- Advertisement -
- Advertisement -
ತುಮಕೂರು ಜಿಲ್ಲೆಯಲ್ಲಿ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಇಂದು ಆರೋಪಿಸಿದರು.
ನಗರದಲ್ಲಿ ಮಾತನಾಡಿದ ಅವರು, ಪ್ರಾಮಾಣಿಕವಾಗಿ ಕೆಲಸ ಮಾಡುವ ದಲಿತ ಅಧಿಕಾರಿಗಳ ವರ್ಗಾವಣೆ ನೋವು ತಂದಿದೆ ಎಂದು ಹೇಳಿದರು.
ಪಕ್ಕದ ರಾಜ್ಯಗಳಲ್ಲಿ ಸಾಮಾನ್ಯ ವರ್ಗದಲ್ಲಿ ಬರುವ ಸಮುದಾಯಗಳು ರಾಜ್ಯಕ್ಕೆ ಬಂದು ಪರಿಶಿಷ್ಟ ಪಂಗಡದ ಮೀಸಲಾತಿಯಡಿ ಹುದ್ದೆಗಳನ್ನು ಲಪಟಾಯಿಸುತ್ತಿದ್ದಾರೆ. ಇದರಿಂದ ನಿಜವಾದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದರು.
ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಉನ್ನತ ಹುದ್ದೆಗಳೆಲ್ಲವೂ ನೆರೆಹೊರೆಯವರ ಪಾಲಾಗಿವೆ. ಅಲ್ಲಿ ಸಾಮಾನ್ಯ ಮೀಸಲಾತಿ ಹೊಂದಿದ್ದರೆ, ಇಲ್ಲಿಗೆ ಬಂದು ಎಸ್.ಟಿ. ಮೀಸಲಾತಿಯನ್ನು ಪಡೆಯುತ್ತಿದ್ದಾರೆ. ಇದು ಅನ್ಯಾಯ ಎಂದು ಹೇಳಿದರು.