Homeಮುಖಪುಟವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

ವಿಜಯ ಕರ್ನಾಟಕದ ವಿರುದ್ದ ಕಾನೂನು ಹೋರಾಟ: ಮುಸ್ಲಿಂ ಜಮಾಅತ್

- Advertisement -
- Advertisement -

“ವಿಜಯ ಕರ್ನಾಟಕ” ಕನ್ನಡ ದಿನಪತ್ರಿಕೆಯು ಕರೊನಾವನ್ನು ಕೋಮುವಾದಕ್ಕೆ ಬಳಸುತ್ತಿದೆ ಎಂದು ಆರೋಪಿಸಿ ಪತ್ರಿಕೆಯ ವಿರುದ್ದ ಕರ್ನಾಟಕ ಮುಸ್ಲಿಂ ಜಮಾಅತ್ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ದಿನ ಪತ್ರಿಕೆಯು ತನ್ನ ಮುಖಪುಟದಲ್ಲಿ ಒಂದು ಸಮುದಾಯವನ್ನು ಉದ್ದೇಶಿಸಿ “ಸತ್ತವರೆಲ್ಲ ಒಂದೇ ಸಮುದಾಯದವರು” ಎಂಬ ತಲೆ ಬರಹದ ವರದಿಯನ್ನು ಮಾಡಿತ್ತು.

ಇದನ್ನು ವಿರೋಧಿಸಿ ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಧಾನ ಕಾರ್‍ಯದರ್ಶಿ ಎನ್.ಕೆ.ಎಂ. ಶಾಫಿ ಸಅದಿ “ಧರ್ಮ, ವರ್ಗ, ವರ್ಣ ಎಂಬ ವ್ಯತ್ಯಾಸ ಇಲ್ಲದೆ ಎಲ್ಲರಲ್ಲೂಕೊರೊನ ರೋಗ ಕಂಡು ಬಂದಿದೆ. ಆದರೆ ಕನ್ನಡ ಪತ್ರಿಕೋದ್ಯಮದ ಕೆಲವರ ಕೋಮು ಮನಸ್ಥಿತಿ ಈ ಕೊರೊನವನ್ನೂ ಕೋಮುವಾದೀಕರಣ ಮಾಡಲು ಹೊರಟಿದೆ, ’ಸತ್ತವರೆಲ್ಲಾ ಒಂದೇ ಸಮುದಾಯದವರು’ ಎಂಬ ಮುಖಪುಟ ವರದಿಯನ್ನು ಪ್ರಕಟಿಸಿರುವ ಕನ್ನಡದ ಪ್ರಮುಖ ಪತ್ರಿಕೆಯೊಂದು ಈ ವೈರಸ್ ಕರ್ನಾಟಕದಲ್ಲಿ ಯಾವ ಧರ್ಮದವರಲ್ಲಿ ಹೆಚ್ಚು ಬಂದಿದೆ, ಯಾವ ಧರ್ಮದವರು ಹೆಚ್ಚು ಸತ್ತಿದ್ದಾರೆ, ಯಾವ ಧರ್ಮದವರಿಗೆ ಪೋಲೀಸರು ಹೆಚ್ಚು ಹೊಡೆದಿದ್ದಾರೆ ಎನ್ನುವ ಸುದ್ದಿಯೊಂದಿಗೆ ವಿಕೃತ ಮನೋಭಾವವನ್ನು ಪ್ರದರ್ಶಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಲ್ಲದೆ, ’ಕೊರೋನಾ ಹರಡಿ’ ಎಂದು ಟ್ವಿಟರ್ ನಲ್ಲಿ ಕರೆ ನೀಡಿದ್ದ ಕಿಡಿಗೇಡಿಯೊಬ್ಬನ ನೀಚ ಕೃತ್ಯವನ್ನೂ ಈ ವರದಿಯೊಂದಿಗೆ ಜೋಡಿಸಿ ಇತರ ಸಮುದಾಯಗಳ ಮಧ್ಯೆ ಮುಸ್ಲಿಂ ಸಮುದಾಯವನ್ನು ತಪ್ಪಿತಸ್ಥ ವಿಭಾಗವನ್ನಾಗಿ ಚಿತ್ರೀಕರಿಸುವ ಪ್ರಯತ್ನವೂ ನಡೆದಿದೆ” ಎಂದು ಅವರು ಆರೋಪಿಸಿದ್ದಾರೆ.

