ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ನಡೆಸುತ್ತಿದ್ದ ಹೋರಾಟಕ್ಕೆ ರಾಜ್ಯದ ರೈತ, ಕಾರ್ಮಿಕ, ವಿದ್ಯಾರ್ಥಿ, ದಲಿತ, ಹಾಗೂ ರಾಜಕೀಯ ಸಂಘಟನೆಗಳು ಬೆಂಬಲ ನೀಡಿದವು.
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಬೆಳಿಗ್ಗೆಯಿಂದಲೇ ಸಂಘಟನೆಗಳು ಜಮಾಯಿಸಿ 11 ಗಂಟೆಯಿಂದ ಸುಮಾರು 12:30 ರ ವರೆಗೆ ಪತ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ರೈತ, ಕಾರ್ಮಿಕ, ದಲಿತ, ರಾಜಕೀಯ ಸಂಘಟನೆಗಳು ಭಾಗವಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ರಸ್ತೆ ತಡೆ ನಡೆಸಿದರು. ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾದಂತೆ ಪೊಲೀಸರು ಚಳುವಳಿಗಾರರನ್ನು ಬಂಧಿಸಿದರು.
ಸರ್ಕಾರಗಳ ವಿರುದ್ದ ಜನರ ಆಕ್ರೋಶದ ಝಲಕ್ ಇಲ್ಲಿದೆ.
ಇಷ್ಟೇ ಅಲ್ಲದೆ ರಾಜ್ಯದ ಇತರ ಭಾಗದಲ್ಲೂ ಪ್ರತಿಭಟನೆಗಳು ನಡೆದವು.
ವಿಡಿಯೋ ನೋಡಿ: ಕೇಂದ್ರ ಸರ್ಕಾರದ ವಿರುದ್ದ ಸಿಡಿದೆದ್ದ ರೈತರು, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ರೈತರ ಬಂಧನ