Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ....

ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ….

- Advertisement -
- Advertisement -

ನಮ್ಮ ಸ್ವಾತಂತ್ರ್ಯ ಸಂಗ್ರಾಮ ಅಂತ್ಯಗೊಂಡಿದ್ದರಲ್ಲಿನ ಒಂದು ವಿಚಿತ್ರ ವಿಶಿಷ್ಟತೆ ಯಾವುದೆಂದರೆ; ನನ್ನ ನರನಾಡಿಗಳಲ್ಲಿ ನಾನು ಸಂಪೂರ್ಣವಾಗಿ ಹಿಂದೂ ಎಂದು ಹೇಳಿದ್ದ ಮಹಾತ್ಮ ಗಾಂಧಿ ಜಾತ್ಯಾತೀತ ಭಾರತದ ರಾಷ್ಟ್ರಪಿತ ಆದದ್ದು. ಹಾಗೆಯೇ ದೇವರು-ಧರ್ಮದಲ್ಲಿ ನಂಬಿಕೆ ಇರದಿದ್ದ, ಉರ್ದು ಭಾಷೆ ಇರಲಿ, ಇಂಗ್ಲಿಷ್ ಬಿಟ್ಟರೆ ಭಾರತದ ಒಂದೇಒಂದು ಭಾಷೆಯಲ್ಲಿ ಮಾತನಾಡಲು ಬಾರದಿದ್ದ, ಇಸ್ಲಾಂನಲ್ಲಿ ನಿಷೇಧಿಸಲ್ಪಟ್ಟಿರುವ ‘ತೀರ್ಥ’ ಮತ್ತು ಆಹಾರವನ್ನು ಸೇವಿಸುತ್ತಿದ್ದ, ನಾಸ್ತಿಕರಾಗಿದ್ದ ಮೊಹ್ಮದ್ ಅಲಿ ಜಿನ್ನಾರವರು ಇಸ್ಲಾಂ ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ ಪಾಕಿಸ್ತಾನದ ರಾಷ್ಟ್ರಪಿತ ಆದದ್ದು!!

ಇಂಥಾ ವೈಚಿತ್ರ್ಯದ ನಡುವೆಯೂ ಇವರಿಬ್ಬರ ಮಧ್ಯೆ ಹಲವು ಸಾಮ್ಯತೆಗಳಿವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಗಾಂಧಿ-ಜಿನ್ನಾ, ಇಬ್ಬರೂ ಹಿಂದೂ-ಮುಸ್ಲೀಮರ ನಡುವೆ ಸೌಹಾರ್ದವ ಬಯಸಿದವರು.

ಬಾಲಗಂಗಾಧರ ತಿಲಕ್‌ರವರು ಸ್ವರಾಜ್ಯ ನನ್ನ ಜನ್ಮಸಿದ್ದ ಹಕ್ಕು ಎಂಬ ಹೇಳಿಕೆಯ ಮೂಲಕ ಬ್ರಿಟಿಷ್ ಸರ್ಕಾರದ ಕೆಂಗಣ್ಣಿಗೆ ಗುರಿಯಾದಾಗ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದವರಲ್ಲಿ ಜಿನ್ನಾ ಕೂಡಾ ಒಬ್ಬರು. ಗೋಪಾಲ್ ಕೃಷ್ಣ ಗೋಖಲೆಯವರು ಒಂದುಕಡೆ ಜಿನ್ನಾರ ಬಗ್ಗೆ ಧಾರ್ಮಿಕ ಪೂರ್ವಗ್ರಹಗಳಿಂದ ಕಳಂಕಿತರಾಗದಿರುವ ಜಿನ್ನಾ ಹಿಂದೂ-ಮುಸ್ಲಿಂ ಐಕ್ಯತೆಗೆ ಹೇಳಿ ಮಾಡಿಸಿದಂತಹ ರಾಯಭಾರಿ ಎಂದು ಹೇಳಿದ್ದು ಅತಿಶಯೋಕ್ತಿಯ ಮಾತಲ್ಲ.

ಮುಸ್ಲಿಂ ಲೀಗ್‌ನವರು ಜಿನ್ನಾರನ್ನು ಅದೆಷ್ಟೇ ಓಲೈಸಿದರೂ ಸ್ವಾತಂತ್ರ್ಯ ಸಿಗಬೇಕಿದ್ದರೆ ಹಿಂದೂಗಳು ಹಾಗೂ ಮುಸ್ಲಿಮರು ಒಗ್ಗಟ್ಟಾಗಿಯೇ ಇರಬೇಕು ಎಂದು ಹೇಳುತ್ತಿದ್ದ ಜಿನ್ನಾ ಕಾಂಗ್ರೆಸ್‌ನಲ್ಲೇ ಉಳಿದರು. ಆದರೆ ಕಾಲಕ್ರಮೇಣ ಕಾಂಗ್ರೆಸ್ ಮೇಲೆ ಗಾಂಧಿಯವರ ಹಿಡಿತ ಬಿಗಿಗೊಂಡಿತು. ಅದರಲ್ಲಿದ್ದ ಹಿಂದೂ ನಾಯಕರೆಲ್ಲರೂ ಗಾಂಧಿಗೆ ಡೊಗ್ಗು ಸಲಾಮು ಹೊಡೆಯುವುದು ಹೆಚ್ಚಾಗಿ ನೆಹರೂರವರ ಬಗ್ಗೆ ಗಾಂಧಿ ಹೆಚ್ಚು ಒಲವು ತೋರಿಸಲಾರಂಭಿಸಿದರು. ಇದೇ ಹೊತ್ತಿಗೆ ಸರಿಯಾಗಿ ಹಿಂದೂ ಮಹಾಸಭಾದವರ ‘ಹಿಂದೂ ರಾಷ್ಟ್ರ’ದ ಗದ್ದಲ ಹೆಚ್ಚಾಗಿತ್ತಲ್ಲದೆ ‘ದ್ವಿರಾಷ್ಟ್ರ ನೀತಿ’ಯೂ ಹೆಚ್ಚು ಮನ್ನಣೆ ಪಡೆಯಲಾರಂಭಿಸಿತು.

ಈ ಹಂತದಲ್ಲೂ ಅವರು ಕಾಂಗ್ರೆಸ್‌ನಿಂದ ಹೊರಹೋಗಲು ಇಚ್ಛಿಸಲಿಲ್ಲ. ಆದರೆ ಬಹುಸಂಖ್ಯಾತ ಜನಾಂಗ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರಲ್ಲಿ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಳ ಬಗ್ಗೆ ಆತಂಕ ಮೂಡುವುದು ಸಹಜ. ಅದನ್ನು ನಿವಾರಿಸಬೇಕಾದರೆ ಕಾನೂನಿನಲ್ಲಿ ಅವರಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಎಂದು ಎಚ್ಚರಿಕೆ ನೀಡಿದ್ದರು. ಅವರ ಈ ಎಚ್ಚರಿಕೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸದಿದ್ದಾಗ ನಿರಾಶೆಗೊಂಡ ಜಿನ್ನಾ ಕಾಂಗ್ರೆಸ್ ಪಕ್ಷದಿಂದಲೇ ದೂರ ಸರಿಯಲಾರಂಭಿಸಿದರು.

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ಸಿಗುವ ನಾಲ್ಕು ದಿನ ಮುನ್ನ ಜಿನ್ನಾರವರು ಮಾಡಿದ ಭಾಷಣವೇ ಇವತ್ತು ಅಡ್ವಾಣಿಗೆ ಬಹಳ ಮೆಚ್ಚುಗೆಯಾಗಿದೆ. ಆದರೆ ಜಿನ್ನಾರವರು ಹಿಂದೂ-ಮುಸ್ಲಿಂ ಐಕ್ಯತೆ ಬಗ್ಗೆ ಹಾಗೆ ಮಾತನಾಡಿದ್ದು ಅದೊಂದೇ ಬಾರಿ ಅಲ್ಲ. ಪಾಕಿಸ್ತಾನಕ್ಕಾಗಿ ಹೋರಾಡಿದ್ದ ಜಿನ್ನಾ ಮೂಲಭೂತವಾಗಿ ಇಸ್ಲಾಂ ಧರ್ಮಕ್ಕೆ ಬದ್ದರಾಗಿಯೂ ಇರಲಿಲ್ಲ. ಹಾಗೆಯೇ ಹಿಂದೂ ದ್ವೇಷಿಯೂ ಆಗಿರಲಿಲ್ಲ. ಅವರು ಪಾಕಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಹಲವೇ ದಿನಗಳ ನಂತರ ಎಂ.ಎಸ್.ಎಂ ಶರ್ಮ ಎಂಬ ಹಿಂದೂ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ನಾನು ಈಗಲೂ ಹಿಂದೂ-ಮುಸ್ಲಿಂರ ಐಕ್ಯತೆಯನ್ನು ಬಯಸುತ್ತೇನಲ್ಲದೆ, ಸದ್ಯದಲ್ಲೇ ಪಾಕಿಸ್ತಾನದಲ್ಲಿರುವ ಹಿಂದೂಗಳ ರಕ್ಷಣೆಗೆಂದು ನಾನೇ ‘ಪ್ರೊಟೆಕ್ಟರ್ ಜನರಲ್’ಆಗಿ ನಿಲ್ಲುತ್ತೇನೆ ಎಂದು ಹೇಳಿದ್ದರು.

ಅಂದಹಾಗೆ, ಇಲ್ಲಿ ದಾಖಲಿಸಿರುವುದಕ್ಕೆಲ್ಲಾ ಮೂಲ ಪ್ರೇರಣೆ ‘ಅಂಡರ್‌ಸ್ಟಾಂಡಿಂಗ್ ದಿ ಮುಸ್ಲಿಂ ಮೈಂಡ್’ ಎಂಬ ಪುಸ್ತಕದಲ್ಲಿ ಜಿನ್ನಾರವರನ್ನು ಕುರಿತ ಅಧ್ಯಾಯ. ಈ ಪುಸ್ತಕವನ್ನು ಬರೆದವರಿರುವವರು ಮತ್ತಿನ್ಯಾರೂ ಅಲ್ಲ… ಪ್ರಖ್ಯಾತ ಸಂಶೋಧಕರೂ, ಮಹಾತ್ಮ ಗಾಂಧಿಯವರ ಮೊಮ್ಮಗನೂ ಆಗಿರುವ ರಾಜ್‌ಮೋಹನ್ ಗಾಂಧಿಯವರು!!

ಗೌರಿ ಲಂಕೇಶ್,
ಜೂನ್ 22, 2005 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...