Homeಕರ್ನಾಟಕಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?

- Advertisement -
- Advertisement -

ಕೊರೊನಾ ಲಾಕ್ ಡೌನ್ ನಿಂದಾಗಿ ದೇಶದಾದ್ಯಂತ ವಲಸಿಗ ಕಾರ್ಮಿಕರು ಬೇರೆ ಬೇರೆ ಕಡೆ ಸಿಕ್ಕಿಬಿದ್ದಿದ್ದು, ಅಲ್ಲಿ ದುಡಿಮೆಯಿಲ್ಲದೇ ಹೊಟ್ಟೆಗೆ ಅನ್ನವೂ ಇಲ್ಲದೆ ಹತಾಶರಾಗಿ ಸಾವಿರಾರು ಕಿಲೋಮೀಟರ್ ದೂರದ ತಮ್ಮ ರಾಜ್ಯಗಳಿಗೆ ಬರಿ ಕಾಲಲ್ಲೇ ಹೊರಟು ದಾರಿಯಲ್ಲಿ ಅಫಘಾತ ಸಂಭವಸಿ ಹಾಗೂ ಬಳಲಿ ಜೀವ ಬಿಟ್ಟ ನಂತರ, ಎಲ್ಲೆಡೆಯಿಂದ ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳು ಬಂದದ್ದರಿಂದ ವಿಶೇಷ ಶ್ರಮಿಕ ರೈಲುಗಳನ್ನು ಬಿಟ್ಟಿದೆ.

ಕೇಂದ್ರ ಸರ್ಕಾರ ಈ ರೈಲಿನ ದರವನ್ನು 85% ತಾನು ಪಾವತಿಸುವುದಾಗಿ ಹೇಳಿದ್ದರೂ, ರಾಜ್ಯದ ವಿವಿದ ಭಾಗಗಳಿಂದ ವಲಸೆ ಕಾರ್ಮಿಕರೇ ಹಣವನ್ನು ತೆತ್ತು ಪ್ರಯಾಣಿಸುತ್ತಿರುವ ವರದಿಗಳು ಬರುತ್ತಿವೆ. ರಾಜ್ಯದಲ್ಲೂ ಬೆಂಗಳೂರನ್ನು ಕೇಂದ್ರವಾಗಿಸಿ ರೈಲುಗಳನ್ನು ಬಿಡುತ್ತೇವೆಂದು ಹೇಳಿದ ನಂತರ ಯಾವುದೋ ಹಿತಾಸಕ್ತಿಗೆ ಮಣಿದು ರೈಲನ್ನು ರದ್ದು ಮಾಡಿತ್ತು. ಇದರ ನಂತರ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ಬಂದದ್ದರಿಂದ ರೈಲುಗಳನ್ನು ಬಿಡಲು ಒಪ್ಪಿಕೊಂಡು ರೈಲು ಪ್ರಯಾಣವನ್ನು ಪ್ರಾರಂಭಿಸಿತ್ತು.

ಆದರೆ ಸದ್ಯದ ಪರಿಸ್ಥಿತಿಯೇನೆಂದರೆ ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲೂ ಹಲವಾರು ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ. ಹೆಚ್ಚಿನ ಕಾರ್ಮಿಕರಿಗೆ ನಡೆಯುತ್ತಿರುವ ವಿದ್ಯಮಾನಗಳೇನೂ ತಿಳಿಯದೇ ಇನ್ನೂ ಹತಾಶರಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಲ್ಪೆ ಬಂದರಿನಲ್ಲಿ ಇದ್ದ 400ರಷ್ಟು ವಲಸೆ ಕಾರ್ಮಿಕರು ಹೀಗೆಯೇ ಸಿಕ್ಕಿ ಬಿದ್ದಿದ್ದರು. ಮೀನುಗಾರಿಕೆಗೆ ಈಗ ಸೀಸನ್ ಆಗಿರುವುದರಿಂದ ಅವರನ್ನು ಕಳುಹಿಸಿಕೊಡಲು ಉದ್ಯೋಗದಾತರಿಗೂ ಮನಸಿರಲಿಲ್ಲ, ಅವರನ್ನು ಕರೆಸಿಕೊಳ್ಳಲೂ ಅವರ ಸರ್ಕಾರಕ್ಕೂ ಮನಸಿಲ್ಲದೇ ಇರುವುದರಿಂದ ಬಂದರಿನಲ್ಲಿಯೇ ಬಾಕಿಯಾಗಿದ್ದರು. ನಂತರ ಸಾಮಾಜಿಕ ಕಾರ್ಯಕರ್ತರು ಆಂಧ್ರ ಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿತ್ತು.

ಆಂಧ್ರದ ಈ ವಲಸಿಗರ ನಡುವೆ ಇದ್ದ 6 ಉತ್ತರ ಪ್ರದೇಶದ ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ. ಅವರೊಂದಿಗೆ ಇದ್ದ ಇತರರಲ್ಲಿ ಕೇಳಿದಾಗ ಅವರು ನಡೆದುಕೊಂಡು ಹೊರಟಿದ್ದಾರೆಂದು ಹೇಳಲಾಗುತ್ತಿದೆಯಾದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಅವರಿಗಾಗಿ ಕೆಲಸ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರು ಹೇಳುತ್ತಾರೆ.

