Homeಸಿನಿಮಾಸಿನಿ ಸುದ್ದಿಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ...

ಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ…

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಪ್ರತಿ ಎಲೆಕ್ಷನ್‍ನಂತೆ ಈ ಸಲವೂ ಸಿನಿಮಾ ಸ್ಟಾರ್‍ಗಳ ಪ್ರಚಾರ ಜೋರಾಗಿದೆ. ಅದರಲ್ಲೂ ನಟ ಯಶ್ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರೂ ಪಾರ್ಟಿಗಳಲ್ಲಿ ಪ್ರಚಾರ ಮಾಡ್ತಾ ಜನರಲ್ಲಿ ಶ್ಯಾನೆ ಗೊಂದಲ ಎಬ್ಬಿಸಿದ್ದಾರೆ. `ಎಲ್ಲಿದ್ದೀರಾ ಯಶ್, ಇದೇನ್ ಮಾಡ್ತಾ ಇದೀರಾ ಯಶ್’ ಅಂತ ಕೇಳಿದ್ರೆ, `ಪಕ್ಷ, ಸಿದ್ಧಾಂತ ನಂಗೆ ಗೊತ್ತಿಲ್ಲ. ಒಳ್ಳೇ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ’ ಅನ್ನೋ ಉತ್ತರ ಕೊಡ್ತಾರೆ. ಈ `ಒಳ್ಳೇ ಅಭ್ಯರ್ಥಿ’ `ಹತ್ತಿರದ ನೆಂಟ’ `ಒಳ್ಳೇ ಸ್ನೇಹಿತ’ ಹೀಗೆ ನೆಪ ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸೋ ಯಶ್ ಮತ್ತು ಇನ್ನುಳಿದ ಸಿನಿ ಸಿಬ್ಬಂದಿಗಳಿಗೆ ಇಲ್ಲೊಂದು ಮಾತನ್ನು ಹೇಳಲೇಬೇಕಿದೆ.

ರಾಜಕೀಯ ಪ್ರಜ್ಞೆ ಮತ್ತು ಸಾಮಾಜಿಕ ಸನ್ನಿವೇಶಗಳ ಅರಿವಿಲ್ಲದೆ ತಮ್ಮ ಸ್ಟಾರ್‍ಗಿರಿಯನ್ನು ಮಾರ್ಕೆಟಿಂಗ್ ಸರಕುಗಳಾಗಿ ಮಾರಾಟಕ್ಕಿಡೋದು ಅಪಾಯಕಾರಿ ಮಾತ್ರವಲ್ಲ, ಜನರಿಗೆ ಎಸಗುವ ನಂಬಿಕೆ ದ್ರೋಹವೂ ಆಗಿರುತ್ತೆ. ಯಾಕೆಂದ್ರೆ ಚುನಾವಣೆಯಲ್ಲಿ ಒಬ್ಬ ವ್ಯಕ್ತಿ ಗೆದ್ದ ನಂತರ ಆತ ರಾಜಕೀಯ ಜವಾಬ್ಧಾರಿಯನ್ನು ನಿಭಾಯಿಸಬೇಕಿರುತ್ತದೆಯೇ ವಿನಾಃ ನಮ್ಮ ಜೊತೆಗಿನ ವೈಯಕ್ತಿಕ ಬಾಂಧವ್ಯವನ್ನಲ್ಲ. ಆ ರಾಜಕೀಯ ಜವಾಬ್ಧಾರಿ ಆತನ ಪಕ್ಷ, ಆ ಪಕ್ಷದ ಸಿದ್ಧಾಂತ, ನೀತಿಗಳನ್ನು ಅವಲಂಭಿಸಿರುತ್ತದೆ. ಒಂದು ಪಾರ್ಟಿ ಪ್ರಸ್ತುತ ಸನ್ನಿವೇಶದಲ್ಲಿ ಅಪಾಯಕಾರಿ ನಿಲುವುಗಳನ್ನು ತಳೆದಿದ್ದರೆ ಆ ಪಕ್ಷದ ಪರವಾಗಿ ಗೆದ್ದ ಆ `ಒಳ್ಳೆ ಅಭ್ಯರ್ಥಿ’ ಸಮಾಜದ ಜೊತೆ ಅಪಾಯಕಾರಿಯಾಗಿಯೇ ವರ್ತಿಸಬೇಕಾಗುತ್ತದೆ. ಅದನ್ನಾತ ಮೀರಲು ಸಾಧ್ಯವಿರುವುದಿಲ್ಲ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಶ್ ಪ್ರಚಾರ

ಉದಾಹರಣೆಗೆ, ನಮ್ಮ ಒಳ್ಳೇ ಸ್ನೇಹಿತ ಅಥವಾ ಹತ್ತಿರದ ಸಂಬಂಧಿ ಒಬ್ಬ ಅಸಹಾಯಕ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಸ್ಥಿತಿಯಲ್ಲಿ ನಮ್ಮ ಕಣ್ಣಿಗೆ ಬಿದ್ದ ಎಂದಿಟ್ಟುಕೊಳ್ಳಿ. ಆತ ನಮ್ಮ ಒಳ್ಳೆಯ ಸ್ನೇಹಿತನೇ ಆಗಿದ್ದರೂ ನಾವು ಆತನ ಪರ ನಿಲ್ಲುವುದಿಲ್ಲ. ಅದು ನಮ್ಮ ಸಾಮಾಜಿಕ ಹೊಣೆಗಾರಿಕೆ. ಅಷ್ಟರಮಟ್ಟಿಗೆ ನಮಗೆ ಪರಿಸ್ಥಿತಿಯ ಆಗುಹೋಗಿನ ಪ್ರಜ್ಞೆ ಇರುತ್ತೆ, ಇರಬೇಕು. ಇನ್ನೂ ಸಿಂಪಲ್ಲಾಗಿ ಹೇಳಬೇಕಂದ್ರೆ, ಕೆಟ್ಟ ಸ್ಕ್ರಿಪ್ಟ್ ಹಿಡಿದು ಬರುವ ನಿರ್ಮಾಪಕ ಅದೆಷ್ಟೇ ಒಳ್ಳೇ ಸ್ನೇಹಿತನಾಗಿದ್ದರೂ ಆತನಿಗೆ ಯಾವ ಸ್ಟಾರ್ ನಟನೂ ಕಾಲ್‍ಶೀಟ್ ಕೊಡೋದಿಲ್ಲ!

ಹಾಗಂತ ಸಿನಿಮಾ ಮಂದಿ ಪ್ರಚಾರ ಮಾಡಬಾರದು ಅಂತೇನಲ್ಲ. ಆದರೆ ತಮ್ಮ ಆ ಪ್ರಚಾರವನ್ನು ರಾಜಕೀಯವಾಗಿಯೇ ಸಮರ್ಥಿಸಿಕೊಳ್ಳುವ ಪೊಲಿಟಿಕಲ್ ಬದ್ಧತೆ ಮತ್ತು ಅರಿವು ಅಂತವರಲ್ಲಿ ಇರಬೇಕು. ರಾಜಕೀಯೇತರ ನೆಪವಿಟ್ಟುಕೊಂಡು ರಾಜಕೀಯ ಪ್ರಚಾರ ಮಾಡಬಾರದು! ಅಂದಹಾಗೆ, ಯಶ್‍ಗೆ ಗಣಿಮಾಫಿಯಾದ ಶ್ರೀರಾಮುಲುನಲ್ಲಿ ಅದ್ಯಾವ `ಒಳ್ಳೆ ಅಭ್ಯರ್ಥಿ’ ಕಾಣಿಸಿದನೋ ದೇವರೇ ಬಲ್ಲ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...