“ಮನುಷ್ಯ ವರ್ಗದ ಭಾವುಕ ಕ್ಷಣಗಳನ್ನು, ಸೂಕ್ಷ್ಮ ಸಂವೇದನೆಗಳನ್ನು ಕೋಮು ವೈಷಮ್ಯಕ್ಕೆ ತಿರುಗಿಸುವ ಈ ಹೀನ ಕೃತ್ಯ ಖಂಡನೀಯ. ಇದು ಅಮಾನವೀಯ ಮತ್ತು ಪತ್ರಿಕಾ ಧರ್ಮಕ್ಕೆ ವಿರುದ್ಧ” ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿಪ್ರಾಯಪಟ್ಟಿದೆ.

“ಕೊರೊನ ವಿರುದ್ದ ಹೋರಾಟದಲ್ಲಿ ಇಡೀ ಮುಸ್ಲಿಂ ಸಮುದಾಯ ಭಾಗಿಯಾಗಿದ್ದು, ಚರಿತ್ರೆಯಲ್ಲೇ ಮೊದಲ ಬಾರಿ ಮುಸ್ಲಿಮರು ಮಸೀದಿಗಳಲ್ಲಿ ನಮಾಝ್ ನಿಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಮುಸ್ಲಿಮರು ನಮಾಝ್ ಮಾಡಲು ಮಸೀದಿಗೆ ಹೋಗಬೇಕಾಗಿಲ್ಲ ಎಂಬ ಫತ್ವಾವನ್ನು ಅತ್ಯಂತ ಯಶಸ್ವಿಯಾಗಿ ಸಮುದಾಯದ ಮಧ್ಯೆ ಬಿತ್ತರಿಸಲು ಮುಸ್ಲಿಂ ಪಂಡಿತರಿಗೆ ಸಾಧ್ಯವಾಗಿದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಮುಸ್ಲಿಮರ ಈ ಹೋರಾಟವನ್ನು ಶ್ಲಾಘಿಸಿದ್ದಾರೆ”ಎಂದು ಹೇಳಿದ್ದಾರೆ.

ಇಂದು ತುರ್ತಾಗಿ ವೀಡಿಯೋ ಕಾನ್ನರೆನ್ಸ್ ಮೂಲಕ ಸಭೆ ನಡೆಸಿದ ಮುಸ್ಲಿಂ ಜಮಾಅತ್ ರಾಜ್ಯ ಸಕಟರಿಯೇಟ್ ಈ ವರದಿ ಮತ್ತು ಪತ್ರಿಕೆಯ ವಿರುದ್ಧ ಮುಖ್ಯಮಂತ್ರಿಗಳಿಗೆ, ಪತ್ರಿಕಾ ಸಂಪಾದಕರಿಗೆ ಮತ್ತು ಪೆಸ್ ಕೌನ್ಸಿಲ್‌ಗೆ ದೂರು ನೀಡಲು ನಿರ್ಧರಿಸಿದೆ ಅಲ್ಲದೆ ಅಗತ್ಯ ಬಿದ್ದಲಿ ಕಾನೂನು ಹೋರಾಟಕ್ಕೂ ಸಂಘಟನೆ ಸಿದ್ದವಾಗಿದೆ ಎಂದು ಮುಸ್ಲಿಂ ಜಮಾಅತ್ ಹೇಳಿದೆ.

ಜನರು ಸಾಮರಸ್ಯವನ್ನು ಕದಡದೆ, ಕೋಮುವಾದಿಗಳ ಪ್ರಯತ್ನವನ್ನು ಸಫಲಗೊಳಿಸಲು ಬಿಡಬಾರದು ಎಂದು ಜಮಾಅತ್ ಜನತೆಯೊಂದಿಗೆ ವಿನಂತಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...