Homeಕರ್ನಾಟಕಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ.

- Advertisement -
- Advertisement -

ಯಾವ ರೀತಿಯಿಂದ ನೋಡಿದರೂ ಇಂದು ರಾಜೀನಾಮೆ ಕೊಟ್ಟಿರುವ ಶಾಸಕರ ಕಾಂಬಿನೇಷನ್ ಬಹಳ ಆಶ್ಚರ್ಯಕರವಾಗಿ ಕಾಣುತ್ತದೆ.

ಅತೃಪ್ತಿಯೇ ಕಾರಣ ಎನ್ನುವುದಾದರೆ, ಬೈರತಿ ಬಸವರಾಜ್ ಎಂದೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್‍ಡಿಕೆ ಮತ್ತು ಡಿಕೆಶಿ ಇಬ್ಬರಿಗೂ ಮುನಿರತ್ನ ಆಪ್ತರು.

ಅಧಿಕಾರ ಸಿಕ್ಕಿಲ್ಲದಿರುವುದು ಎನ್ನುವುದಾದರೆ ಎಂ.ಟಿ.ಬಿ.ನಾಗರಾಜ್‍ರನ್ನು ಸಚಿವರನ್ನಾಗಿಸಲಾಗಿದೆ. ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ. ರಾಕೇಶ್ ಸಿಂಗ್ ಬಿಡಿಎ ಆಯುಕ್ತರಾಗಿ ಮುಂದುವರೆದರೆ ತನಗೆ ಅಡ್ಡಗಾಲು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರಿಂದ ಅವರನ್ನೂ ಬದಲಿಸಲಾಗಿದೆ.

ಜಾತಿಯೇ ಕಾರಣ, ಲಿಂಗಾಯಿತರು ಮತ್ತು ವಾಲ್ಮೀಕಿ ಸಮುದಾಯದ ಶಾಸಕರು ಹೆಚ್ಚಾಗಿ ಆ ಕಡೆಗೆ ಹೋಗಿದ್ದಾರೆ ಎನ್ನುವ ಹಾಗೂ ಇಲ್ಲ. ಎಂ.ಟಿ.ಬಿ ನಾಗರಾಜ್ ಮತ್ತು ಬೈರತಿ ಬಸವರಾಜ್ ಇಬ್ಬರೂ ಕುರುಬರು. ಉಳಿದ ಕಾಂಬಿನೇಷನ್ ಸಹಾ ಹಾಗಿಲ್ಲ. ಇನ್ನು ರೋಷನ್‍ಬೇಗ್ ಸ್ಪರ್ಧಿಸುತ್ತಿರುವುದು ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಿಂದ. ಸ್ವತಃ ಬೇಗ್ ವಿರೋಧಿಸಿದರೂ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‍ರಿಗೇ ಬಹುಮತ ಸಿಕ್ಕಿದೆ.

ಇನ್ನು ಗೋಪಾಲಯ್ಯನವರು ಹಿಂದಿನ ಸಾಲಿನಲ್ಲೇ ಚೆಲುವರಾಯಸ್ವಾಮಿ ಮತ್ತಿತರರ ಜೊತೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದರು. ನಂತರ ಮತ್ತೆ ಪಕ್ಷದಲ್ಲೇ ಉಳಿದು ಜೆಡಿಎಸ್‍ನಿಂದಲೇ ಟಿಕೆಟ್ ಪಡೆದು ಪುನರಾಯ್ಕೆಯಾಗಿದ್ದಾರೆ.

