Homeಸಿನಿಮಾಸಿನಿ ಸುದ್ದಿಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ...

ಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ…

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಪ್ರತಿ ಎಲೆಕ್ಷನ್‍ನಂತೆ ಈ ಸಲವೂ ಸಿನಿಮಾ ಸ್ಟಾರ್‍ಗಳ ಪ್ರಚಾರ ಜೋರಾಗಿದೆ. ಅದರಲ್ಲೂ ನಟ ಯಶ್ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರೂ ಪಾರ್ಟಿಗಳಲ್ಲಿ ಪ್ರಚಾರ ಮಾಡ್ತಾ ಜನರಲ್ಲಿ ಶ್ಯಾನೆ ಗೊಂದಲ ಎಬ್ಬಿಸಿದ್ದಾರೆ. `ಎಲ್ಲಿದ್ದೀರಾ ಯಶ್, ಇದೇನ್ ಮಾಡ್ತಾ ಇದೀರಾ ಯಶ್’ ಅಂತ ಕೇಳಿದ್ರೆ, `ಪಕ್ಷ, ಸಿದ್ಧಾಂತ ನಂಗೆ ಗೊತ್ತಿಲ್ಲ. ಒಳ್ಳೇ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ’ ಅನ್ನೋ ಉತ್ತರ ಕೊಡ್ತಾರೆ. ಈ `ಒಳ್ಳೇ ಅಭ್ಯರ್ಥಿ’ `ಹತ್ತಿರದ ನೆಂಟ’ `ಒಳ್ಳೇ ಸ್ನೇಹಿತ’ ಹೀಗೆ ನೆಪ ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸೋ ಯಶ್ ಮತ್ತು ಇನ್ನುಳಿದ ಸಿನಿ ಸಿಬ್ಬಂದಿಗಳಿಗೆ ಇಲ್ಲೊಂದು ಮಾತನ್ನು ಹೇಳಲೇಬೇಕಿದೆ.

ರಾಜಕೀಯ ಪ್ರಜ್ಞೆ ಮತ್ತು ಸಾಮಾಜಿಕ ಸನ್ನಿವೇಶಗಳ ಅರಿವಿಲ್ಲದೆ ತಮ್ಮ ಸ್ಟಾರ್‍ಗಿರಿಯನ್ನು ಮಾರ್ಕೆಟಿಂಗ್ ಸರಕುಗಳಾಗಿ ಮಾರಾಟಕ್ಕಿಡೋದು ಅಪಾಯಕಾರಿ ಮಾತ್ರವಲ್ಲ, ಜನರಿಗೆ ಎಸಗುವ ನಂಬಿಕೆ ದ್ರೋಹವೂ ಆಗಿರುತ್ತೆ. ಯಾಕೆಂದ್ರೆ ಚುನಾವಣೆಯಲ್ಲಿ ಒಬ್ಬ ವ್ಯಕ್ತಿ ಗೆದ್ದ ನಂತರ ಆತ ರಾಜಕೀಯ ಜವಾಬ್ಧಾರಿಯನ್ನು ನಿಭಾಯಿಸಬೇಕಿರುತ್ತದೆಯೇ ವಿನಾಃ ನಮ್ಮ ಜೊತೆಗಿನ ವೈಯಕ್ತಿಕ ಬಾಂಧವ್ಯವನ್ನಲ್ಲ. ಆ ರಾಜಕೀಯ ಜವಾಬ್ಧಾರಿ ಆತನ ಪಕ್ಷ, ಆ ಪಕ್ಷದ ಸಿದ್ಧಾಂತ, ನೀತಿಗಳನ್ನು ಅವಲಂಭಿಸಿರುತ್ತದೆ. ಒಂದು ಪಾರ್ಟಿ ಪ್ರಸ್ತುತ ಸನ್ನಿವೇಶದಲ್ಲಿ ಅಪಾಯಕಾರಿ ನಿಲುವುಗಳನ್ನು ತಳೆದಿದ್ದರೆ ಆ ಪಕ್ಷದ ಪರವಾಗಿ ಗೆದ್ದ ಆ `ಒಳ್ಳೆ ಅಭ್ಯರ್ಥಿ’ ಸಮಾಜದ ಜೊತೆ ಅಪಾಯಕಾರಿಯಾಗಿಯೇ ವರ್ತಿಸಬೇಕಾಗುತ್ತದೆ. ಅದನ್ನಾತ ಮೀರಲು ಸಾಧ್ಯವಿರುವುದಿಲ್ಲ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಶ್ ಪ್ರಚಾರ

