Homeಕರ್ನಾಟಕಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

'ರೈತ ಹಕ್ಕುಗಳ ರಕ್ಷಣೆಗೆ ರೈತರ ನಡಿಗೆ' ಹೆಸರಿನಲ್ಲಿ ನಡೆಯುತ್ತಿರುವ ಈ ಪಾದಯಾತ್ರೆಯು ಈಗಾಗಲೇ 10 ದಿನಗಳನ್ನು ಪೂರೈಸಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ 3 ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಮತ್ತು ಎಂಎಸ್‌ಪಿಗಾಗಿ ಕಾನೂನು ರಚಿಸಬೇಕೆಂದು ಒತ್ತಾಯಿಸಿ ಕರ್ನಾಟಕದಲ್ಲಿ ವಿನೂತನ ಚಳವಳಿಯೊಂದು ಸದ್ದಿಲ್ಲದೆ ನಡೆಯುತ್ತಿದೆ. ಹೈದರಾಬಾದ್ ಕರ್ನಾಟಕದ 6 ಜಿಲ್ಲೆಗಳ ನೂರಾರು ಗ್ರಾಮಗಳನ್ನು ತಲುಪಿ ಕೃಷಿ ಕಾಯ್ದೆಗಳ ಕುರಿತು ವಿವರಿಸುತ್ತಾ, ಜನರನ್ನು ಹೋರಾಟಕ್ಕೆ ಅಣಿಗೊಳಿಸಲು 200ಕ್ಕೂ ಹೆಚ್ಚು ರೈತರು ಬೀದರ್‌ನ ಬಸವಕಲ್ಯಾಣದಿಂದ ಬಳ್ಳಾರಿವರೆಗೆ ರೈತ ಪಾದಯಾತ್ರೆ ನಡೆಸುತ್ತಿದ್ದಾರೆ.

ಆಲ್ ಇಂಡಿಯಾ ಕಿಸಾನ್ ಮಜ್ದೂರ್ ಸಭಾ, ರೈತನಾಯಕ ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ರಿ) ರಾಜ್ಯಾಧ್ಯಕ್ಷರಾದ ಬಿ.ಜೆ ಹಳ್ಳಿ ಜಿ ನಾರಾಯಣಸ್ವಾಮಿಯವರ ನೇತೃತ್ವದಲ್ಲಿ ಮಾರ್ಚ್ 5ರಂದು ಬಸವಕಲ್ಯಾಣದಲ್ಲಿ ರೈತ ಪಾದಯಾತ್ರೆ ಆರಂಭವಾಗಿದೆ. ‘ರೈತ ಹಕ್ಕುಗಳ ರಕ್ಷಣೆಗೆ ರೈತರ ನಡಿಗೆ’ ಹೆಸರಿನಲ್ಲಿ 10 ದಿನಗಳನ್ನು ಪೂರೈಸಿ ಸದ್ಯ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕುಗಳಲ್ಲಿ ಜಾಗೃತಿ ಜಾಥ ನಡೆಯುತ್ತಿದೆ. 400 ಕಿ.ಮೀ ಉದ್ದದ ಈ ಪಾದಯಾತ್ರೆಯು ಮಾರ್ಚ್ 23 ಭಗತ್ ಸಿಂಗ್ ಹುತಾತ್ಮ ದಿನದಂದು ಬಳ್ಳಾರಿಯಲ್ಲಿ ಸಮಾರೋಪಗೊಳ್ಳಲಿದೆ.

ಈ ಕುರಿತು ರೈತ ಮುಖಂಡ ಜಿ ನಾರಾಯಣಸ್ವಾಮಿ ನಾನುಗೌರಿ.ಕಾಂ ನೊಂದಿಗೆ ಮಾತನಾಡಿ “250 ರೈತರು ಪಾದಯಾತ್ರೆ ಹೊರಟಿದ್ದು, ಅದರಲ್ಲಿ 22 ಜನ ಮಹಿಳಾ ರೈತರಿದ್ದಾರೆ. 2 ಟ್ರ್ಯಾಕ್ಟರ್‌ನಲ್ಲಿ ಆಹಾರ ಸಾಮಗ್ರಿಗಳು ಮತ್ತು ಅಗತ್ಯ ವಸ್ತುಗಳನ್ನು ಜೊತೆಗೆ ಒಯ್ಯಲಾಗುತ್ತಿದೆ. ತುರ್ತು ಪರಿಸ್ಥಿತಿ ನಿಭಾಯಿಸಲು 2 ಕಾರು ನಮ್ಮ ಜೊತೆಗಿವೆ. ಮಾರ್ಚ್ 5 ರಂದು ಆರಂಭವಾದ ಪಾದಾಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಗಿದೆ. ಮಾರ್ಚ್ 9 ರಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದೆವು. ಮಾಜಿ ಶಾಸಕರಾದ ಬಿ.ಆರ್ ಪಾಟೀಲ್, ಹೋರಾಟಗಾರರಾದ ಶಾಮರಾಮ್ ಚಂದ್ರಶೇಖರ್ ಪಾಟೀಲ್ ಜೊತೆಗಿದ್ದರು” ಎಂದಿದ್ದಾರೆ.

“ದೆಹಲಿಯಲ್ಲಿ ರೈತರು ನೂರು ದಿನಗಳಿಂದಲೂ ಹೋರಾಡುತ್ತಿದ್ದರೂ ಕೇಂದ್ರ ಸರ್ಕಾರ ರೈತರಿಗೆ ಮರಣಶಾಸನವಾಗಿರುವ ಕಾನೂನುಗಳನ್ನು ವಾಪಸ್ ಪಡೆಯುತ್ತಿಲ್ಲ. ರಾಜ್ಯ ಸರ್ಕಾರ ಭೂಸುಧಾರಣಾ ತಿದ್ದುಪಡಿ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ತಂದು ರೈತರನ್ನು ಬೀದಿಗೆ ತಳ್ಳುತ್ತಿದೆ. ಬೆಲೆಏರಿಕೆ, ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಇತರ ಜನವರ್ಗಗಳನ್ನು ಹಿಂಸಿಲಾಗುತ್ತಿದೆ. ಹಾಗಾಗಿ ಈ ಕುರಿತು ಜನಜಾಗೃತಿ ಮೂಡಿಸಲು ಪಾದಯಾತ್ರೆಯಲ್ಲಿ ನೂರಾರು ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 23 ರಂದು ಬಳ್ಳಾರಿಯಲ್ಲಿ ಪಾದಯಾತ್ರೆಯ ಸಮಾರೋಪ ಸಮಾವೇಶ ನಡೆಯಲಿದೆ. ಅಖಿಲ ಭಾರತ ಮಟ್ಟದ ರೈತ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕರ್ನಾಟಕದಲ್ಲಿ ರೈತ ಹೋರಾಟದ ಮುಂದಿನ ರೂಪುರೇಷೆಗಳನ್ನು ಚರ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...