Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ....

ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ….

- Advertisement -
- Advertisement -

ನಮ್ಮ ಸ್ವಾತಂತ್ರ್ಯ ಸಂಗ್ರಾಮ ಅಂತ್ಯಗೊಂಡಿದ್ದರಲ್ಲಿನ ಒಂದು ವಿಚಿತ್ರ ವಿಶಿಷ್ಟತೆ ಯಾವುದೆಂದರೆ; ನನ್ನ ನರನಾಡಿಗಳಲ್ಲಿ ನಾನು ಸಂಪೂರ್ಣವಾಗಿ ಹಿಂದೂ ಎಂದು ಹೇಳಿದ್ದ ಮಹಾತ್ಮ ಗಾಂಧಿ ಜಾತ್ಯಾತೀತ ಭಾರತದ ರಾಷ್ಟ್ರಪಿತ ಆದದ್ದು. ಹಾಗೆಯೇ ದೇವರು-ಧರ್ಮದಲ್ಲಿ ನಂಬಿಕೆ ಇರದಿದ್ದ, ಉರ್ದು ಭಾಷೆ ಇರಲಿ, ಇಂಗ್ಲಿಷ್ ಬಿಟ್ಟರೆ ಭಾರತದ ಒಂದೇಒಂದು ಭಾಷೆಯಲ್ಲಿ ಮಾತನಾಡಲು ಬಾರದಿದ್ದ, ಇಸ್ಲಾಂನಲ್ಲಿ ನಿಷೇಧಿಸಲ್ಪಟ್ಟಿರುವ ‘ತೀರ್ಥ’ ಮತ್ತು ಆಹಾರವನ್ನು ಸೇವಿಸುತ್ತಿದ್ದ, ನಾಸ್ತಿಕರಾಗಿದ್ದ ಮೊಹ್ಮದ್ ಅಲಿ ಜಿನ್ನಾರವರು ಇಸ್ಲಾಂ ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ ಪಾಕಿಸ್ತಾನದ ರಾಷ್ಟ್ರಪಿತ ಆದದ್ದು!!

ಇಂಥಾ ವೈಚಿತ್ರ್ಯದ ನಡುವೆಯೂ ಇವರಿಬ್ಬರ ಮಧ್ಯೆ ಹಲವು ಸಾಮ್ಯತೆಗಳಿವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಗಾಂಧಿ-ಜಿನ್ನಾ, ಇಬ್ಬರೂ ಹಿಂದೂ-ಮುಸ್ಲೀಮರ ನಡುವೆ ಸೌಹಾರ್ದವ ಬಯಸಿದವರು.

ಬಾಲಗಂಗಾಧರ ತಿಲಕ್‌ರವರು ಸ್ವರಾಜ್ಯ ನನ್ನ ಜನ್ಮಸಿದ್ದ ಹಕ್ಕು ಎಂಬ ಹೇಳಿಕೆಯ ಮೂಲಕ ಬ್ರಿಟಿಷ್ ಸರ್ಕಾರದ ಕೆಂಗಣ್ಣಿಗೆ ಗುರಿಯಾದಾಗ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದವರಲ್ಲಿ ಜಿನ್ನಾ ಕೂಡಾ ಒಬ್ಬರು. ಗೋಪಾಲ್ ಕೃಷ್ಣ ಗೋಖಲೆಯವರು ಒಂದುಕಡೆ ಜಿನ್ನಾರ ಬಗ್ಗೆ ಧಾರ್ಮಿಕ ಪೂರ್ವಗ್ರಹಗಳಿಂದ ಕಳಂಕಿತರಾಗದಿರುವ ಜಿನ್ನಾ ಹಿಂದೂ-ಮುಸ್ಲಿಂ ಐಕ್ಯತೆಗೆ ಹೇಳಿ ಮಾಡಿಸಿದಂತಹ ರಾಯಭಾರಿ ಎಂದು ಹೇಳಿದ್ದು ಅತಿಶಯೋಕ್ತಿಯ ಮಾತಲ್ಲ.

ಮುಸ್ಲಿಂ ಲೀಗ್‌ನವರು ಜಿನ್ನಾರನ್ನು ಅದೆಷ್ಟೇ ಓಲೈಸಿದರೂ ಸ್ವಾತಂತ್ರ್ಯ ಸಿಗಬೇಕಿದ್ದರೆ ಹಿಂದೂಗಳು ಹಾಗೂ ಮುಸ್ಲಿಮರು ಒಗ್ಗಟ್ಟಾಗಿಯೇ ಇರಬೇಕು ಎಂದು ಹೇಳುತ್ತಿದ್ದ ಜಿನ್ನಾ ಕಾಂಗ್ರೆಸ್‌ನಲ್ಲೇ ಉಳಿದರು. ಆದರೆ ಕಾಲಕ್ರಮೇಣ ಕಾಂಗ್ರೆಸ್ ಮೇಲೆ ಗಾಂಧಿಯವರ ಹಿಡಿತ ಬಿಗಿಗೊಂಡಿತು. ಅದರಲ್ಲಿದ್ದ ಹಿಂದೂ ನಾಯಕರೆಲ್ಲರೂ ಗಾಂಧಿಗೆ ಡೊಗ್ಗು ಸಲಾಮು ಹೊಡೆಯುವುದು ಹೆಚ್ಚಾಗಿ ನೆಹರೂರವರ ಬಗ್ಗೆ ಗಾಂಧಿ ಹೆಚ್ಚು ಒಲವು ತೋರಿಸಲಾರಂಭಿಸಿದರು. ಇದೇ ಹೊತ್ತಿಗೆ ಸರಿಯಾಗಿ ಹಿಂದೂ ಮಹಾಸಭಾದವರ ‘ಹಿಂದೂ ರಾಷ್ಟ್ರ’ದ ಗದ್ದಲ ಹೆಚ್ಚಾಗಿತ್ತಲ್ಲದೆ ‘ದ್ವಿರಾಷ್ಟ್ರ ನೀತಿ’ಯೂ ಹೆಚ್ಚು ಮನ್ನಣೆ ಪಡೆಯಲಾರಂಭಿಸಿತು.

ಈ ಹಂತದಲ್ಲೂ ಅವರು ಕಾಂಗ್ರೆಸ್‌ನಿಂದ ಹೊರಹೋಗಲು ಇಚ್ಛಿಸಲಿಲ್ಲ. ಆದರೆ ಬಹುಸಂಖ್ಯಾತ ಜನಾಂಗ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರಲ್ಲಿ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಳ ಬಗ್ಗೆ ಆತಂಕ ಮೂಡುವುದು ಸಹಜ. ಅದನ್ನು ನಿವಾರಿಸಬೇಕಾದರೆ ಕಾನೂನಿನಲ್ಲಿ ಅವರಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಎಂದು ಎಚ್ಚರಿಕೆ ನೀಡಿದ್ದರು. ಅವರ ಈ ಎಚ್ಚರಿಕೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸದಿದ್ದಾಗ ನಿರಾಶೆಗೊಂಡ ಜಿನ್ನಾ ಕಾಂಗ್ರೆಸ್ ಪಕ್ಷದಿಂದಲೇ ದೂರ ಸರಿಯಲಾರಂಭಿಸಿದರು.

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ಸಿಗುವ ನಾಲ್ಕು ದಿನ ಮುನ್ನ ಜಿನ್ನಾರವರು ಮಾಡಿದ ಭಾಷಣವೇ ಇವತ್ತು ಅಡ್ವಾಣಿಗೆ ಬಹಳ ಮೆಚ್ಚುಗೆಯಾಗಿದೆ. ಆದರೆ ಜಿನ್ನಾರವರು ಹಿಂದೂ-ಮುಸ್ಲಿಂ ಐಕ್ಯತೆ ಬಗ್ಗೆ ಹಾಗೆ ಮಾತನಾಡಿದ್ದು ಅದೊಂದೇ ಬಾರಿ ಅಲ್ಲ. ಪಾಕಿಸ್ತಾನಕ್ಕಾಗಿ ಹೋರಾಡಿದ್ದ ಜಿನ್ನಾ ಮೂಲಭೂತವಾಗಿ ಇಸ್ಲಾಂ ಧರ್ಮಕ್ಕೆ ಬದ್ದರಾಗಿಯೂ ಇರಲಿಲ್ಲ. ಹಾಗೆಯೇ ಹಿಂದೂ ದ್ವೇಷಿಯೂ ಆಗಿರಲಿಲ್ಲ. ಅವರು ಪಾಕಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಹಲವೇ ದಿನಗಳ ನಂತರ ಎಂ.ಎಸ್.ಎಂ ಶರ್ಮ ಎಂಬ ಹಿಂದೂ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ನಾನು ಈಗಲೂ ಹಿಂದೂ-ಮುಸ್ಲಿಂರ ಐಕ್ಯತೆಯನ್ನು ಬಯಸುತ್ತೇನಲ್ಲದೆ, ಸದ್ಯದಲ್ಲೇ ಪಾಕಿಸ್ತಾನದಲ್ಲಿರುವ ಹಿಂದೂಗಳ ರಕ್ಷಣೆಗೆಂದು ನಾನೇ ‘ಪ್ರೊಟೆಕ್ಟರ್ ಜನರಲ್’ಆಗಿ ನಿಲ್ಲುತ್ತೇನೆ ಎಂದು ಹೇಳಿದ್ದರು.

ಅಂದಹಾಗೆ, ಇಲ್ಲಿ ದಾಖಲಿಸಿರುವುದಕ್ಕೆಲ್ಲಾ ಮೂಲ ಪ್ರೇರಣೆ ‘ಅಂಡರ್‌ಸ್ಟಾಂಡಿಂಗ್ ದಿ ಮುಸ್ಲಿಂ ಮೈಂಡ್’ ಎಂಬ ಪುಸ್ತಕದಲ್ಲಿ ಜಿನ್ನಾರವರನ್ನು ಕುರಿತ ಅಧ್ಯಾಯ. ಈ ಪುಸ್ತಕವನ್ನು ಬರೆದವರಿರುವವರು ಮತ್ತಿನ್ಯಾರೂ ಅಲ್ಲ… ಪ್ರಖ್ಯಾತ ಸಂಶೋಧಕರೂ, ಮಹಾತ್ಮ ಗಾಂಧಿಯವರ ಮೊಮ್ಮಗನೂ ಆಗಿರುವ ರಾಜ್‌ಮೋಹನ್ ಗಾಂಧಿಯವರು!!

ಗೌರಿ ಲಂಕೇಶ್,
ಜೂನ್ 22, 2005 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....