Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ....

ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ….

- Advertisement -
- Advertisement -

ನಮ್ಮ ಸ್ವಾತಂತ್ರ್ಯ ಸಂಗ್ರಾಮ ಅಂತ್ಯಗೊಂಡಿದ್ದರಲ್ಲಿನ ಒಂದು ವಿಚಿತ್ರ ವಿಶಿಷ್ಟತೆ ಯಾವುದೆಂದರೆ; ನನ್ನ ನರನಾಡಿಗಳಲ್ಲಿ ನಾನು ಸಂಪೂರ್ಣವಾಗಿ ಹಿಂದೂ ಎಂದು ಹೇಳಿದ್ದ ಮಹಾತ್ಮ ಗಾಂಧಿ ಜಾತ್ಯಾತೀತ ಭಾರತದ ರಾಷ್ಟ್ರಪಿತ ಆದದ್ದು. ಹಾಗೆಯೇ ದೇವರು-ಧರ್ಮದಲ್ಲಿ ನಂಬಿಕೆ ಇರದಿದ್ದ, ಉರ್ದು ಭಾಷೆ ಇರಲಿ, ಇಂಗ್ಲಿಷ್ ಬಿಟ್ಟರೆ ಭಾರತದ ಒಂದೇಒಂದು ಭಾಷೆಯಲ್ಲಿ ಮಾತನಾಡಲು ಬಾರದಿದ್ದ, ಇಸ್ಲಾಂನಲ್ಲಿ ನಿಷೇಧಿಸಲ್ಪಟ್ಟಿರುವ ‘ತೀರ್ಥ’ ಮತ್ತು ಆಹಾರವನ್ನು ಸೇವಿಸುತ್ತಿದ್ದ, ನಾಸ್ತಿಕರಾಗಿದ್ದ ಮೊಹ್ಮದ್ ಅಲಿ ಜಿನ್ನಾರವರು ಇಸ್ಲಾಂ ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ ಪಾಕಿಸ್ತಾನದ ರಾಷ್ಟ್ರಪಿತ ಆದದ್ದು!!

ಇಂಥಾ ವೈಚಿತ್ರ್ಯದ ನಡುವೆಯೂ ಇವರಿಬ್ಬರ ಮಧ್ಯೆ ಹಲವು ಸಾಮ್ಯತೆಗಳಿವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಗಾಂಧಿ-ಜಿನ್ನಾ, ಇಬ್ಬರೂ ಹಿಂದೂ-ಮುಸ್ಲೀಮರ ನಡುವೆ ಸೌಹಾರ್ದವ ಬಯಸಿದವರು.

ಬಾಲಗಂಗಾಧರ ತಿಲಕ್‌ರವರು ಸ್ವರಾಜ್ಯ ನನ್ನ ಜನ್ಮಸಿದ್ದ ಹಕ್ಕು ಎಂಬ ಹೇಳಿಕೆಯ ಮೂಲಕ ಬ್ರಿಟಿಷ್ ಸರ್ಕಾರದ ಕೆಂಗಣ್ಣಿಗೆ ಗುರಿಯಾದಾಗ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದವರಲ್ಲಿ ಜಿನ್ನಾ ಕೂಡಾ ಒಬ್ಬರು. ಗೋಪಾಲ್ ಕೃಷ್ಣ ಗೋಖಲೆಯವರು ಒಂದುಕಡೆ ಜಿನ್ನಾರ ಬಗ್ಗೆ ಧಾರ್ಮಿಕ ಪೂರ್ವಗ್ರಹಗಳಿಂದ ಕಳಂಕಿತರಾಗದಿರುವ ಜಿನ್ನಾ ಹಿಂದೂ-ಮುಸ್ಲಿಂ ಐಕ್ಯತೆಗೆ ಹೇಳಿ ಮಾಡಿಸಿದಂತಹ ರಾಯಭಾರಿ ಎಂದು ಹೇಳಿದ್ದು ಅತಿಶಯೋಕ್ತಿಯ ಮಾತಲ್ಲ.

ಮುಸ್ಲಿಂ ಲೀಗ್‌ನವರು ಜಿನ್ನಾರನ್ನು ಅದೆಷ್ಟೇ ಓಲೈಸಿದರೂ ಸ್ವಾತಂತ್ರ್ಯ ಸಿಗಬೇಕಿದ್ದರೆ ಹಿಂದೂಗಳು ಹಾಗೂ ಮುಸ್ಲಿಮರು ಒಗ್ಗಟ್ಟಾಗಿಯೇ ಇರಬೇಕು ಎಂದು ಹೇಳುತ್ತಿದ್ದ ಜಿನ್ನಾ ಕಾಂಗ್ರೆಸ್‌ನಲ್ಲೇ ಉಳಿದರು. ಆದರೆ ಕಾಲಕ್ರಮೇಣ ಕಾಂಗ್ರೆಸ್ ಮೇಲೆ ಗಾಂಧಿಯವರ ಹಿಡಿತ ಬಿಗಿಗೊಂಡಿತು. ಅದರಲ್ಲಿದ್ದ ಹಿಂದೂ ನಾಯಕರೆಲ್ಲರೂ ಗಾಂಧಿಗೆ ಡೊಗ್ಗು ಸಲಾಮು ಹೊಡೆಯುವುದು ಹೆಚ್ಚಾಗಿ ನೆಹರೂರವರ ಬಗ್ಗೆ ಗಾಂಧಿ ಹೆಚ್ಚು ಒಲವು ತೋರಿಸಲಾರಂಭಿಸಿದರು. ಇದೇ ಹೊತ್ತಿಗೆ ಸರಿಯಾಗಿ ಹಿಂದೂ ಮಹಾಸಭಾದವರ ‘ಹಿಂದೂ ರಾಷ್ಟ್ರ’ದ ಗದ್ದಲ ಹೆಚ್ಚಾಗಿತ್ತಲ್ಲದೆ ‘ದ್ವಿರಾಷ್ಟ್ರ ನೀತಿ’ಯೂ ಹೆಚ್ಚು ಮನ್ನಣೆ ಪಡೆಯಲಾರಂಭಿಸಿತು.

