ಕರ್ನಾಟಕದಲ್ಲಿ ಉಪಚುನಾವಣೆ ಕಾವೇರುತ್ತಿದ್ದು ನಾಳೆ ಎರಡು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರ ನಡುವೆ ಬಿಜೆಪಿ ಪಕ್ಷದ RR ನಗರದ ಅಭ್ಯರ್ಥಿ ಮುನಿರತ್ನ ವಿರುದ್ಧ ದೂರು ದಾಖಲಾಗಿದೆ. “ಕ್ಷೇತ್ರದ ಮತದಾರರಿಗೆ ಉಚಿತವಾಗಿ ಸೆಟ್ಟಾಪ್ ಬಾಕ್ಸ್ ಹಂಚಿದ್ದಾರೆ” ಎಂದು ಹೋರಾಟಗಾರ ಸಾಕೇತ್ ಗೋಖಲೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತ ಡಿಪಿ ಸತೀಶ್, ತಮ್ಮ ಟ್ವಿಟರ್ ಖಾತೆಯಲ್ಲಿ, “RR ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಐದು ಕೋಟಿ ಬೆಲೆಬಾಳುವ 34,000 ಸೆಟ್ಟಾಪ್ ಬಾಕ್ಸ್ ಹಂಚಿದ್ದಾರೆ. ಒಂದು ವೇಳೆ ಅವರು ಗೆದ್ದರೂ ಚುನಾವಣಾ ವೆಚ್ಚ ಮಿತಿಯನ್ನು ಮೀರಿದ್ದಕ್ಕೆ ಅವರ ಸ್ಥಾನವನ್ನು ಅನರ್ಹಗೊಳಿಸಬಹುದೆಂದು ಕಾನೂನು ತಜ್ಞರು ಹೇಳುತ್ತಾರೆ” ಎಂದು ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ
ಈ ಕುರಿತು ರೀಟ್ವೀಟ್ ಮಾಡಿರುವ ಸಾಕೆತ್ ಗೋಖಲೆ, “ಈ ಪ್ರಕರಣದ ಕುರಿತಂತೆ ಆರ್ ಆರ್ ನಗರದ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವುದಕ್ಕೆ RP Act, 1951 ಅಡಿಯಲ್ಲಿ 24 ಗಂಟೆಗಳೊಳಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.
Thanks a ton for flagging this, @dp_satish.
I've filed a complaint with the ECI and Returning Officer for Rajarajeshwari Nagar (AC: 154) about this incident requesting action within 24 hours for bribing voters and indulging in corrupt practice under the RP Act, 1951. https://t.co/DZU83tCaFi
— Saket Gokhale (@SaketGokhale) November 2, 2020
ಇದನ್ನೂ ಓದಿ: RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!
ಕ್ಷೇತ್ರದ ಮತದಾರರಿಗೆ ಮುನಿರತ್ನ ಅಕ್ರಮವಾಗಿ ಸೆಟ್ಟಾಪ್ ಬಾಕ್ಸ್ ಹಂಚಿ ಆಮಿಷ ಒಡ್ಡಿದ್ದಾರೆಂದು ವಿರೋಧ ಪಕ್ಷ ಕಾಂಗ್ರೆಸ್ ಕಳೆದ ವಾರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. 1000 ಬೆಲೆ ಬಾಳುವ ಸುಮಾರು 50 ಸಾವಿರಕ್ಕೂ ಹೆಚ್ಚು ಟಿವಿ ಸೆಟ್ಟಾಪ್ ಬಾಕ್ಸ್ಗಳನ್ನು ಕ್ಷೇತ್ರದ ಮತದಾರರಿಗೆ ಹಂಚಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಾಂಗ್ರೆಸ್ ಆರೋಪವನ್ನು ತಳ್ಳಿ ಹಾಕಿದ್ದರೂ ಸಹ ಸೆಟ್ಟಾಪ್ ಬಾಕ್ಸ್ ಹಂಚಿರುವುದನ್ನು ಮುನಿರತ್ನ ಬಹಿರಂಗವಾಗಿ ಒಪ್ಪಿಕೊಂಡು, ಇದು ತನ್ನ ವ್ಯವಹಾರದ ಭಾಗ ಎಂದು ಸಮರ್ಥನೆ ನೀಡಿದ್ದರು.
ಕಳೆದ ಬಾರಿ ರಾಜ್ಯದ 12 ಕ್ಷೇತ್ರಗಳಲ್ಲಿ ಉಪಚುನಾವಣೆ ನಿಗದಿಯಾಗಿತ್ತು. ಆಗ ಮುನಿರತ್ನ ಅಕ್ರಮವಾಗಿ ಮತದಾರರ ಗುರುತು ಚೀಟಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದರೆಂಬ ಕಾರಣಕ್ಕೆ RR ನಗರದ ಉಪಚುನಾವಣೆ ರದ್ದಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಈಗ ಇನ್ನೊಂದು ಪ್ರಕರಣದಲ್ಲಿ ಸಿಲುಕಿರುವ ಮುನಿರತ್ನ ಅವರ ವಿರುದ್ಧ ಚುನಾವಣಾ ಆಯೋಗ ಏನು ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?