Homeಮುಖಪುಟ#भाजपा_के_आतंकवादी | ‘ಬಿಜೆಪಿ ಭಯೋತ್ಪಾದಕರು’ - ಟ್ವಿಟರ್‌‌‌ ಟ್ರೆಂಡ್

#भाजपा_के_आतंकवादी | ‘ಬಿಜೆಪಿ ಭಯೋತ್ಪಾದಕರು’ – ಟ್ವಿಟರ್‌‌‌ ಟ್ರೆಂಡ್

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌‌‌‌‌‌‌‌ ಖೇರಿಯಲ್ಲಿ ರೈತರ ಹತ್ಯೆಗೆ ಸಂಬಂಧಿಸಿದಂತೆ ಇಂದು ಎರಡು ವಿಡಿಯೊ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊ ವೈರಲ್ ಆಗುತ್ತಿದ್ದಂತೆ ಬಿಜೆಪಿ ವಿರುದ್ದ ಆಕ್ರೊಶ ಹೆಚ್ಚಿದ್ದು, ಟ್ವಿಟರ್‌ನಲ್ಲಿ ‘ಬಿಜೆಪಿ ಭಯೋತ್ಪಾದಕರು’(#भाजपा_के_आतंकवादी) ಹ್ಯಾಶ್‌‌‌ ಟ್ಯಾಗ್‌ ಟ್ರೆಂಡ್ ಆಗಿದೆ.

ಒಕ್ಕೂಟ ಸರ್ಕಾರದ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಹತ್ಯೆ ಮಾಡಿದ್ದಾನೆ ಎಂದು ಎಫ್‌ಐಆರ್‌ ದಾಖಲಾಗಿದೆ. ಈ ಘಟನೆ ಬಗ್ಗೆ ಕಳೆದ ಎರಡು ದಿನಗಳಿಂದ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಆದರೆ ಬಿಜೆಪಿ ಬೆಂಬಲಿಗರು ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಪಕ್ಷವನ್ನು ಸಮರ್ಥನೆ ಮಾಡುತ್ತಲೆ ಇದ್ದರು. ಆದರೆ ಇದೀಗ ಘಟನೆಯ ಎರಡು ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

ಒಂದು ವಿಡಿಯೋದಲ್ಲಿ, ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಹರಿಸಲಾಗಿದೆ. ಇದರಿಂದಾಗಿ  ರೈತರು ಚಲ್ಲಾಪಿಲ್ಲಿಯಾಗಿದ್ದು, ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ. ಮತ್ತೊಂದು ವಿಡಿಯೊದಲ್ಲಿ ಜೀಪ್‌ನಿಂದ ಇಳಿದು ವ್ಯಕ್ತಿಯೊಬ್ಬ ಪರಾರಿಯಾಗುತ್ತಿರುವ ವಿಡಿಯೊವಾಗಿದೆ. ಈ ವಿಡಿಯೊದಲ್ಲಿ ಜೀಪ್‌ ಪಕ್ಕದಲ್ಲೇ ವ್ಯಕ್ತಿಯೊಬ್ಬರು ನರಳಾಡುತ್ತಿರುವುದು ಕೂಡಾ ಕಾಣುತ್ತದೆ.

ಈ ವಿಡಿಯೋಗಳು ಹೊರಬರುತ್ತಿದ್ದಂತೆ ಸಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಟ್ವಿಟರ್‌ನಲ್ಲಿ ಬಿಜೆಪಿ ಭಯೋತ್ಪಾದಕರು ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕನ್ಹಯ್ಯ ಕುಮಾರ್‌ ಅವರು, “ಲಖಿಂಪುರದಲ್ಲಿ ಸಚಿವರ ಕಾರು ರೈತರನ್ನು ನಜ್ಜುಗುಜ್ಜಾಗಿಸಿದೆ. ಆದರೆ ಸರ್ಕಾರ ಮಾತ್ರ ಲಕ್ನೋದಲ್ಲಿ ಸಂಭ್ರಮಿಸುತ್ತಿದೆ. ಕೊಲೆಗಾರರು ಮುಕ್ತವಾಗಿ ತಿರುಗಾಡುತ್ತಿದ್ದಾರೆ ಮತ್ತು ವಿರೋಧ ಪಕ್ಷದ ನಾಯಕರನ್ನು ಬಂಧಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

ಅವರ ಟ್ವೀಟ್‌ಗೆ ಘಟನೆಯ ಬಗ್ಗೆಗಿನ ದೀರ್ಘ ವಿಡಿಯೊವನ್ನು ಟ್ಯಾಗ್ ಮಾಡಿರುವ ಸೌರಭ್ ರಾಜ್ ಎಂಬುವವರು, “ಬಿಜೆಪಿ ಭಯೋತ್ಪಾದಕರು ಎಲ್ಲಾ ಮೂರು ಕಾರುಗಳನ್ನು ರೈತರ ಮೇಲೆ ಚಲಾಯಿಸಿದ ವೀಡಿಯೊದ ದೀರ್ಘ ಆವೃತ್ತಿ ಇಲ್ಲಿದೆ” ಎಂದು ಎಂದು ಹೇಳಿದ್ದಾರೆ.

ಜಾಜ್ಜ್‌ ಅವರು, “ಭಾರತದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಕೊಲೆಗೆ ಯತ್ನಿಸಲಾಗಿದೆ. ಇದುವರೆಗೂ ಯಾವುದೇ ನ್ಯಾಯ ದೊರೆತಿಲ್ಲ. 6 ರೈತರನ್ನು ಕೊಂದು ಕೂಡಾ ಕ್ರಿಮಿನಲ್‌ ಮಾತ್ರ ಮುಕ್ತವಾಗಿ ತಿರುಗಾಡುತ್ತಿದ್ದಾನೆ” ಎಂದು ಬರೆದಿದ್ದಾರೆ.

ಕುಲ್ವಿಂದರ್‌ ಅವರು, “ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು ಈ ಮಂತ್ರಿಗಳನ್ನು ನೇಮಿಸಲಾಗಿದೆ. ಆದರೆ ಅಜಯ್ ಮಿಶ್ರಾ ಮತ್ತು ಅವರ ಮಗನಂತಹ ರೀತಿಯ ಮಂತ್ರೆಗಳು ನಮ್ಮ ದೇಶವನ್ನು ಹಾಳು ಮಾಡುತ್ತಿದ್ದಾರೆ.” ಎಂದು ಬರೆದಿದ್ದಾರೆ.

 

ಶೆರ್ನಿ ಅವರು, “ಹಾಡಹಗಲೇ ಅಮಾಯಕರ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದೆ, ಯಾಕೆ?” ಎಂದು ಪ್ರಶ್ನಿಸಿದ್ದಾರೆ.

 

 

 

 

 

ಇದನ್ನೂ ಓದಿ: ರೈತರ ಮೇಲೆ ಕಾರು ಹರಿಸುತ್ತಿರುವ ಎರಡು ವಿಡಿಯೋ ವೈರಲ್: ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...