Homeಮುಖಪುಟಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

- Advertisement -
- Advertisement -

ಅತ್ಯಾಚಾರ ಮತ್ತು ದೌರ್ಜನ್ಯಗಳನ್ನು ತಪ್ಪಿಸಲು ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ ನೀಡಲು ಗುಜರಾತ್‌‌ನ ಮೆಹ್ಸಾನಾದ ಸ್ವಯಂಸೇವಕ ಗುಂಪು ನಿರ್ಧರಿಸಿದ್ದು, ಅಕ್ಟೋಬರ್ 20 ರಂದು ಮೆಹ್ಸಾನಾ ಪಟ್ಟಣದಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ನೇತೃತ್ವದ ಸಂಘಟನೆಯಾದ ರಾಷ್ಟ್ರೀಯ ದಲಿತ ಅಧಿಕಾರ್‌ ಮಂಚ್ (RDAM) ನ ಮೆಹ್ಸಾನಾ ಘಟಕದಿಂದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: ’ಓ ಭರತವರ್ಷದ ನಾಯಕರೆ, ಅವಮಾನದಲ್ಲೇ ಮುಳುಗಿ ಸಾಯಿರಿ’; ಜಿಗ್ನೇಶ್ ಮೇವಾನಿ ಆಕ್ರೋಶ

“ದೇಶದ ವಿವಿಧ ಭಾಗಗಳಲ್ಲಿ ಹುಡುಗಿಯರ ಮೇಲೆ, ವಿಶೇಷವಾಗಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ಸಾಕಷ್ಟು ನಡೆದಿವೆ. ಆದ್ದರಿಂದ, ಇಂತಹ ಘಟನೆಗಳನ್ನು ತಪ್ಪಿಸಲು ಹುಡುಗಿಯರಿಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ತರಬೇತಿ ನೀಡಲಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ, ಮೆಹ್ಸಾನಾದಲ್ಲಿ ಬಾಲಕಿಯರಿಗೆ ಸ್ವರಕ್ಷಣೆ ತರಬೇತಿ ನೀಡಲು ಪ್ರಾಯೋಗಿಕ ಆಧಾರದ ಮೇಲೆ ನಾವು ಇದನ್ನು ಪ್ರಾರಂಭಿಸುತ್ತಿದ್ದೇವೆ. ದಲಿತ ಹುಡುಗಿಯರು ನಮ್ಮ ಆದ್ಯತೆ. ಆದಾಗ್ಯೂ, ತರಬೇತಿಯು ಎಲ್ಲಾ ಧರ್ಮ ಮತ್ತು ಜಾತಿಯ ಹುಡುಗಿಯರಿಗೆ ಮುಕ್ತವಾಗಿದೆ” ಎಂದು RDAM ಮೆಹ್ಸಾನಾದ ಪದಾಧಿಕಾರಿ ಕೌಶಿಕ್ ಪರ್ಮಾರ್ ಹೇಳಿದ್ದಾರೆ.

“ಇದು 15 ದಿನಗಳ ತರಬೇತಿಯಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಂದ 100 ರೂ.ಗಳ ಟೋಕನ್ ಶುಲ್ಕ ವಿಧಿಸಲು ನಾವು ಯೋಜಿಸುತ್ತಿದ್ದೇವೆ. 15 ದಿನಗಳ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಈ ಶುಲ್ಕವನ್ನು ಹುಡುಗಿಯರಿಗೆ ಹಿಂದಿರುಗಿಸಲಾಗುತ್ತದೆ” ಎಂದು ಪರ್ಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ತರಬೇತಿ ನೀಡಲು ವೃತ್ತಿಪರ ಟೇಕ್ವಾಂಡೋ ಸಮರ ಕಲಾ ಬೋಧಕರಾದ ಮೆಹ್ಸಾನಾದ ದೀಪಕ್ ಚಾವ್ಡಾ ಒಪ್ಪಿಕೊಂಡಿದ್ದಾರೆ ಎಂದು ಪರ್ಮಾರ್‌ ಹೇಳಿದ್ದಾರೆ. ದೀಪಕ್ ಚಾವ್ಡಾ ಈಗಾಗಲೇ ಮೆಹ್ಸಾನಾದ ವಿವಿಧ ಕಡೆ ಸಮರ ಕಲಾ ತರಬೇತಿಯನ್ನು ನೀಡುತ್ತಿದ್ದು, ವರ್ಷಗಳಿಂದ ಬಾಲಕಿಯರಿಗೆ ಆತ್ಮರಕ್ಷಣೆಗಾಗಿ ತರಬೇತಿ ನೀಡುತ್ತಿದ್ದಾರೆ.

“ಪ್ರತಿಯೊಬ್ಬ ಹುಡುಗಿಯೂ ತನ್ನನ್ನು ತಾನು ರಕ್ಷಿಸಿಕೊಳ್ಳಲು ಮೂಲಭೂತ ಕೌಶಲ್ಯಗಳನ್ನು ಹೊಂದಿರಬೇಕೆಂದು ನಾನು ನಂಬುತ್ತೇನೆ. ಹಾಗಾಗಿ, ನಾನು ಬಹಳ ಹಿಂದಿನಿಂದಲೂ ಹುಡುಗಿಯರಿಗೆ ಸ್ವರಕ್ಷಣೆಗಾಗಿ ಉಚಿತ ತರಬೇತಿಯನ್ನು ನೀಡುತ್ತಿದ್ದೇನೆ. ನಾನು ಟೇಕ್ವಾಂಡೋದಲ್ಲಿ ಪರಿಣಿತನಾಗಿದ್ದು, ಹುಡುಗಿಯರಿಗೆ ಮೂಲಭೂತ ಸ್ವರಕ್ಷಣೆ ತಂತ್ರಗಳಲ್ಲಿ ತರಬೇತಿ ನೀಡಲಾಗುವುದು. ಈ ಪ್ರಯೋಗವು ಯಶಸ್ವಿಯಾದರೆ, ನಾವು ಅದನ್ನು ಗುಜರಾತ್‌ನ ಇತರ ಭಾಗಗಳಿಗೂ ವಿಸ್ತರಿಸಬಹುದು” ಎಂದು ಚಾವ್ಡಾ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್‌ ಮಾಡೆಲ್ ಧ್ವಂಸ ಮಾಡಬೇಕೆಂದು ಜಿಗ್ನೇಶ್‌ ಮೇವಾನಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ’ ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

0
'ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ, ಈ ರೀತಿಯ ಶಕ್ತಿಯು ಜೈವಿಕ ದೇಹದಿಂದ ಬರಲು ಸಾಧ್ಯವಿಲ್ಲ, ದೇವರು ಮಾತ್ರ ಅಂತಹ ಶಕ್ತಿಯನ್ನು ನೀಡಬಲ್ಲನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ನೀಡಿದ್ದು,...