ಉದಾಹರಣೆಗೆ, ನಮ್ಮ ಒಳ್ಳೇ ಸ್ನೇಹಿತ ಅಥವಾ ಹತ್ತಿರದ ಸಂಬಂಧಿ ಒಬ್ಬ ಅಸಹಾಯಕ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಸ್ಥಿತಿಯಲ್ಲಿ ನಮ್ಮ ಕಣ್ಣಿಗೆ ಬಿದ್ದ ಎಂದಿಟ್ಟುಕೊಳ್ಳಿ. ಆತ ನಮ್ಮ ಒಳ್ಳೆಯ ಸ್ನೇಹಿತನೇ ಆಗಿದ್ದರೂ ನಾವು ಆತನ ಪರ ನಿಲ್ಲುವುದಿಲ್ಲ. ಅದು ನಮ್ಮ ಸಾಮಾಜಿಕ ಹೊಣೆಗಾರಿಕೆ. ಅಷ್ಟರಮಟ್ಟಿಗೆ ನಮಗೆ ಪರಿಸ್ಥಿತಿಯ ಆಗುಹೋಗಿನ ಪ್ರಜ್ಞೆ ಇರುತ್ತೆ, ಇರಬೇಕು. ಇನ್ನೂ ಸಿಂಪಲ್ಲಾಗಿ ಹೇಳಬೇಕಂದ್ರೆ, ಕೆಟ್ಟ ಸ್ಕ್ರಿಪ್ಟ್ ಹಿಡಿದು ಬರುವ ನಿರ್ಮಾಪಕ ಅದೆಷ್ಟೇ ಒಳ್ಳೇ ಸ್ನೇಹಿತನಾಗಿದ್ದರೂ ಆತನಿಗೆ ಯಾವ ಸ್ಟಾರ್ ನಟನೂ ಕಾಲ್‍ಶೀಟ್ ಕೊಡೋದಿಲ್ಲ!

ಹಾಗಂತ ಸಿನಿಮಾ ಮಂದಿ ಪ್ರಚಾರ ಮಾಡಬಾರದು ಅಂತೇನಲ್ಲ. ಆದರೆ ತಮ್ಮ ಆ ಪ್ರಚಾರವನ್ನು ರಾಜಕೀಯವಾಗಿಯೇ ಸಮರ್ಥಿಸಿಕೊಳ್ಳುವ ಪೊಲಿಟಿಕಲ್ ಬದ್ಧತೆ ಮತ್ತು ಅರಿವು ಅಂತವರಲ್ಲಿ ಇರಬೇಕು. ರಾಜಕೀಯೇತರ ನೆಪವಿಟ್ಟುಕೊಂಡು ರಾಜಕೀಯ ಪ್ರಚಾರ ಮಾಡಬಾರದು! ಅಂದಹಾಗೆ, ಯಶ್‍ಗೆ ಗಣಿಮಾಫಿಯಾದ ಶ್ರೀರಾಮುಲುನಲ್ಲಿ ಅದ್ಯಾವ `ಒಳ್ಳೆ ಅಭ್ಯರ್ಥಿ’ ಕಾಣಿಸಿದನೋ ದೇವರೇ ಬಲ್ಲ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...