Homeಮುಖಪುಟಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಜಗತ್ತಿನಾದ್ಯಂತ ಪ್ರಜಾಪ್ರಭುತ್ವದ ಮುಖವಾಡದಲ್ಲಿರುವ ಎಲ್ಲಾ ಸರ್ವಾಧಿಕಾರಗಳಂತೆ ಭಾರತದಲ್ಲಿ ನರೇಂದ್ರ ಮೋದಿ ಸರಕಾರವೂ ಕೋವಿಡ್- 19 ಪಿಡುಗನ್ನು ಭಿನ್ನಮತದ ದಮನಕ್ಕೆ ಅಸ್ತ್ರವಾಗಿ ಬಳಸುತ್ತಿದೆ.

- Advertisement -
- Advertisement -

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತ ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.

ಮೂಲ: ಹರ್ಷ್ ಮಂದರ್ ಮತ್ತು ಅಮಿತಾಂಶು

ಭಾವಾನುವಾದ: ನಿಖಿಲ್ ಕೋಲ್ಪೆ

ದಿಲ್ಲಿಯಲ್ಲಿ ದೊಡ್ಡ ಸಂಖ್ಯೆಯ ಜನರನ್ನು- ಮುಖ್ಯವಾಗಿ ಮುಸ್ಲಿಮರನ್ನು- ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಪಿಎ) ವಿರೋಧಿ ಪ್ರತಿಭಟನೆಗಳು ಮತ್ತು ಇತ್ತೀಚಿನ ಕೋಮುಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಭಾರತದ ಕರಾಳ ಲಾಕ್‌ಡೌನ್ ನೆರಳಿನ ಅಡಿಯಲ್ಲಿ ಕೇಂದ್ರ ಸರಕಾರದ ನಿಯಂತ್ರಣದಲ್ಲಿರುವ ದಿಲ್ಲಿ ಪೊಲೀಸ್ ಇಲಾಖೆ ಕೋವಿಡ್-19 ಪಿಡುಗಿನ ನಿಯಂತ್ರಣಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿರದ ಕೆಲಸಗಳಲ್ಲಿ ವ್ಯಸ್ತವಾಗಿದೆ.

ಅದರ ಘನ ಕಾರ್ಯಗಳಲ್ಲಿ- ಕಚೇರಿ ಮತ್ತು ಮನೆಗಳಿಗೆ ಬೀಗಮುದ್ರೆ ಜಡಿಯುವುದು, ಫೋನ್ ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳುವುದು, ದೊಡ್ಡ ಸಂಖ್ಯೆಯಲ್ಲಿ ಜನರನ್ನು ಬಂಧಿಸುವುದು ಸೇರಿದೆ. ಕೊರೋನ ವೈರಸ್ ಹರಡದಂತೆ ತಡೆಯಲು ಜೈಲುಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸರಕಾರಗಳಿಗೆ ನೀಡಿರುವ ನಿರ್ದೇಶನಕ್ಕೆ ವ್ಯತಿರಿಕ್ತವಾಗಿ ಇದು ನಡೆಯುತ್ತಿದೆ ಎಂಬುದು ಬೇರೆಯೇ ಕತೆಯನ್ನು ಹೇಳುತ್ತದೆ.

ಬಂಧಿತರ ವಿರುದ್ಧ ಹೇರಲಾಗುತ್ತಿರುವ ಆರೋಪಗಳೆಂದರೆ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದುದು ಮತ್ತು ಈಶಾನ್ಯ ದಿಲ್ಲಿಯ ಕಾರ್ಮಿಕರ ವಸತಿ ಪ್ರದೇಶಗಳಲ್ಲಿ ನಡೆದ 1947ರ ದೇಶ ವಿಭಜನೆಯ ಬಳಿಕದ ಅತ್ಯಂತ ಭೀಕರ ಹಿಂದೂ- ಮುಸ್ಲಿಂ ಗಲಭೆಗಳನ್ನು ಪ್ರಚೋದಿಸಿದ್ದು ಅಥವಾ ಭಾಗವಹಿಸಿದ್ದು.

ಗೃಹ ಸಚಿವಾಲಯದ ಆದೇಶ

ಲಾಕ್‌ಡೌನ್ ಬಳಿಕದ ಸ್ವಲ್ಪ ಮಟ್ಟಿನ ಹಿಂಜರಿಕೆಯ ನಂತರ ಏಕಾಏಕಿಯಾಗಿ ಏರಿದ ಈ ಬಂಧನ ಹಿಂದೆ ಕೇಂದ್ರ ಗೃಹ ಸಚಿವಾಲಯವು ದಿಲ್ಲಿ ಕ್ರೈಂ ಬ್ರಾಂಚಿಗೆ ನೀಡಿದ ಆದೇಶ ಇದೆಯೆಂದು ವರದಿಯಾಗಿದೆ.

