Homeಕರ್ನಾಟಕಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ಆಕೆ ಯಾವಾಗಲೂ ಹಾಗೆಯೇ ಅಂತೆ ಎಂದು ಹೇಳಿದ ಸಚಿವ ಮಾಧುಸ್ವಾಮಿಯವರು ಉಲ್ಲೇಖಿಸುತ್ತಿರುವ ನಳಿನಿ ಯಾರು? ಅವರ ಹಿನ್ನೆಲೆಯೇನು? ಯಾವಾಗಲೂ ಅವರು ಹೇಗೆ ಮಾಡುತ್ತಾರೆ, ನಳಿನಿಯವರನ್ನು ಸ್ವತಃ ಬಲ್ಲ ಡಾ.ವಾಸು ಎಚ್‌.ವಿ ಅವರ ಬರಹ

- Advertisement -
- Advertisement -

ನಳಿನಿ
ಕೋಲಾರ ಜಿಲ್ಲೆಯ ಅಗ್ರಹಾರ ಕೆರೆಯ ವೀಕ್ಷಣೆಗೆ ಹೋಗಿದ್ದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಯರನ್ನು ಪ್ರಶ್ನಿಸಿದ ನಳಿನಿ ಇಂದು ಆಕೆಯನ್ನು ಟಿವಿಯಲ್ಲಿ ನೋಡುತ್ತಿರುವ ಹೆಚ್ಚಿನವರಿಗೆ ಪರಿಚಯವಿರಲಿಕ್ಕಿಲ್ಲ. ಆದರೆ ಕೋಲಾರದಲ್ಲಿ ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ರೈತಸಂಘದ ಕಾರ್ಯಕರ್ತರಿಗೆ ನಳಿನಿ ಚೆನ್ನಾಗಿ ಗೊತ್ತು. ಏಕೆಂದರೆ ಕಳೆದ ಸುಮಾರು ಏಳೆಂಟು ವರ್ಷಗಳಿಂದ ರೈತಸಂಘ ಮತ್ತು ಇತರ ಪ್ರಗತಿಪರ ಸಂಘಟನೆಗಳ ನೂರಾರು ಕಾರ್ಯಕ್ರಮಗಳು/ಹೋರಾಟಗಳಲ್ಲಿ ಅವರಿದ್ದಾರೆ.

‘ಆಯಮ್ಮ ಹಾಗೇ ಅಂತ, ಯಾರು ಬಂದರೂ ಹೋಗಿ ಪ್ರಶ್ನಿಸುವುದು. ಬೇಕಾದರೆ ಆ ವಿಡಿಯೋ ನೋಡಿ, ಅದರಲ್ಲಿ ಇನ್ಸ್‍ಪೆಕ್ಟರ್‍ರನ್ನು ‘ಏನ್ಸಾರ್ ಯಾವಾಗಲೂ ನೀವು ಹೀಗೇ ಮಾಡ್ತೀರಾ?, ನಮಗೆ ಅವಕಾಶವನ್ನೇ ಕೊಡಲಿಲ್ಲ’ ಎಂದಿದ್ದಾರೆ ಎಂಬ ಅರ್ಥದಲ್ಲಿ ಸಚಿವ ಮಾಧುಸ್ವಾಮಿಯವರು ತಮ್ಮ ‘ಕ್ಷಮಾಪಣಾ ಹೇಳಿಕೆ’ಯಲ್ಲೂ ಆರೋಪ ಮಾಡಿದ್ದಾರೆ. ನಳಿನಿಯವರು ಹೇಳುವ ಪ್ರಕಾರ, ಅವರನ್ನು ಅಲ್ಲಿಂದ ತಳ್ಳಿಕೊಂಡು ಹೋದ ಇನ್ಸ್‍ಪೆಕ್ಟರ್ ಸಹಾ ‘ನೀನು ಯಾವಾಗಲೂ ಹೀಗೆಯೇ ಮಾಡುತ್ತೀಯಾ’ ಎಂದು ಹೇಳಿ, ‘ಈಕೆ ಮೇಲೆ ಒಂದೆರಡು ಕೇಸು ಫಿಟ್ ಮಾಡ್ರಿ’ ಎಂದು ಅಲ್ಲಿದ್ದ ಪೊಲೀಸರಿಗೆ ಹೇಳಿ ಹೋದರಂತೆ.

ಹೌದಾ? ನಳಿನಿ ಹಾಗೆ ಮಾಡುತ್ತಾರಾ? ಮಾಧುಸ್ವಾಮಿಯವರು ಹೇಳಿದಂತೆ ಆಕೆ ಅತಿರೇಕ ಮಾಡುತ್ತಾರಾ? ಸ್ವತಃ ಆ ವಿಡಿಯೋ ನೋಡಿದ ಯಾರೊಬ್ಬರೂ ಅದನ್ನು ನಂಬಲಾರರು. ಆದರೆ ನಳಿನಿಯವರನ್ನು ಸಾಕಷ್ಟು ಕಾಲದಿಂದ ನೋಡಿರುವ ನಮ್ಮಂಥವರ ಅಭಿಪ್ರಾಯವೇನು?

ನಳಿನಿಯವರ ಹಿನ್ನೆಲೆಯೇನು?
ಸ್ವತಃ ರೈತರೂ, ರೈತ ಸಂಘಟನೆಯ ಮುಖಂಡರೂ ಇರುವ ಒಟ್ಟು ಕುಟುಂಬದ ಮಗಳು ನಳಿನಿ. ಕೋಲಾರದಲ್ಲೇ ಬಿಕಾಂ ಮುಗಿಸಿರುವ ಅವರು ವಿದ್ಯಾಭ್ಯಾಸ ಮಾಡುವಾಗಿನಿಂದ ರೈತ ಚಳವಳಿಯಲ್ಲಿ ಸಕ್ರಿಯರಾಗಿದ್ದಾರೆ. ನಳಿನಿ ಮತ್ತು ಅವರ ತಂಗಿ ಉಮಾ ಇಬ್ಬರೂ ರೈತಚಳವಳಿಯ ಕಾರ್ಯಕರ್ತೆಯರು. ಬಹಳಷ್ಟು ರೈತ ನಾಯಕರುಗಳು ತಮ್ಮ ಗಂಡುಮಕ್ಕಳನ್ನೂ ಚಳವಳಿಯಲ್ಲಿ ಸಕ್ರಿಯಗೊಳಿಸಲು ಆಗಿಲ್ಲ. ಹೀಗಿರುವಾಗ ಶ್ರೀನಿವಾಸಗೌಡರ ಕುಟುಂಬ ಈ ಇಬ್ಬರು ಹೆಣ್ಣುಮಕ್ಕಳಿಗೆ ನೀಡಿರುವ ಪ್ರೋತ್ಸಾಹ ಅಭಿನಂದನೀಯ. ಸ್ವತಃ ರೈತ ಸಂಘಟನೆಯ ಒಂದು ಗುಂಪಿನ ಜೊತೆಗೆ ಇದ್ದರೂ, ಆಕೆ ಕೇವಲ ಒಂದು ಬಣಕ್ಕೆ ತನ್ನನ್ನು ಸೀಮಿತಗೊಳಿಸಿಕೊಂಡಿಲ್ಲ. ದೊಡ್ಡ ನಾಯಕರ ಬಗ್ಗೆಯೂ ತನ್ನ ಅನಿಸಿಕೆಗಳನ್ನು ನೇರವಾಗಿ ಹೇಳುತ್ತಾರೆ. ಹಾಗೆ ಹೇಳುವಾಗ, ಸಾಮಾಜಿಕ ಜಾಲತಾಣಗಳಲ್ಲೂ ತನ್ನ ಕಟು ವಿಮರ್ಶೆಯನ್ನು ಮುಂದಿಡುವಾಗಲೂ ಅದನ್ನು ಸಭ್ಯತೆಯನ್ನು ದಾಟಿ ಹೇಳುವುದಿಲ್ಲ.
ಹಲವಾರು ಶಿಬಿರಗಳಲ್ಲಿ, ಹೋರಾಟಗಳಲ್ಲಿ ನಳಿನಿಯವರ ಜೊತೆಗೆ ಭಾಗವಹಿಸಿ ಖುದ್ದಾಗಿ ನೋಡಿರುವ ನಾನು ಅಂತಹ ಹೋರಾಟಗಳಲ್ಲಿ ಸಕ್ರಿಯವಾಗಿರುವ, ಹೆದರಿ ಎಂದೂ ಹಿಂದಕ್ಕೆ ಹೋಗದ, ಮುಂಚೂಣಿ ವ್ಯಕ್ತಿಯಾಗಿ ಮಾತಾಡುವಾಗಲೂ ಬಾಯಿಗೆ ಬಂದ ಹಾಗೆ ಮಾತಾಡದ ವ್ಯಕ್ತಿ ನಳಿನಿ. ಹಾಗೆಂದು ಮಾತನಾಡದೇ ಸುಮ್ಮನಿರುವುದಿಲ್ಲ. ರೈತಸಂಘದ ಕಾರ್ಯಕರ್ತೆಯಾಗಿ ತಾನು ಇರಬೇಕಾದ್ದೇ ಹೀಗೆ ಎಂದು ಆಕೆಯ ಖಚಿತ ನಂಬಿಕೆಯಿದ್ದಂತಿದೆ. ರಾಜಿ ಮಾಡಿಕೊಳ್ಳದಿರುವುದು ಮತ್ತು ಅನ್ಯಾಯವನ್ನು ಪ್ರಶ್ನಿಸಬೇಕಾದ್ದು ಹೋರಾಟಗಾರ್ತಿಯ ಧರ್ಮ ಎಂಬುದರಲ್ಲಿ ನಳಿನಿಗೆ ಸಂದೇಹವೇ ಇಲ್ಲ. ಹಾಗಾಗಿ ಆಕೆಗೆ ಹೆದರಿಕೆ ಇಲ್ಲ.

ನಳಿನಿ

 

ಸಂಘಟನೆಯೊಳಗೂ ಪ್ರಬುದ್ಧತೆ ತೋರುವ ವ್ಯಕ್ತಿ
ಇಷ್ಟಾದ ಮೇಲೂ ಒಂದು ಪ್ರಶ್ನೆಯಿದೆ. ಪ್ರಚಾರಕ್ಕೆ, ತೋರಿಕೆಗೆ ಇದನ್ನು ಮಾಡುತ್ತಾರಾ ಎಂದು. ಏಕೆಂದರೆ ಹಲವು ಹೊಸತಲೆಮಾರಿನ ‘ಹೋರಾಟಗಾರರು’ ಅದನ್ನು ಮಾಡುವುದು ವಾಸ್ತವ. ಹೆಣ್ಣುಮಕ್ಕಳಲ್ಲೂ ಕೆಲವರು ಹಾಗೆ ಮಾಡಿದ್ದು ನೋಡಿದ್ದೇನೆ. ಕೆಲವೊಮ್ಮೆ ಅಪ್ರಬುದ್ಧತೆಯ ಕಾರಣಕ್ಕೂ ಹಾಗೆ ಮಾಡುತ್ತಾರೆ. ಆದರೆ, ಯಾವುದಾದರೂ ಹೋರಾಟದ ಸಂದರ್ಭದಲ್ಲಿ ಅನಗತ್ಯವಾಗಿ ಮುಂದಕ್ಕೆ ಬಂದು ನಿಂತಿದ್ದು ಅಥವಾ ಪ್ರಚಾರದ ಗೀಳಿನಿಂದ ಅನಗತ್ಯ ಮಾತುಗಳನ್ನಾಡಿದ್ದನ್ನು ನಾನಂತೂ ನೋಡಿಲ್ಲ. ವಿಚಾರಗಳನ್ನು ಅನಗತ್ಯವಾಗಿ ಕಾಂಪ್ಲಿಕೇಟೆಡ್ ಮಾಡಿಕೊಳ್ಳದೇ ಮುಂದಕ್ಕೆ ಹೋಗುತ್ತಿರುತ್ತಾರೆ. ಸಂಘಟನೆಯ ಒಳಗೇ ತನಗಾದ ಸಮಸ್ಯೆಗಳನ್ನು ವಿಪರೀತಗೊಳಿಸಿ ಸಂದರ್ಭವಲ್ಲದ ಸಂದರ್ಭದಲ್ಲಿ ವೇದಿಕೆಯಿಂದ ಬೇರೆಯವರು ಮಾತಾಡಿದಾಗ ಅವರ ಜೊತೆಗೆ ಸಾಲಿಡಾರಿಟಿ ತೋರಿಸಿ ನಿಂತಿದ್ದನ್ನು ನೋಡಿದ್ದೇನೆಯೇ ಹೊರತು, ಸ್ವತಃ ತಾನೇ ಅತಿರೇಕ ಮಾಡಿದ್ದನ್ನು ನೋಡಿಲ್ಲ.

ಇದನ್ನೂ ಓದಿ: ಲಾಕ್‌ಡೌನ್‌ ನಂತರದ ಪ್ರಥಮ ಆದ್ಯತೆ ಕೃಷಿ ಮತ್ತು ಆರ್ಥಿಕತೆ- ಡಾ.ಕಮ್ಮರಡಿ

ಹಳ್ಳಿ ಹೆಣ್ಣುಮಗಳಾದ ನಳಿನಿ ನಿಜವಾದ ಅರ್ಥದಲ್ಲಿ ನೇರ, ದಿಟ್ಟ, ನಿರಂತರ, ಆದರೆ ಸರಳ ವ್ಯಕ್ತಿ. ಬಹುಶಃ ಇದನ್ನು ಕೋಲಾರ ಗ್ರಾಮಾಂತರದ ಇನ್ಸ್‍ಪೆಕ್ಟರ್ ಅರ್ಥ ಮಾಡಿಕೊಳ್ಳುವುದು ಕಷ್ಟವೇನೋ. ಹೆಣ್ಣುಮಕ್ಕಳು ಮನೆಯಲ್ಲಿರಬೇಕು, ದೈನ್ಯತೆಯಿಂದ ಕೇಳಿಕೊಳ್ಳಬೇಕು, ಹೋರಾಟಗಳಲ್ಲಿ ಗಂಡಸರನ್ನು ಮುಂದೆ ಬಿಟ್ಟು ಹಿಂದೆ ಗುಂಪಿನಲ್ಲಿ ಸಂಖ್ಯೆಯಾಗಿ ಮಾತ್ರ ಇರಬೇಕು ಎಂಬುದು ‘ಸಹಜ ಫ್ಯೂಡಲ್ ಭಾವನೆ’. ‘ರಿಕ್ವೆಸ್ಟ್ ಮಾಡಿಕೊಳ್ಳಬೇಕಮ್ಮಾ’ ಎಂದು ಹೇಳಿದ ಎಂಎಲ್‍ಸಿ ಮತ್ತು ಬಾಯಿಗೆ ಬಂದ ಹಾಗೆ ವದರಿದ ಮಂತ್ರಿಗಳಿಗೆ ಅಂತಹ ಭಾವನೆ ಇರುವುದು ಎದ್ದು ಕಂಡ ಮೇಲೆ, ಇನ್ನು ಆ ಇನ್ಸ್‍ಪೆಕ್ಟರ್‍ರಿಂದ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾದೀತೇ?


ಇದನ್ನೂ ಓದಿ: ಕ್ಷಮೆ ಕೇಳುತ್ತಲೇ ಆರೋಪ ಮುಂದುವರೆಸಿದ ಮಾಧುಸ್ವಾಮಿ

ಸಚಿವ ಮಾಧುಸ್ವಾಮಿ ಕ್ಷಮೆಯಾಚನೆ ಮಾಡದಿದ್ದರೂ ಆಗುತ್ತಿತ್ತು. ಆದರೆ ನಳಿನಿಯ ಕುರಿತಾಗಿ ‘ಆಕೆ ಯಾವಾಗಲೂ ಹಾಗೆ ಅಂತೆ’ ಇತ್ಯಾದಿ ಮಾತುಗಳನ್ನು ಹೇಳಿದಾಗ ನಾವು ಮಾತಾಡದಿದ್ದರೆ ತಪ್ಪಾಗುತ್ತದೆ ಎಂಬ ಕಾರಣಕ್ಕೆ ಇಷ್ಟನ್ನು ಬರೆಯಬೇಕಾಯಿತು. ನಳಿನಿ ‘ಯಾವಾಗಲೂ ಹಾಗೆಯೇ ಇರಲಿ’ ಎಂದು ಆಶಿಸುತ್ತೇನೆ. ಇನ್ನಷ್ಟು ಹೊಸ ತಿಳುವಳಿಕೆಯ ಜೊತೆಗೆ ಆಕೆ ರೈತಚಳವಳಿಗೆ ಅಗತ್ಯವಿರುವ ಹೊಸನಾಯಕಿಯಾಗಿ ರೂಪುಗೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...