Homeಕರ್ನಾಟಕಹೆಲ್ಮೆಟ್ ಹಾಕದಿದ್ದುದ್ದಕ್ಕೆ ಯುವಕನಿಗೆ ಕೊಡಗು ಪೊಲೀಸರಿಂದ ಯರ್ರಾಬಿರ್ರಿ ಥಳಿತ? ವಿಡಿಯೋ ವೈರಲ್.. ಇದು ನಿಜವೆ?

ಹೆಲ್ಮೆಟ್ ಹಾಕದಿದ್ದುದ್ದಕ್ಕೆ ಯುವಕನಿಗೆ ಕೊಡಗು ಪೊಲೀಸರಿಂದ ಯರ್ರಾಬಿರ್ರಿ ಥಳಿತ? ವಿಡಿಯೋ ವೈರಲ್.. ಇದು ನಿಜವೆ?

- Advertisement -
- Advertisement -

ನೀವು ಹೆಲ್ಮೆಟ್ ಹಾಕದಿದ್ದರೆ, ಕೊಲ್ಲುವ ಹಕ್ಕನ್ನು ಈ ಪೊಲೀಸರಿಗೆ ಯಾರು ನೀಡಿದರು? ಎಂಬ ಹೆಸರಿನಲ್ಲಿ ಯುವಕನೊಬ್ಬನಿಗೆ ಇಬ್ಬರು ಪೊಲೀಸರು ಲಾಠಿಯಿಂದ ಹೊಡೆಯುವ 58 ಸೆಕೆಂಡ್ ಗಳ ವಿಡಿಯೋವೊಂದು ಸಾಕಷ್ಟು ವೈರಲ್ ಆಗಿದೆ.

ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದಲ್ಲದೇ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಹುಡುಗನಿಗೆ ಪೊಲೀಸರು ಮನಸೋ ಇಚ್ಛೆ ತಳಿಸಿದ್ದಾರೆ ಎಂದು ತಿಳಿದು ಸಾವಿರಾರು ಜನ ಈ ಪೋಸ್ಟ್ ಅನ್ನು ಷೇರ್ ಮಾಡಿದ್ದಾರೆ.

ಮೊದಲಿಗೆ ಇದು ಜಯ್ ಭಾರತ್ ಎನ್ನುವ ಪೇಜ್ ನಲ್ಲಿ ಷೇರ್ ಆಗಿದ್ದು 70ಸಾವಿರಕ್ಕೂ ಹೆಚ್ಚು ಜನ ಇದನ್ನು ನೋಡಿದ್ದಲ್ಲದೇ 3 ಸಾವಿರ ಜನ ಇದನ್ನು ಷೇರ್ ಮಾಡಿದ್ದಾರೆ. ಬೇರೆ ಬೇರೆ ಪೇಜ್ ಗಳಲ್ಲಿಯೂ ಈ ವಿಡಿಯೋ ಷೇರ್ ಆಗಿದೆ.

ಆದರೆ ಪ್ರಖ್ಯಾತ ಫ್ಯಾಕ್ಟ್ ಚೆಕ್ ತಾಣ ಆಲ್ಟ್ ನ್ಯೂಸ್ ಇದನ್ನು ಈ ಫೋಟೊವನ್ನು ಗೂಗಲ್ ರಿವರ್ಸ್ ಸರ್ಚ್ ನಲ್ಲಿ ಹುಡುಕಿದಾಗ ಈ ಸುದ್ದಿ ಸುಳ್ಳು ಎಂದು ಗೊತ್ತಾಗಿದೆ. ಇದು ಹೆಲ್ಮೆಟ್ ಪ್ರಕರಣವಲ್ಲ ಬದಲಿಗೆ ಕೊಡಗಿನಲ್ಲಿ ಎರಡು ತಿಂಗಳ ಹಿಂದೆ ಹುಡುಗಿಯೊಬ್ಬಳನ್ನು ಚುಡಾಯಿಸಿದ ಕಾರಣಕ್ಕಾಗಿ ಪೊಲೀಸರು ಯುವಕನಿಗೆ ಥಳಿಸಿದ ವಿಡಿಯೋ ಆಗಿದೆ ಎಂದು ತಿಳಿದುಬಂದಿದೆ.

ಕೇರಳದ ಯುವಕರು ಪ್ರತಿನಿತ್ಯ ವಿರಾಜಪೇಟೆ ಸುತ್ತಾ ಕಾಲೇಜಿಗೆ ಬರುತ್ತಿದ್ದ ಹೆಣ್ಣು ಮಕ್ಕಳನ್ನು ರೇಗಿಸುತ್ತಿದ್ದರು. ಒಂದು ದಿನ ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಆಗ ಪೊಲೀಸರು ಹೊಡೆದಿರುವ ವಿಡಯೋ ಈಗ ಮತ್ತೊಮ್ಮೆ ಹೆಲ್ಮೆಟ್ ಹೆಸರಿನಲ್ಲಿ ವೈರಲ್ ಆಗಿದೆ ಅಷ್ಟೇ..

ಕೃಪೆ: ಆಲ್ಟ್ ನ್ಯೂಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...

ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಡೆಪ್ಯೂಟಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ಮುಖಂಡ ಆಶಿಶ್ ಬ್ಯಾನರ್ಜಿ ಅವರು, ಭಾನುವಾರ (ಆ.16) ಬೆಳಿಗ್ಗೆ ಬೀರ್‌ಭೂಮ್ ಜಿಲ್ಲೆಯ ರಾಂಪುರಹತ್‌ನ ಹಟ್ಟಾಲಾ ಪಾರಾದಲ್ಲಿರುವ ಅವರ...

ದೇಶದ ಜನರಿಗೆ ‘SIR, EVM, ECI’ಗಳಿಂದ ಸ್ವಾತಂತ್ರ್ಯ ಬೇಕಿದೆ: ಎದ್ದೇಳು ಕರ್ನಾಟಕ

ಬೆಂಗಳೂರು: ಭಾರತವು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ, ದೇಶದ ಪ್ರಜೆಗಳು ತಮ್ಮ ಅತಿ ಅಮೂಲ್ಯವಾದ ‘ಮತದಾನದ ಹಕ್ಕನ್ನು’ ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಈ ದೇಶದ ಜನರಿಗೆ ಈಗ ‘SIR (ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ),...

ಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ

ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ...