Homeಕರ್ನಾಟಕಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ?

ಆಕೆ ಯಾವಾಗಲೂ ಹಾಗೆಯೇ ಅಂತೆ ಎಂದು ಹೇಳಿದ ಸಚಿವ ಮಾಧುಸ್ವಾಮಿಯವರು ಉಲ್ಲೇಖಿಸುತ್ತಿರುವ ನಳಿನಿ ಯಾರು? ಅವರ ಹಿನ್ನೆಲೆಯೇನು? ಯಾವಾಗಲೂ ಅವರು ಹೇಗೆ ಮಾಡುತ್ತಾರೆ, ನಳಿನಿಯವರನ್ನು ಸ್ವತಃ ಬಲ್ಲ ಡಾ.ವಾಸು ಎಚ್‌.ವಿ ಅವರ ಬರಹ

- Advertisement -
- Advertisement -

ನಳಿನಿ
ಕೋಲಾರ ಜಿಲ್ಲೆಯ ಅಗ್ರಹಾರ ಕೆರೆಯ ವೀಕ್ಷಣೆಗೆ ಹೋಗಿದ್ದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಯರನ್ನು ಪ್ರಶ್ನಿಸಿದ ನಳಿನಿ ಇಂದು ಆಕೆಯನ್ನು ಟಿವಿಯಲ್ಲಿ ನೋಡುತ್ತಿರುವ ಹೆಚ್ಚಿನವರಿಗೆ ಪರಿಚಯವಿರಲಿಕ್ಕಿಲ್ಲ. ಆದರೆ ಕೋಲಾರದಲ್ಲಿ ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ರೈತಸಂಘದ ಕಾರ್ಯಕರ್ತರಿಗೆ ನಳಿನಿ ಚೆನ್ನಾಗಿ ಗೊತ್ತು. ಏಕೆಂದರೆ ಕಳೆದ ಸುಮಾರು ಏಳೆಂಟು ವರ್ಷಗಳಿಂದ ರೈತಸಂಘ ಮತ್ತು ಇತರ ಪ್ರಗತಿಪರ ಸಂಘಟನೆಗಳ ನೂರಾರು ಕಾರ್ಯಕ್ರಮಗಳು/ಹೋರಾಟಗಳಲ್ಲಿ ಅವರಿದ್ದಾರೆ.

‘ಆಯಮ್ಮ ಹಾಗೇ ಅಂತ, ಯಾರು ಬಂದರೂ ಹೋಗಿ ಪ್ರಶ್ನಿಸುವುದು. ಬೇಕಾದರೆ ಆ ವಿಡಿಯೋ ನೋಡಿ, ಅದರಲ್ಲಿ ಇನ್ಸ್‍ಪೆಕ್ಟರ್‍ರನ್ನು ‘ಏನ್ಸಾರ್ ಯಾವಾಗಲೂ ನೀವು ಹೀಗೇ ಮಾಡ್ತೀರಾ?, ನಮಗೆ ಅವಕಾಶವನ್ನೇ ಕೊಡಲಿಲ್ಲ’ ಎಂದಿದ್ದಾರೆ ಎಂಬ ಅರ್ಥದಲ್ಲಿ ಸಚಿವ ಮಾಧುಸ್ವಾಮಿಯವರು ತಮ್ಮ ‘ಕ್ಷಮಾಪಣಾ ಹೇಳಿಕೆ’ಯಲ್ಲೂ ಆರೋಪ ಮಾಡಿದ್ದಾರೆ. ನಳಿನಿಯವರು ಹೇಳುವ ಪ್ರಕಾರ, ಅವರನ್ನು ಅಲ್ಲಿಂದ ತಳ್ಳಿಕೊಂಡು ಹೋದ ಇನ್ಸ್‍ಪೆಕ್ಟರ್ ಸಹಾ ‘ನೀನು ಯಾವಾಗಲೂ ಹೀಗೆಯೇ ಮಾಡುತ್ತೀಯಾ’ ಎಂದು ಹೇಳಿ, ‘ಈಕೆ ಮೇಲೆ ಒಂದೆರಡು ಕೇಸು ಫಿಟ್ ಮಾಡ್ರಿ’ ಎಂದು ಅಲ್ಲಿದ್ದ ಪೊಲೀಸರಿಗೆ ಹೇಳಿ ಹೋದರಂತೆ.

ಹೌದಾ? ನಳಿನಿ ಹಾಗೆ ಮಾಡುತ್ತಾರಾ? ಮಾಧುಸ್ವಾಮಿಯವರು ಹೇಳಿದಂತೆ ಆಕೆ ಅತಿರೇಕ ಮಾಡುತ್ತಾರಾ? ಸ್ವತಃ ಆ ವಿಡಿಯೋ ನೋಡಿದ ಯಾರೊಬ್ಬರೂ ಅದನ್ನು ನಂಬಲಾರರು. ಆದರೆ ನಳಿನಿಯವರನ್ನು ಸಾಕಷ್ಟು ಕಾಲದಿಂದ ನೋಡಿರುವ ನಮ್ಮಂಥವರ ಅಭಿಪ್ರಾಯವೇನು?

ನಳಿನಿಯವರ ಹಿನ್ನೆಲೆಯೇನು?
ಸ್ವತಃ ರೈತರೂ, ರೈತ ಸಂಘಟನೆಯ ಮುಖಂಡರೂ ಇರುವ ಒಟ್ಟು ಕುಟುಂಬದ ಮಗಳು ನಳಿನಿ. ಕೋಲಾರದಲ್ಲೇ ಬಿಕಾಂ ಮುಗಿಸಿರುವ ಅವರು ವಿದ್ಯಾಭ್ಯಾಸ ಮಾಡುವಾಗಿನಿಂದ ರೈತ ಚಳವಳಿಯಲ್ಲಿ ಸಕ್ರಿಯರಾಗಿದ್ದಾರೆ. ನಳಿನಿ ಮತ್ತು ಅವರ ತಂಗಿ ಉಮಾ ಇಬ್ಬರೂ ರೈತಚಳವಳಿಯ ಕಾರ್ಯಕರ್ತೆಯರು. ಬಹಳಷ್ಟು ರೈತ ನಾಯಕರುಗಳು ತಮ್ಮ ಗಂಡುಮಕ್ಕಳನ್ನೂ ಚಳವಳಿಯಲ್ಲಿ ಸಕ್ರಿಯಗೊಳಿಸಲು ಆಗಿಲ್ಲ. ಹೀಗಿರುವಾಗ ಶ್ರೀನಿವಾಸಗೌಡರ ಕುಟುಂಬ ಈ ಇಬ್ಬರು ಹೆಣ್ಣುಮಕ್ಕಳಿಗೆ ನೀಡಿರುವ ಪ್ರೋತ್ಸಾಹ ಅಭಿನಂದನೀಯ. ಸ್ವತಃ ರೈತ ಸಂಘಟನೆಯ ಒಂದು ಗುಂಪಿನ ಜೊತೆಗೆ ಇದ್ದರೂ, ಆಕೆ ಕೇವಲ ಒಂದು ಬಣಕ್ಕೆ ತನ್ನನ್ನು ಸೀಮಿತಗೊಳಿಸಿಕೊಂಡಿಲ್ಲ. ದೊಡ್ಡ ನಾಯಕರ ಬಗ್ಗೆಯೂ ತನ್ನ ಅನಿಸಿಕೆಗಳನ್ನು ನೇರವಾಗಿ ಹೇಳುತ್ತಾರೆ. ಹಾಗೆ ಹೇಳುವಾಗ, ಸಾಮಾಜಿಕ ಜಾಲತಾಣಗಳಲ್ಲೂ ತನ್ನ ಕಟು ವಿಮರ್ಶೆಯನ್ನು ಮುಂದಿಡುವಾಗಲೂ ಅದನ್ನು ಸಭ್ಯತೆಯನ್ನು ದಾಟಿ ಹೇಳುವುದಿಲ್ಲ.
ಹಲವಾರು ಶಿಬಿರಗಳಲ್ಲಿ, ಹೋರಾಟಗಳಲ್ಲಿ ನಳಿನಿಯವರ ಜೊತೆಗೆ ಭಾಗವಹಿಸಿ ಖುದ್ದಾಗಿ ನೋಡಿರುವ ನಾನು ಅಂತಹ ಹೋರಾಟಗಳಲ್ಲಿ ಸಕ್ರಿಯವಾಗಿರುವ, ಹೆದರಿ ಎಂದೂ ಹಿಂದಕ್ಕೆ ಹೋಗದ, ಮುಂಚೂಣಿ ವ್ಯಕ್ತಿಯಾಗಿ ಮಾತಾಡುವಾಗಲೂ ಬಾಯಿಗೆ ಬಂದ ಹಾಗೆ ಮಾತಾಡದ ವ್ಯಕ್ತಿ ನಳಿನಿ. ಹಾಗೆಂದು ಮಾತನಾಡದೇ ಸುಮ್ಮನಿರುವುದಿಲ್ಲ. ರೈತಸಂಘದ ಕಾರ್ಯಕರ್ತೆಯಾಗಿ ತಾನು ಇರಬೇಕಾದ್ದೇ ಹೀಗೆ ಎಂದು ಆಕೆಯ ಖಚಿತ ನಂಬಿಕೆಯಿದ್ದಂತಿದೆ. ರಾಜಿ ಮಾಡಿಕೊಳ್ಳದಿರುವುದು ಮತ್ತು ಅನ್ಯಾಯವನ್ನು ಪ್ರಶ್ನಿಸಬೇಕಾದ್ದು ಹೋರಾಟಗಾರ್ತಿಯ ಧರ್ಮ ಎಂಬುದರಲ್ಲಿ ನಳಿನಿಗೆ ಸಂದೇಹವೇ ಇಲ್ಲ. ಹಾಗಾಗಿ ಆಕೆಗೆ ಹೆದರಿಕೆ ಇಲ್ಲ.

ನಳಿನಿ

 

ಸಂಘಟನೆಯೊಳಗೂ ಪ್ರಬುದ್ಧತೆ ತೋರುವ ವ್ಯಕ್ತಿ
ಇಷ್ಟಾದ ಮೇಲೂ ಒಂದು ಪ್ರಶ್ನೆಯಿದೆ. ಪ್ರಚಾರಕ್ಕೆ, ತೋರಿಕೆಗೆ ಇದನ್ನು ಮಾಡುತ್ತಾರಾ ಎಂದು. ಏಕೆಂದರೆ ಹಲವು ಹೊಸತಲೆಮಾರಿನ ‘ಹೋರಾಟಗಾರರು’ ಅದನ್ನು ಮಾಡುವುದು ವಾಸ್ತವ. ಹೆಣ್ಣುಮಕ್ಕಳಲ್ಲೂ ಕೆಲವರು ಹಾಗೆ ಮಾಡಿದ್ದು ನೋಡಿದ್ದೇನೆ. ಕೆಲವೊಮ್ಮೆ ಅಪ್ರಬುದ್ಧತೆಯ ಕಾರಣಕ್ಕೂ ಹಾಗೆ ಮಾಡುತ್ತಾರೆ. ಆದರೆ, ಯಾವುದಾದರೂ ಹೋರಾಟದ ಸಂದರ್ಭದಲ್ಲಿ ಅನಗತ್ಯವಾಗಿ ಮುಂದಕ್ಕೆ ಬಂದು ನಿಂತಿದ್ದು ಅಥವಾ ಪ್ರಚಾರದ ಗೀಳಿನಿಂದ ಅನಗತ್ಯ ಮಾತುಗಳನ್ನಾಡಿದ್ದನ್ನು ನಾನಂತೂ ನೋಡಿಲ್ಲ. ವಿಚಾರಗಳನ್ನು ಅನಗತ್ಯವಾಗಿ ಕಾಂಪ್ಲಿಕೇಟೆಡ್ ಮಾಡಿಕೊಳ್ಳದೇ ಮುಂದಕ್ಕೆ ಹೋಗುತ್ತಿರುತ್ತಾರೆ. ಸಂಘಟನೆಯ ಒಳಗೇ ತನಗಾದ ಸಮಸ್ಯೆಗಳನ್ನು ವಿಪರೀತಗೊಳಿಸಿ ಸಂದರ್ಭವಲ್ಲದ ಸಂದರ್ಭದಲ್ಲಿ ವೇದಿಕೆಯಿಂದ ಬೇರೆಯವರು ಮಾತಾಡಿದಾಗ ಅವರ ಜೊತೆಗೆ ಸಾಲಿಡಾರಿಟಿ ತೋರಿಸಿ ನಿಂತಿದ್ದನ್ನು ನೋಡಿದ್ದೇನೆಯೇ ಹೊರತು, ಸ್ವತಃ ತಾನೇ ಅತಿರೇಕ ಮಾಡಿದ್ದನ್ನು ನೋಡಿಲ್ಲ.

ಇದನ್ನೂ ಓದಿ: ಲಾಕ್‌ಡೌನ್‌ ನಂತರದ ಪ್ರಥಮ ಆದ್ಯತೆ ಕೃಷಿ ಮತ್ತು ಆರ್ಥಿಕತೆ- ಡಾ.ಕಮ್ಮರಡಿ

ಹಳ್ಳಿ ಹೆಣ್ಣುಮಗಳಾದ ನಳಿನಿ ನಿಜವಾದ ಅರ್ಥದಲ್ಲಿ ನೇರ, ದಿಟ್ಟ, ನಿರಂತರ, ಆದರೆ ಸರಳ ವ್ಯಕ್ತಿ. ಬಹುಶಃ ಇದನ್ನು ಕೋಲಾರ ಗ್ರಾಮಾಂತರದ ಇನ್ಸ್‍ಪೆಕ್ಟರ್ ಅರ್ಥ ಮಾಡಿಕೊಳ್ಳುವುದು ಕಷ್ಟವೇನೋ. ಹೆಣ್ಣುಮಕ್ಕಳು ಮನೆಯಲ್ಲಿರಬೇಕು, ದೈನ್ಯತೆಯಿಂದ ಕೇಳಿಕೊಳ್ಳಬೇಕು, ಹೋರಾಟಗಳಲ್ಲಿ ಗಂಡಸರನ್ನು ಮುಂದೆ ಬಿಟ್ಟು ಹಿಂದೆ ಗುಂಪಿನಲ್ಲಿ ಸಂಖ್ಯೆಯಾಗಿ ಮಾತ್ರ ಇರಬೇಕು ಎಂಬುದು ‘ಸಹಜ ಫ್ಯೂಡಲ್ ಭಾವನೆ’. ‘ರಿಕ್ವೆಸ್ಟ್ ಮಾಡಿಕೊಳ್ಳಬೇಕಮ್ಮಾ’ ಎಂದು ಹೇಳಿದ ಎಂಎಲ್‍ಸಿ ಮತ್ತು ಬಾಯಿಗೆ ಬಂದ ಹಾಗೆ ವದರಿದ ಮಂತ್ರಿಗಳಿಗೆ ಅಂತಹ ಭಾವನೆ ಇರುವುದು ಎದ್ದು ಕಂಡ ಮೇಲೆ, ಇನ್ನು ಆ ಇನ್ಸ್‍ಪೆಕ್ಟರ್‍ರಿಂದ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾದೀತೇ?


ಇದನ್ನೂ ಓದಿ: ಕ್ಷಮೆ ಕೇಳುತ್ತಲೇ ಆರೋಪ ಮುಂದುವರೆಸಿದ ಮಾಧುಸ್ವಾಮಿ

ಸಚಿವ ಮಾಧುಸ್ವಾಮಿ ಕ್ಷಮೆಯಾಚನೆ ಮಾಡದಿದ್ದರೂ ಆಗುತ್ತಿತ್ತು. ಆದರೆ ನಳಿನಿಯ ಕುರಿತಾಗಿ ‘ಆಕೆ ಯಾವಾಗಲೂ ಹಾಗೆ ಅಂತೆ’ ಇತ್ಯಾದಿ ಮಾತುಗಳನ್ನು ಹೇಳಿದಾಗ ನಾವು ಮಾತಾಡದಿದ್ದರೆ ತಪ್ಪಾಗುತ್ತದೆ ಎಂಬ ಕಾರಣಕ್ಕೆ ಇಷ್ಟನ್ನು ಬರೆಯಬೇಕಾಯಿತು. ನಳಿನಿ ‘ಯಾವಾಗಲೂ ಹಾಗೆಯೇ ಇರಲಿ’ ಎಂದು ಆಶಿಸುತ್ತೇನೆ. ಇನ್ನಷ್ಟು ಹೊಸ ತಿಳುವಳಿಕೆಯ ಜೊತೆಗೆ ಆಕೆ ರೈತಚಳವಳಿಗೆ ಅಗತ್ಯವಿರುವ ಹೊಸನಾಯಕಿಯಾಗಿ ರೂಪುಗೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...