ಈ ಹಂತದಲ್ಲೂ ಅವರು ಕಾಂಗ್ರೆಸ್‌ನಿಂದ ಹೊರಹೋಗಲು ಇಚ್ಛಿಸಲಿಲ್ಲ. ಆದರೆ ಬಹುಸಂಖ್ಯಾತ ಜನಾಂಗ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರಲ್ಲಿ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಳ ಬಗ್ಗೆ ಆತಂಕ ಮೂಡುವುದು ಸಹಜ. ಅದನ್ನು ನಿವಾರಿಸಬೇಕಾದರೆ ಕಾನೂನಿನಲ್ಲಿ ಅವರಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಎಂದು ಎಚ್ಚರಿಕೆ ನೀಡಿದ್ದರು. ಅವರ ಈ ಎಚ್ಚರಿಕೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸದಿದ್ದಾಗ ನಿರಾಶೆಗೊಂಡ ಜಿನ್ನಾ ಕಾಂಗ್ರೆಸ್ ಪಕ್ಷದಿಂದಲೇ ದೂರ ಸರಿಯಲಾರಂಭಿಸಿದರು.

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ಸಿಗುವ ನಾಲ್ಕು ದಿನ ಮುನ್ನ ಜಿನ್ನಾರವರು ಮಾಡಿದ ಭಾಷಣವೇ ಇವತ್ತು ಅಡ್ವಾಣಿಗೆ ಬಹಳ ಮೆಚ್ಚುಗೆಯಾಗಿದೆ. ಆದರೆ ಜಿನ್ನಾರವರು ಹಿಂದೂ-ಮುಸ್ಲಿಂ ಐಕ್ಯತೆ ಬಗ್ಗೆ ಹಾಗೆ ಮಾತನಾಡಿದ್ದು ಅದೊಂದೇ ಬಾರಿ ಅಲ್ಲ. ಪಾಕಿಸ್ತಾನಕ್ಕಾಗಿ ಹೋರಾಡಿದ್ದ ಜಿನ್ನಾ ಮೂಲಭೂತವಾಗಿ ಇಸ್ಲಾಂ ಧರ್ಮಕ್ಕೆ ಬದ್ದರಾಗಿಯೂ ಇರಲಿಲ್ಲ. ಹಾಗೆಯೇ ಹಿಂದೂ ದ್ವೇಷಿಯೂ ಆಗಿರಲಿಲ್ಲ. ಅವರು ಪಾಕಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಹಲವೇ ದಿನಗಳ ನಂತರ ಎಂ.ಎಸ್.ಎಂ ಶರ್ಮ ಎಂಬ ಹಿಂದೂ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ನಾನು ಈಗಲೂ ಹಿಂದೂ-ಮುಸ್ಲಿಂರ ಐಕ್ಯತೆಯನ್ನು ಬಯಸುತ್ತೇನಲ್ಲದೆ, ಸದ್ಯದಲ್ಲೇ ಪಾಕಿಸ್ತಾನದಲ್ಲಿರುವ ಹಿಂದೂಗಳ ರಕ್ಷಣೆಗೆಂದು ನಾನೇ ‘ಪ್ರೊಟೆಕ್ಟರ್ ಜನರಲ್’ಆಗಿ ನಿಲ್ಲುತ್ತೇನೆ ಎಂದು ಹೇಳಿದ್ದರು.

ಅಂದಹಾಗೆ, ಇಲ್ಲಿ ದಾಖಲಿಸಿರುವುದಕ್ಕೆಲ್ಲಾ ಮೂಲ ಪ್ರೇರಣೆ ‘ಅಂಡರ್‌ಸ್ಟಾಂಡಿಂಗ್ ದಿ ಮುಸ್ಲಿಂ ಮೈಂಡ್’ ಎಂಬ ಪುಸ್ತಕದಲ್ಲಿ ಜಿನ್ನಾರವರನ್ನು ಕುರಿತ ಅಧ್ಯಾಯ. ಈ ಪುಸ್ತಕವನ್ನು ಬರೆದವರಿರುವವರು ಮತ್ತಿನ್ಯಾರೂ ಅಲ್ಲ… ಪ್ರಖ್ಯಾತ ಸಂಶೋಧಕರೂ, ಮಹಾತ್ಮ ಗಾಂಧಿಯವರ ಮೊಮ್ಮಗನೂ ಆಗಿರುವ ರಾಜ್‌ಮೋಹನ್ ಗಾಂಧಿಯವರು!!

ಗೌರಿ ಲಂಕೇಶ್,
ಜೂನ್ 22, 2005 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...