ಹೀಗಿರುವಾಗ ಇವರೆಲ್ಲರನ್ನೂ ಬೆಸೆದ ಕಾರಣವೇನು? ಕೆಲವರಿಗೆ ಅತೃಪ್ತಿಯು ಅವಕಾಶವಾದವಾಗಿ ಪರಿವರ್ತನೆಯಾಗಿರುವುದು ವಾಸ್ತವ. ಅವರಲ್ಲಿ ಎಚ್.ವಿಶ್ವನಾಥ್, ರಾಮಲಿಂಗಾರೆಡ್ಡಿ ಮತ್ತು ಕೆ.ಸಿ.ನಾರಾಯಣಗೌಡರಿದ್ದಾರೆ. ಕುಮಟಳ್ಳಿಯವರು ಜಾರಕಿಹೊಳಿಯವರ ಹಿಂದೆ ಹೋಗುವವರು. ಬಿ.ಸಿ.ಪಾಟೀಲ್ ನಿಜಕ್ಕೂ ಅತೃಪ್ತರೇ. ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಏಕೈಕ ಕಾಂಗ್ರೆಸ್ ಶಾಸಕನಾದ ತನಗೆ ಬಿಜೆಪಿಯಿಂದ ಬಂದ ಆಫರ್ ತಿರಸ್ಕರಿಸಿ ಇಲ್ಲಿ ಉಳಿದರೂ ಅಧಿಕಾರ ಸಿಕ್ಕಿಲ್ಲ ಎಂಬ ಕೊರಗು ಅವರದ್ದು. ಪ್ರತಾಪ್‍ಗೌಡ ಮತ್ತು ಶಿವರಾಮ ಹೆಬ್ಬಾರ್ ಅವರು ಮಾರಿಕೊಳ್ಳಲು ನಿಂತಿರುವುದು ಬಿಟ್ಟರೆ ಹೆಚ್ಚೇನೂ ಕಾಣುತ್ತಿಲ್ಲ. ಇಷ್ಟು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಅಕ್ರಮ ದಂಧೆಯ ಕಾರಣಕ್ಕೇ ಬಿಜೆಪಿಯಿಂದ ಬೆದರಿಕೆಗೆ ಒಳಗಾಗಿದ್ದಾರೆ ಎಂಬುದು ಹಲವು ರಾಜಕಾರಣಿಗಳ ಆಡಿಟಿಂಗ್ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಅನಿಸಿಕೆ.

ಇದನ್ನೂ ಓದಿ: ಮಾನಗೇಡಿ ಶಾಸಕರು, ಹೊಣೆಗೇಡಿ ನಾಯಕರು

ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಅವರ ಪ್ರಕಾರ ಎಂಟಿಬಿ ನಾಗರಾಜು, ಸೋಮಶೇಖರ್, ಭೈರತಿ ಮೂರೂ ಜನರೂ ರಿಯಲ್ ಎಸ್ಟೇಟ್ ಕುಳಗಳು. ಮುನಿರತ್ನರಿಗೆ ಸಕ್ರಮ ಮತ್ತು ಅಕ್ರಮ ದಂಧೆಗಳೆರಡೂ ಇವೆ. ರಮೇಶ್ ಜಾರಕಿಹೊಳಿ ಹಲವು ವ್ಯವಹಾರಗಳನ್ನು ನಡೆಸುತ್ತಾ, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿರುವ ‘ಸಾಹುಕಾರ’. ಆನಂದ್‍ಸಿಂಗ್ ಈಗಾಗಲೇ ಒಮ್ಮೆ ಜೈಲಿಗೆ ಹೋಗಿ ಬಂದಿರುವ ಉದ್ಯಮಿ. ಇನ್ನು ಸುಧಾಕರ್ ಅವರ ದಿಢೀರ್ ಶ್ರೀಮಂತಿಕೆಯ ಹಿನ್ನೆಲೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ರೋಷನ್‍ಬೇಗ್ ಐಎಂಎ ಕೇಸಿನಲ್ಲಿ ಯಾವಾಗ ಜೈಲಿಗೆ ಹೋಗಬೇಕಾಗಿ ಬರುತ್ತದೋ ಹೇಳಲಾಗದು.

