ಬೆಂಗಳೂರಿನಲ್ಲಿ ಆಗಸ್ಟ್ 11ರಂದು ನಡೆದಿದ್ದ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಹಿಸಿಕೊಂಡಿದೆ. ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಹಾಗೂ ಕರ್ನಾಟಕ ಆಸ್ತಿಪಾಸ್ತಿ ನಾಶ ಮತ್ತು ನಷ್ಟ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದೆ.
ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಎನ್ಐಎ, ಮೊದಲ ಪ್ರಕರಣವನ್ನು ಆಗಸ್ಟ್ 12 ರಂದು ದೇವರ ಜೀವನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ 195/2020ರ ಆಧಾರದಲ್ಲಿ ದಾಖಲಿಸಿದೆ. ಎರಡನೇ ಪ್ರಕರಣವನ್ನು ಆಗಸ್ಟ್ 12ರಂದು ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ 229/2020 ಆಧರಿಸಿದೆ.
NIA Takes up Investigation of Bengaluru violence ( DJ Halli and KG Halli PS cases) pic.twitter.com/iBlqIzXNEF
— NIA India (@NIA_India) September 22, 2020
ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ
ಆಗಸ್ಟ್ 11ರಂದು ಫೇಸ್ಬುಕ್ ಪೋಸ್ಟ್ವೊಂದರ ವಿಚಾರವಾಗಿ ಕಾವಲ್ಭೈರಸಂದ್ರದಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಂಬಂಧಿ ನವೀನ್ ಮನೆ ಮೇಲೆ ಸಾವಿರಕ್ಕೂ ಹೆಚ್ಚು ಜನರ ಉದ್ರಿಕ್ತರ ಗುಂಪು ದಾಳಿ ನಡೆಸಿತ್ತು. ಈ ವೇಳೆ ಡಿ.ಜೆ ಹಳ್ಳಿ ಪೊಲೀಸ್ ಠಾಣೆ ಧ್ವಂಸ ಮಾಡಲಾಗಿತ್ತು. ಜೊತೆಗೆ ಸಾರ್ವಜನಿಕರ ಆಸ್ತಿ ಪಾಸ್ತಿಗೂ ಹಾನಿಯಾಗಿತ್ತು.
ಈ ಗಲಭೆ ಸಂದರ್ಭದಲ್ಲಿ ನಡೆಸಲಾದ ಗೋಲಿಬಾರ್ನಲ್ಲಿ 4 ಜನ ಯುವಕರು ಬಲಿಯಾಗಿದ್ದರು. ಇನ್ನೂ ಹಲವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಷ್ಟವಾಗಿದೆ. ನೂರಾರು ಜನರನ್ನು ಬಂಧಿಸಲಾಗಿದೆ. ಸದ್ಯ ಎನ್ಐಎ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದೆ.