ಸೂರ್ಯಸ್ನಾನದಿಂದ ಕೊರೊನ ಬರೋಲ್ಲ ಎಂದು ಹೇಳಿಕೆ ನೀಡಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಕೊರೊನಾ ಕುರಿತು ಹೊಸ ವಿವಾದದಲ್ಲಿ ಸಿಲುಕಿದ್ದಾರೆ.
#WATCH Union Minister of State for Health and Family Welfare Ashwini Kumar Choubey: People should spend at least 15 minutes in the sun. The sunlight provides Vitamin D, improves immunity and also kills such (#Coronavirus) viruses. pic.twitter.com/F80PX6VOmy
— ANI (@ANI) March 19, 2020
ಜನರು ಕನಿಷ್ಠ 15 ನಿಮಿಷ ಬಿಸಿಲಿನಲ್ಲಿ ಕಳೆಯಬೇಕು. ಸೂರ್ಯನ ಬೆಳಕು ವಿಟಮಿನ್ ಡಿ ಅನ್ನು ಒದಗಿಸುತ್ತದೆ, ಅದರಿಂದ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ ಮತ್ತು ಕೊರೊನ ವೈರಸ್ಗಳನ್ನು ಸಹ ಕೊಲ್ಲುತ್ತದೆ ಎಂದು ಸಚಿವರು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ.
ಈ ಮೂಢನಿಗೆ ವಿಜ್ಞಾನ ಮತ್ತು ಆರೋಗ್ಯದ ಬಗ್ಗೆ ಸ್ವಲ್ಪವೂ ಜ್ಞಾನವಿಲ್ಲದಿದ್ದರೂ ಸಹ ಆರೋಗ್ಯ ಸಚಿವನಾಗಿದ್ದಾನೆ ಎಂದು ರವಿರಂಜನ್ ಎಂಬುವವರು ಟ್ವಿಟ್ಟರ್ನಲ್ಲಿ ಕಿಡಿಕಾರಿದ್ದಾರೆ.
ಭಾರತ ಸರ್ಕಾರ ಕೂಡಲೇ ಈತನ ಮೇಲೆ ಕ್ರಮ ಕೈಗೊಳ್ಳಬೇಕು. ಕೊರೊನ ಸಂಕಷ್ಟದ ಕಾಲದಲ್ಲಿ ಆರೋಗ್ಯ ಮಂತ್ರಿಯೇ ಅವಿವೇಕಿಯ ಥರ ಮಾತನಾಡಿದರೆ ಉಳಿದವರ ಬಗ್ಗೆ ಏನು ಹೇಳುವುದು ಎಂದು ರವೀಂದ್ರ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನಡವೆ ಕೊರೊನಾ ವಿರುದ್ಧ ಹೋರಾಡಲು ಗೋಮೂತ್ರ ಪಾರ್ಟಿ ಆಯೋಜಿಸಿದ್ದ ಕಾರ್ಯಕರ್ತನೊಬ್ಬನ್ನನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ. ಅಲ್ಲಿ ಗೋಮೂತ್ರ ಕುಡಿದಿದ್ದ ಬಿಜೆಪಿ ಕಾರ್ಯಕರ್ತನೊಬ್ಬ ಅಸ್ವಸ್ಥನಾಗಿ ಆಸ್ಪತ್ರೆ ಸೇರಿದ್ದಾನೆ ಎಂದು ವರದಿಯಾಗಿದೆ.