊಡೆಯಿರಿ, ಬೀದಿಯಲ್ಲಿ ಬೇಡ ಎಂದು ಅವಲತ್ತುಕೊಳ್ಳುವ ಮಟ್ಟಕ್ಕೆ ಹೋಗಿದ್ದರು.

ಇನ್ನೊರ್ವ ಅನರ್ಹ ಶಾಸಕ ಹೆಚ್.ವಿಶ್ವನಾಥ್‌ರನ್ನು ಹುಣಸೂರು ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲು ತೆರಳಿದ್ದಾಗ, ಅಲ್ಲಿನ ಕೆಲವರು “ನೀವು ನಮಗೆ ಮೋಸ ಮಾಡಿ ಹೋಗಿದ್ದೀರಿ. ಮತ್ತೆ ಮತಕೇಳಲು ಬಂದಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿದರೂ ಸಹ ಬಿಡದ ಅವರು ಕೆಲವು ನಿಮಿಷಗಳ ಕಾಲ ವಿಶ್ವನಾಥ್‌ರವರಿಗೆ ಬೈಯ್ದುಬಿಟ್ಟಿದ್ದಾರೆ.

ವಿಡಿಯೋ ನೋಡಿ:

ಇನ್ನು ಶಿರಸಿ ಯಲ್ಲಾಪುರದ ಭಾಗದಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಕೂಡ ಅಲ್ಲಿನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ ಭಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ಬಿಜೆಪಿಯವರ ಬಗ್ಗೆ ಬೈಯ್ದು ಮಾತಾಡಿದ್ದೀರಿ? ಏನು ಮಾತಾಡಿದ್ದಿರಿ ಎಂಬ ನೆನಿಪಿದೆಯೇ ನಿಮಗೆ? ಈಗ ಏನ್ ಹೇಳುತ್ತಿದ್ದೀರಿ? ಬಿಜೆಪಿ ಸೇರಿದ್ದು ಯಾಕೆ? ಎಲ್ಲಾ ನಿಮ್ಮ ಸ್ವಾರ್ಥಕ್ಕಾಗಿ ಎಂದು ಜನರು ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ನೋಡಿ

ಹೀಗೆ ಜನ ಸಿಕ್ಕಸಿಕ್ಕಲ್ಲಿ ರಾಜಕಾರಣಿಗಳನ್ನು ಪ್ರಶ್ನಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ನಾಳೆ ನಮ್ಮನ್ನು ಬೀದಿಯಲ್ಲಿ ಪ್ರಶ್ನೆ ಕೇಳುತ್ತಾರೆ ಎಂಬ ಭಯದಿಂದ ರಾಜಕಾರಣಿಗಳು ಮುಂದಾದರೂ ಬುದ್ದಿ ಕಲಿಯುತ್ತಾರಾ ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದರೂ ಅವರು ಗೆದ್ದು ಬರುತ್ತಾರೆ ಅನ್ನೋದು ತುಂಬಾ ಬೇಷರದ ಸಂಗತಿ

  2. ಭಾರತಮಾತೆಯನ್ನೇ ಮಾರುವುದು ಯಾವಾಗ ಎಂಬುದನ್ನು ತಿಳಿಸಿ. ಜೊತೆಗೆ ಬ್ರಿಟಿಷರಿಗೆ ಮಾರಿಕೊಳ್ಳುವುದು ಉತ್ತಮ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...