ಮಾರ್ಚ್ 22ರಿಂದ ಎಪ್ರಿಲ್ ಮಧ್ಯಭಾಗದ ತನಕ ಈಶಾನ್ಯ ದಿಲ್ಲಿಯ ಗಲಭೆಪೀಡಿತ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ 25ರಿಂದ 30 ಮಂದಿಯನ್ನು ಬಂಧಿಸಲಾಗಿದೆ ಎಂದು “ದಿ ಹಿಂದೂ” ವರದಿ ಮಾಡಿದೆ. “ಇಂಡಿಯನ್ ಎಕ್ಸ್‌ಪ್ರೆಸ್” ಪ್ರಕಾರ 802 ಬಂಧನಗಳು ನಡೆದಿದ್ದು, ಇವುಗಳಲ್ಲಿ ಕನಿಷ್ಟ 50 ಲಾಕ್‌ಡೌನ್ ಅವಧಿಯಲ್ಲಿ ನಡೆದಂತವುಗಳು. ಆದರೆ, ಕೆಲವು ವರದಿಗಳು ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳುತ್ತವೆ. ಅವುಗಳ ಪ್ರಕಾರ ದಿನಕ್ಕೆಆರರಿಂದ ಏಳು ಬಂಧನಗಳು ನಡೆಯುತ್ತಿದ್ದು, ಲಾಕ್‌ಡೌನ್ ಅವಧಿಯಲ್ಲಿ ಮಾಧ್ಯಮ ಮತ್ತು ಕಾನೂನು ಸೇವೆಗಳ ಮೆಲೆ ಹೊರಿಸಲಾಗಿರುವ ತೀವ್ರತರವಾದ ನಿರ್ಬಂಧಗಳಿಂದಾಗಿ ನಿರ್ದಿಷ್ಟ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಲು ಅಸಾಧ್ಯವಾಗಿದೆ.

ಈ ಪ್ರದೇಶಗಳ ಮುಸ್ಲಿಮರನ್ನು ಗುರಿಪಡಿಸಲಾಗುತ್ತಿದ್ದು, ಯುವ ನಾಯಕ ಉಮರ್ ಖಾಲಿದ್, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿ ನಾಯಕರಾದ ಮೀರಾನ್ ಹೈದರ್, ಗರ್ಭಿಣಿಯಾಗಿರುವ ಸಫೂರಾ ಝರ್ಗಾರ್ ಸಹಿತ ಯುವಕರ ಮೇಲೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊರಿಸಲಾಗುತ್ತಿದೆ. ಅವರ ವಿರುದ್ಧ ಕರಾಳವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅನ್ವಯ ಕೇಸು ದಾಖಲಿಸಲಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ)ನ ಎಡಪಂಥೀಯ ನಾಯಕಿ ಕನ್ವಲ್ಜಿತ್ ಕೌರ್ ಅವರ ಮನೆಗೆ ದಾಳಿ ನಡೆಸಿ ಅವರ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

ಭಿನ್ನಮತ, ದಮನಕ್ಕೆ ಕೇಂದ್ರ ಸರಕಾರದಿಂದ, ಕೋವಿಡ್- 19 ಅಸ್ತ್ರ ಬಳಕೆ

ಈ ಯದ್ವಾತದ್ವಾ ಬಂಧನಗಳನ್ನು ವಿರೋಧಿಸಿ ದಿಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ದಿಲ್ಲಿ ಪೊಲೀಸ್ ಕಮೀಷನರ್‌ಗೆ ಪತ್ರ ಬರೆದಿದ್ದರು. ಆದರೆ ಪೊಲೀಸರು ಅವರ ಮೇಲೆಯೇ ಪಿಡುಗು ಹರಡುವಿಕೆ ಕುರಿತು ನೀಡಿದ ಹೇಳಿಕೆಯನ್ನು ಹಿಡಿದುಕೊಂಡು ರಾಷ್ಟ್ರದ್ರೋಹದ ಕೇಸು ದಾಖಲಿಸಿದ್ದಾರೆ.