ಆದರೂ ಮಾಹಿತಿಯ ಕೊರತೆಯಿಂದ ಇನ್ನೂ ಉಡುಪಿಯಾದ್ಯಂತ ಸುಮಾರು 263 ಜಾರ್ಖಂಡ್ ವಲಸೆ ಕಾರ್ಮಿಕರು ಬಾಕಿಯಾಗಿದ್ದಾರೆ ಎಂಬುದು ಅವರ ಅನಿಸಿಕೆ. ಮೊನ್ನೆ ದಿನಾಂಕ 10ರಂದು ಶ್ರಮಿಕ್ ರೈಲೊಂದು ಜಾರ್ಖಂಡಿನ ಹಟಿಯಾಗೆ ಮಂಗಳೂರಿನಿಂದ ಉಡುಪಿ ಮೂಲಕ ಹೊರಟಿದ್ದರೂ, ಉಡುಪಿಯಲ್ಲೇ ಉಳಿದಿರುವ ವಲಸಿಗ ಕಾರ್ಮಿಕರಿಗೆ ಅದು ತಿಳಿದಿಲ್ಲ. ರಾಜ್ಯ ಸರ್ಕಾರ ಕೇವಲ ಬೆಂಗಳೂರನ್ನು ಕೇಂದ್ರೀಕರಿಸಿದ್ದರಿಂದ ಆದ ಪ್ರಮಾದಗಳಿವು.

ವಲಸಿರಿಗಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಪ್ರಕಾರ ಈ ಕಾರ್ಮಿಕರನ್ನು ಕೇವಲ ಯಂತ್ರಗಳಂತೆ ಮಾಲೀಕರು ಬಳಸುತ್ತಿದ್ದಾರೆ.

ಇಲ್ಲಿನ ಸ್ಥಳೀಯ ಜನ ಪ್ರತಿನಿಧಿಗಳಿಗೂ ಇವರಿಂದ ಮತಗಳು ಆಗುವುದಿಲ್ಲವಾದ್ದರಿಂದ ಅವರೂ ಇವರ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಕೇವಲ ಇವರಿಗಾಗಿ ಇಲ್ಲಿಂದ ಜಾರ್ಖಂಡಿಗೆ ರೈಲುಗಳನ್ನು ಬಿಡಲು ಸಾಧ್ಯವಿಲ್ಲ. ಈಗ ಜಿಲ್ಲಾಡಳಿತ ಮಾನವೀಯ ದೃಷ್ಟಿಯಿಂದ ಅವರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳುತ್ತಾರೆ.

ಹೆಚ್ಚಾಗಿ ಆದಿವಾಸಿಗಳೇ ಇರುವ ರಾಜ್ಯವಾದ ಜಾರ್ಖಂಡ್ ನಿಂದ ದೇಶದಾದ್ಯಂತ ವಲಸೆ ಕಾರ್ಮಿಕರು ಹರಡಿಹೋಗಿದ್ದಾರೆ. ಅಲ್ಲಿನ ಸರ್ಕಾರ ತನ್ನ ರಾಜ್ಯದ ಪ್ರಜೆಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಉಡುಪಿಯವರು ಹೇಳಿದರು. ಜಾರ್ಖಂಡ್ ಮುಖ್ಯಮಂತ್ರಿ ಹೆಮಂತ್ ಸೊರೆನ್, ಶ್ರಮಿಕ್ ರೈಲುಗಳ ವೆಚ್ಚವನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಉಡುಪಿಯಲ್ಲಿ ಉಳಿದಿರುವ ಜಾರ್ಖಂಡಿನ ಒಟ್ಟು 263 ವಲಸೆ ಕಾರ್ಮಿಕರಲ್ಲಿ 168 ಜನರಷ್ಟೇ ಅಧಿಕೃತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಉಳಿದವರು ತಾವು ಏನು ಮಾಡಬೇಕು ಎಂದು ತಿಳಿಯದೆ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಿದ್ದಾರೆ. ಮಣಿಪಾಲದಲ್ಲಿ ಉಳಿದಿರುವ ಹೆಚ್ಚಿನ ಕಾರ್ಮಿಕರು ಏನೂ ಮಾಹಿತಿಗಳಿಲ್ಲದವರೆ ಆಗಿದ್ದಾರೆ.

ಇಷ್ಟರವರೆಗೆ ಉಡುಪಿಯಲ್ಲಿ ತಮ್ಮ ಬೆವರು ಹರಿಸಿದ ಕಾರ್ಮಿಕರ ನೆರವಿಗೆ ಅಲ್ಲಿನ ಜಿಲ್ಲಾಡಳಿತ ಬರಬೇಕು. ಅವರನ್ನು ಬೆಂಗಳೂರಿಗೆ ತಲುಪಿಸಲು ಜಿಲ್ಲಾಡಳಿತ ನೆರವಾದರೆ ಬೆಂಗಳೂರಿನಿಂದ ಹೊರಡುವ ಹಟಿಯಾ ಎಕ್ಸ್ ಪ್ರೆಸ್ ಮೂಲಕ ಅವರು ತಮ್ಮ ರಾಜ್ಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಅವರ ಪರವಾಗಿ ಇಲ್ಲಿ ಕೆಲಸ ಮಾಡುತ್ತಿರುವವರ ಅನಿಸಿಕೆಯಾಗಿದೆ.


ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?


ವಿಡಿಯೊ ನೋಡಿ: ಸದ್ದು…ಈ ಸುದ್ದಿಗಳೇನಾಗಿವೆ.ಮರೆಯಲೇಬಾರದ ಸುದ್ದಿಗಳು. ಏಳನೇ ಸಂಚಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...