ಹೀಗಾಗಿ ಮೂರ್ನಾಲ್ಕು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಕನಿಷ್ಠ ನೂರು ಕೋಟಿ ಕುಳಗಳು. ಒಂದಲ್ಲಾ ಒಂದು ಬಗೆಯ ಅಕ್ರಮ ದಂಧೆಗಳು ಇವರ ಹಿಂದೆ ಇದೆ ಎಂಬುದು ಆಡಿಟರ್‍ಅವರ ಅನಿಸಿಕೆ. ಹಾಗಾಗಿಯೇ ಉತ್ತರ ಕರ್ನಾಟಕದ ಅಥವಾ ಬಳ್ಳಾರಿಯ ಶಾಸಕರು ಪಕ್ಷ ಬದಲಿಸುತ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು, ಅದರಲ್ಲೂ ಲಿಂಗಾಯಿತ ಶಾಸಕರ ದಂಡೇ ಹೊರಹೋಗುತ್ತದೆ ಎಂಬ ನಿರೀಕ್ಷೆಗೆ ವಿರುದ್ಧವಾಗಿ ದಕ್ಷಿಣ ಕರ್ನಾಟಕದ ಶಾಸಕರು ರಾಜೀನಾಮೆ ನೀಡಿದರು. ಅದರಲ್ಲೂ ಬೆಂಗಳೂರಿನ ನಾಲ್ವರು! ಇದನ್ನು ಯಾರೂ ಊಹಿಸಿರಲಿಲ್ಲ. ಇದು ರಾಜೀನಾಮೆಯ ಅಸಲೀ ಕಾರಣ ಅತೃಪ್ತಿಯಲ್ಲ, ಅಕ್ರಮ ದಂಧೆ ಎಂಬ ಆಡಿಟರ್‍ರ ಅಭಿಪ್ರಾಯಕ್ಕೆ ಪುಷ್ಟಿ ಕೊಡುತ್ತದೆ.

ಇದನ್ನೂ ಓದಿ: ಆನಂದ್ ಸಿಂಗ್ ರಾಜೀನಾಮೆ

‘ಆಂಧ್ರದ ಮಲ್ಯರು’ ಎಂದು ಬಿಜೆಪಿಯೇ ಮೂದಲಿಸುತ್ತಿದ್ದ ಟಿಡಿಪಿಯ ರಾಜ್ಯಸಭಾ ಸದಸ್ಯರನ್ನು ಬಿಜೆಪಿಯು ಸೆಳೆದದ್ದು ಅವರ ಅಕ್ರಮ ದಂಧೆಗಳನ್ನು ಮುಂದಿಟ್ಟು ಹೆದರಿಸಿದ್ದರಿಂದ ಎಂಬುದು ದೇಶಕ್ಕೇ ಗೊತ್ತಿದೆ. 2008ರಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿದ್ದೂ ಅಕ್ರಮ ಹಣದ ಮೂಲಕವೇ ಆಗಿತ್ತು. ಅಂದರೆ ತಮ್ಮ ಜೊತೆ ಇದ್ದರೆ ಎಲ್ಲಾ ಅಕ್ರಮಗಳೂ ಮಾಫ್ ಎಂಬುದು ಬಿಜೆಪಿ ಪಕ್ಷದ ನೀತಿಯಾಗಿದೆ.

ಹೀಗಾಗಿ ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಶಾಸಕರು ಯಾವ ಪಕ್ಷದಲ್ಲೇ ಇದ್ದರೂ, ಇವರ ಆಸ್ತಿಪಾಸ್ತಿಗಳ ತನಿಖೆಯು ನಡೆದಾಗ ಮಾತ್ರ ಅಸಲೀ ಕಾರಣ ಬಹಿರಂಗಕ್ಕೆ ಬರುತ್ತದೆ. ಅಲ್ಲಿಯವರೆಗೆ ಇಂತಹ ಕಣ್ಣಾಮುಚ್ಚಾಲೆ ನಡೆಯುತ್ತಲೇ ಇರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....