ಕಾನೂನು ಸೇವೆಗಳಿಗೆ ಕತ್ತರಿ

ಪೊಲೀಸರು ತಮ್ಮ ಬಂಧನ ಸತ್ರವನ್ನು ಹೆಚ್ಚಿಸಿರುವಂತೆಯೇ ಲಾಕ್‌ಡೌನ್ ಅಡಿಯಲ್ಲಿ ಅನುಮತಿಸಲಾಗಿರುವ ಅಗತ್ಯ ಸೇವೆಗಳಲ್ಲಿ ಕಾನೂನು ಸೇವೆಗಳನ್ನು ಸೇರಿಸದೇ ಇರುವುದು ಗಮನಾರ್ಹ. ಇದರ ಅರ್ಥವೆಂದರೆ, ಆರೋಪಿತ ವ್ಯಕ್ತಿಗಳ ಮೂಲಭೂತ ಹಕ್ಕುಗಳ ದಮನವಾಗಿದೆ. ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳನ್ನು ಉಲ್ಲಂಘಿಸಲಾಗುತ್ತಿದ್ದು, ಬಂಧಿತರ ಕುಟುಂಬಗಳಿಗೆ ಎಫ್‌ಐಆರ್ ಪ್ರತಿಗಳನ್ನೂ ನೀಡಲಾಗುತ್ತಿಲ್ಲ. ಮೇಲಾಗಿ ಅವರೆಲ್ಲಾ ಕೂಲಿ ಕಾರ್ಮಿಕರು ಅಥವಾ ಚಿಕ್ಕ ವ್ಯಾಪಾರಿ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ ಲಾಕ್‌ಡೌನ್‌ನಿಂದ ಆದಾಯ ಸಂಪೂರ್ಣ ನಿಂತುಹೋಗಿ, ಕಾನೂನು ಸೇವೆಯನ್ನೂ ಪಡೆಯಲಾಗದೆ ಇನ್ನಷ್ಟು ಭಯಭೀತರಾಗಿದ್ದಾರೆ.

ಪತ್ರಕರ್ತರು, ವಕೀಲರು ಮತ್ತು ಮಾನವಹಕ್ಕು ಹೋರಾಟಗಾರರಿಗೂ ಪೊಲೀಸ್ ಕಾರ್ಯಾಚರಣೆಗಳ ಬಲಿಪಶುಗಳನ್ನು ಭೇಟಿಯಾಗಲು ಅವಕಾಶವಿಲ್ಲವಾದುದರಿಂದ ಭಯ ಮತ್ತು ಗೌಪ್ಯದ ಪರದೆಯಿಂದೀಚೆಗೆ ಸ್ವಲ್ಪವೇ ಮಾಧ್ಯಮ ಸುದ್ದಿಗಳು ಹೊರಗೆ ಬರುತ್ತಿವೆ.

ಈ ಆರೋಗ್ಯ ತುರ್ತುಸ್ಥಿತಿಯಲ್ಲಿ ನ್ಯಾಯವೇ ಅಗತ್ಯ ಸೇವೆಯಾಗದೇ ಇರುವುದರಿಂದ, “ಕಾನೂನಿನ ಎದುರು ಸಮಾನತೆ“ಯ ತತ್ವವೇ ಲಾಕ್‌ಡೌನ್‌ನಲ್ಲಿದೆ.

ಕಾನೂನು ಪ್ರಕಾರ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡ 24 ಗಂಟೆಗಳ ಒಳಗಾಗಿ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸಬೇಕು. ಆದರೆ, ಇದನ್ನು ಗಾಳಿಗೆ ತೂರಿರುವ ಪೊಲೀಸರು, ನೇರವಾಗಿ ಜೈಲಿನ ಒಳಗೆಯೇ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸುತ್ತಿದ್ದಾರೆ. ಲಾಕ್‌ಡೌನ್ ನೆಪದಲ್ಲಿ ವಕೀಲರಿಗೂ ವಿಚಾರಣೆಯಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿದೆ. ಕೆಳಗಿನ ನ್ಯಾಯಾಲಯಗಳಲ್ಲಿ ವಿಡಿಯೋ ವಿಚಾರಣೆಯ ಸೌಲಭ್ಯವೂ ಇಲ್ಲವಾದುದರಿಂದ ಬಂಧಿತರು ಜಾಮೀನಿನ ಅವಕಾಶವಿಲ್ಲದೆ ಜೈಲುಪಾಲಾಗಬೇಕಾಗುತ್ತಿದೆ.

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತವನ್ನು ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.


ಓದಿ: ಮೇ 16(ಇಂದು) ನ್ಯಾಯದ ದಿನ: ಡಾ. ಆನಂದ್ ತೇಲ್ತುಂಬ್ಡೆ ಪರ ದನಿ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...