Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ....

ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ….

- Advertisement -
- Advertisement -

ನಮ್ಮ ಸ್ವಾತಂತ್ರ್ಯ ಸಂಗ್ರಾಮ ಅಂತ್ಯಗೊಂಡಿದ್ದರಲ್ಲಿನ ಒಂದು ವಿಚಿತ್ರ ವಿಶಿಷ್ಟತೆ ಯಾವುದೆಂದರೆ; ನನ್ನ ನರನಾಡಿಗಳಲ್ಲಿ ನಾನು ಸಂಪೂರ್ಣವಾಗಿ ಹಿಂದೂ ಎಂದು ಹೇಳಿದ್ದ ಮಹಾತ್ಮ ಗಾಂಧಿ ಜಾತ್ಯಾತೀತ ಭಾರತದ ರಾಷ್ಟ್ರಪಿತ ಆದದ್ದು. ಹಾಗೆಯೇ ದೇವರು-ಧರ್ಮದಲ್ಲಿ ನಂಬಿಕೆ ಇರದಿದ್ದ, ಉರ್ದು ಭಾಷೆ ಇರಲಿ, ಇಂಗ್ಲಿಷ್ ಬಿಟ್ಟರೆ ಭಾರತದ ಒಂದೇಒಂದು ಭಾಷೆಯಲ್ಲಿ ಮಾತನಾಡಲು ಬಾರದಿದ್ದ, ಇಸ್ಲಾಂನಲ್ಲಿ ನಿಷೇಧಿಸಲ್ಪಟ್ಟಿರುವ ‘ತೀರ್ಥ’ ಮತ್ತು ಆಹಾರವನ್ನು ಸೇವಿಸುತ್ತಿದ್ದ, ನಾಸ್ತಿಕರಾಗಿದ್ದ ಮೊಹ್ಮದ್ ಅಲಿ ಜಿನ್ನಾರವರು ಇಸ್ಲಾಂ ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ ಪಾಕಿಸ್ತಾನದ ರಾಷ್ಟ್ರಪಿತ ಆದದ್ದು!!

ಇಂಥಾ ವೈಚಿತ್ರ್ಯದ ನಡುವೆಯೂ ಇವರಿಬ್ಬರ ಮಧ್ಯೆ ಹಲವು ಸಾಮ್ಯತೆಗಳಿವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಗಾಂಧಿ-ಜಿನ್ನಾ, ಇಬ್ಬರೂ ಹಿಂದೂ-ಮುಸ್ಲೀಮರ ನಡುವೆ ಸೌಹಾರ್ದವ ಬಯಸಿದವರು.

ಬಾಲಗಂಗಾಧರ ತಿಲಕ್‌ರವರು ಸ್ವರಾಜ್ಯ ನನ್ನ ಜನ್ಮಸಿದ್ದ ಹಕ್ಕು ಎಂಬ ಹೇಳಿಕೆಯ ಮೂಲಕ ಬ್ರಿಟಿಷ್ ಸರ್ಕಾರದ ಕೆಂಗಣ್ಣಿಗೆ ಗುರಿಯಾದಾಗ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದವರಲ್ಲಿ ಜಿನ್ನಾ ಕೂಡಾ ಒಬ್ಬರು. ಗೋಪಾಲ್ ಕೃಷ್ಣ ಗೋಖಲೆಯವರು ಒಂದುಕಡೆ ಜಿನ್ನಾರ ಬಗ್ಗೆ ಧಾರ್ಮಿಕ ಪೂರ್ವಗ್ರಹಗಳಿಂದ ಕಳಂಕಿತರಾಗದಿರುವ ಜಿನ್ನಾ ಹಿಂದೂ-ಮುಸ್ಲಿಂ ಐಕ್ಯತೆಗೆ ಹೇಳಿ ಮಾಡಿಸಿದಂತಹ ರಾಯಭಾರಿ ಎಂದು ಹೇಳಿದ್ದು ಅತಿಶಯೋಕ್ತಿಯ ಮಾತಲ್ಲ.

ಮುಸ್ಲಿಂ ಲೀಗ್‌ನವರು ಜಿನ್ನಾರನ್ನು ಅದೆಷ್ಟೇ ಓಲೈಸಿದರೂ ಸ್ವಾತಂತ್ರ್ಯ ಸಿಗಬೇಕಿದ್ದರೆ ಹಿಂದೂಗಳು ಹಾಗೂ ಮುಸ್ಲಿಮರು ಒಗ್ಗಟ್ಟಾಗಿಯೇ ಇರಬೇಕು ಎಂದು ಹೇಳುತ್ತಿದ್ದ ಜಿನ್ನಾ ಕಾಂಗ್ರೆಸ್‌ನಲ್ಲೇ ಉಳಿದರು. ಆದರೆ ಕಾಲಕ್ರಮೇಣ ಕಾಂಗ್ರೆಸ್ ಮೇಲೆ ಗಾಂಧಿಯವರ ಹಿಡಿತ ಬಿಗಿಗೊಂಡಿತು. ಅದರಲ್ಲಿದ್ದ ಹಿಂದೂ ನಾಯಕರೆಲ್ಲರೂ ಗಾಂಧಿಗೆ ಡೊಗ್ಗು ಸಲಾಮು ಹೊಡೆಯುವುದು ಹೆಚ್ಚಾಗಿ ನೆಹರೂರವರ ಬಗ್ಗೆ ಗಾಂಧಿ ಹೆಚ್ಚು ಒಲವು ತೋರಿಸಲಾರಂಭಿಸಿದರು. ಇದೇ ಹೊತ್ತಿಗೆ ಸರಿಯಾಗಿ ಹಿಂದೂ ಮಹಾಸಭಾದವರ ‘ಹಿಂದೂ ರಾಷ್ಟ್ರ’ದ ಗದ್ದಲ ಹೆಚ್ಚಾಗಿತ್ತಲ್ಲದೆ ‘ದ್ವಿರಾಷ್ಟ್ರ ನೀತಿ’ಯೂ ಹೆಚ್ಚು ಮನ್ನಣೆ ಪಡೆಯಲಾರಂಭಿಸಿತು.

ಈ ಹಂತದಲ್ಲೂ ಅವರು ಕಾಂಗ್ರೆಸ್‌ನಿಂದ ಹೊರಹೋಗಲು ಇಚ್ಛಿಸಲಿಲ್ಲ. ಆದರೆ ಬಹುಸಂಖ್ಯಾತ ಜನಾಂಗ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರಲ್ಲಿ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಳ ಬಗ್ಗೆ ಆತಂಕ ಮೂಡುವುದು ಸಹಜ. ಅದನ್ನು ನಿವಾರಿಸಬೇಕಾದರೆ ಕಾನೂನಿನಲ್ಲಿ ಅವರಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಎಂದು ಎಚ್ಚರಿಕೆ ನೀಡಿದ್ದರು. ಅವರ ಈ ಎಚ್ಚರಿಕೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸದಿದ್ದಾಗ ನಿರಾಶೆಗೊಂಡ ಜಿನ್ನಾ ಕಾಂಗ್ರೆಸ್ ಪಕ್ಷದಿಂದಲೇ ದೂರ ಸರಿಯಲಾರಂಭಿಸಿದರು.

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ಸಿಗುವ ನಾಲ್ಕು ದಿನ ಮುನ್ನ ಜಿನ್ನಾರವರು ಮಾಡಿದ ಭಾಷಣವೇ ಇವತ್ತು ಅಡ್ವಾಣಿಗೆ ಬಹಳ ಮೆಚ್ಚುಗೆಯಾಗಿದೆ. ಆದರೆ ಜಿನ್ನಾರವರು ಹಿಂದೂ-ಮುಸ್ಲಿಂ ಐಕ್ಯತೆ ಬಗ್ಗೆ ಹಾಗೆ ಮಾತನಾಡಿದ್ದು ಅದೊಂದೇ ಬಾರಿ ಅಲ್ಲ. ಪಾಕಿಸ್ತಾನಕ್ಕಾಗಿ ಹೋರಾಡಿದ್ದ ಜಿನ್ನಾ ಮೂಲಭೂತವಾಗಿ ಇಸ್ಲಾಂ ಧರ್ಮಕ್ಕೆ ಬದ್ದರಾಗಿಯೂ ಇರಲಿಲ್ಲ. ಹಾಗೆಯೇ ಹಿಂದೂ ದ್ವೇಷಿಯೂ ಆಗಿರಲಿಲ್ಲ. ಅವರು ಪಾಕಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಹಲವೇ ದಿನಗಳ ನಂತರ ಎಂ.ಎಸ್.ಎಂ ಶರ್ಮ ಎಂಬ ಹಿಂದೂ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ನಾನು ಈಗಲೂ ಹಿಂದೂ-ಮುಸ್ಲಿಂರ ಐಕ್ಯತೆಯನ್ನು ಬಯಸುತ್ತೇನಲ್ಲದೆ, ಸದ್ಯದಲ್ಲೇ ಪಾಕಿಸ್ತಾನದಲ್ಲಿರುವ ಹಿಂದೂಗಳ ರಕ್ಷಣೆಗೆಂದು ನಾನೇ ‘ಪ್ರೊಟೆಕ್ಟರ್ ಜನರಲ್’ಆಗಿ ನಿಲ್ಲುತ್ತೇನೆ ಎಂದು ಹೇಳಿದ್ದರು.

ಅಂದಹಾಗೆ, ಇಲ್ಲಿ ದಾಖಲಿಸಿರುವುದಕ್ಕೆಲ್ಲಾ ಮೂಲ ಪ್ರೇರಣೆ ‘ಅಂಡರ್‌ಸ್ಟಾಂಡಿಂಗ್ ದಿ ಮುಸ್ಲಿಂ ಮೈಂಡ್’ ಎಂಬ ಪುಸ್ತಕದಲ್ಲಿ ಜಿನ್ನಾರವರನ್ನು ಕುರಿತ ಅಧ್ಯಾಯ. ಈ ಪುಸ್ತಕವನ್ನು ಬರೆದವರಿರುವವರು ಮತ್ತಿನ್ಯಾರೂ ಅಲ್ಲ… ಪ್ರಖ್ಯಾತ ಸಂಶೋಧಕರೂ, ಮಹಾತ್ಮ ಗಾಂಧಿಯವರ ಮೊಮ್ಮಗನೂ ಆಗಿರುವ ರಾಜ್‌ಮೋಹನ್ ಗಾಂಧಿಯವರು!!

ಗೌರಿ ಲಂಕೇಶ್,
ಜೂನ್ 22, 2005 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...