Homeಮುಖಪುಟಅತ್ತ ಸಿನಿಮಾನೂ ಇಲ್ಲ, ಇತ್ತ ರಾಜಕೀಯದಲ್ಲೂ ಸ್ಪಷ್ಟತೆ ಇಲ್ಲ; ಎಡಬಿಡಂಗಿ ಪವನ್ ಕಲ್ಯಾಣ್ ಏನು ನಿಮ್ಮ...

ಅತ್ತ ಸಿನಿಮಾನೂ ಇಲ್ಲ, ಇತ್ತ ರಾಜಕೀಯದಲ್ಲೂ ಸ್ಪಷ್ಟತೆ ಇಲ್ಲ; ಎಡಬಿಡಂಗಿ ಪವನ್ ಕಲ್ಯಾಣ್ ಏನು ನಿಮ್ಮ ಲೀಲೆ?

ಕಳೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಾರ್ಟಿ ಚುನಾವಣೆಗೆ ಸ್ಪರ್ಧಿಸಿತಾದರೂ ಗಳಿಸಿದ್ದು ಮಾತ್ರ ಕೇವಲ 1 ಸ್ಥಾನ. ಆದರೆ, ತನ್ನ ರಾಜಕೀಯ ಹೋರಾಟವನ್ನು ಪವನ್ ಕಲ್ಯಾಣ್ ಹೀಗೆ ನಡೆಸಿದ್ದರೂ ಸಹ ಜನರ ಪ್ರಶಂಸೆಗೆ ಪಾತ್ರರಾಗುತ್ತಿದ್ದರೇನೋ?

- Advertisement -
- Advertisement -

ಪವನ್ ಕಲ್ಯಾಣ್.. ಈತ ತೆಲುಗು ಸಿನಿಮಾ ರಂಗದ ಪವರ್ ಸ್ಟಾರ್. ಅದಕ್ಕೂ ಮೇಲಾಗಿ ಮೆಗಾ ಸ್ಟಾರ್ ಹಾಗೂ ಮಾಜಿ ಕೇಂದ್ರ ಸಚಿವ ಚಿರಂಜೀವಿ ಅವರ ಖಾಸಾ ತಮ್ಮ. ಮಾಡಿದ್ದು ಕೇವಲ 25 ಚಿತ್ರಗಳು. ಈ ಪೈಕಿ ಹಿಟ್ ಸಾಲಿಗೆ ಸೇರುವ ಚಿತ್ರಗಳ ಸಂಖ್ಯೆ ಮೂರು ಮತ್ತೊಂದು ಮಾತ್ರ. ಹೀಗಿದ್ದೂ ಈತ ಪವರ್ ಸ್ಟಾರ್ ಪಟ್ಟಕ್ಕೆ ಏರಿದ್ದು ಹೇಗೆ? ಎಂಬುದು ಈಗಲೂ ಉತ್ತರವಿಲ್ಲದ ಪ್ರಶ್ನೆಯೇ ಸರಿ.

ಆದರೆ, ಈತ ಕೇವಲ ಸಿನಿ ರಂಗದಲ್ಲೇ ಮುಂದುವರೆದಿದ್ದರೆ ಸಮಸ್ಯೆ ಇರುತ್ತಿರಲಿಲ್ಲವೇನೋ? ಆದರೆ, ರಾಜಕೀಯಕ್ಕೂ ಧುಮುಕಿರುವ ಈತನ ಕೆಲವು ಎಡಬಿಡಂಗಿ ನಿಲುವುಗಳು ಇದೀಗ ಪೇಚಿಗೆ ಸಿಲುಕುವಂತಾಗಿದೆ. ಸ್ವತಃ ಈತನ ಅಭಿಮಾನಿಗಳೇ ಗೊಂದಲದಲ್ಲಿದ್ದಾರೆ.

ಅಸಲಿಗೆ ಆಂಧ್ರಪ್ರದೇಶದಲ್ಲಿ ಪರ್ಯಾಯ ರಾಜಕೀಯ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆಯ ಉದ್ದೇಶದಿಂದ ನಟ ಚಿರಂಜೀವಿ 2008ರಲ್ಲಿ ತಿರುಪತಿಯಲ್ಲಿ ಮದರ್ ತೆರೆಸಾ ಅವರ ಹುಟ್ಟುಹಬ್ಬದ ದಿನವಾದ ಆಗಸ್ಟ್ 2 ರಂದು ಅದ್ದೂರಿಯಾಗಿ “ಪ್ರಜಾರಾಜ್ಯಂ” ಎಂಬ ಪಕ್ಷವನ್ನು ಸ್ಥಾಪಿಸಿ ಚುನಾವಣೆ ಎದುರಿಸಿದ್ದರು. ಈ ಸಂದರ್ಭದಲ್ಲಿ ಪವನ್ ಕಲ್ಯಾಣ್ ತನ್ನ ಅಣ್ಣನ ಬೆನ್ನಿಗೆ ನಿಂತಿದ್ದರು. ಆದರೆ, ಪ್ರಜಾರಾಜ್ಯಂ ನಿರೀಕ್ಷಿತ ಸ್ಥಾನ ಗಳಿಸುವಲ್ಲಿ ವಿಫಲವಾಗಿತ್ತು. ಪರಿಣಾಮ ಕಾಂಗ್ರೆಸ್ ಪಕ್ಷದ ಜೊತೆಗೆ ತನ್ನ ಪ್ರಜಾರಾಜ್ಯಂ ಪಕ್ಷವನ್ನು ವಿಲೀನ ಮಾಡಿದ್ದ ಜಿರಂಜೀವಿ, ಸೋನಿಯಾ ಗಾಂಧಿ ಅವರ ಕೃಪಕಟಾಕ್ಷದಿಂದ ಕೇಂದ್ರ ಸಚಿವ ಹುದ್ದೆಗೆ ಏರುವ ಮೂಲಕ ರಾಜಕೀಯವಾಗಿ ತಣ್ಣಗಾಗಿದ್ದರು.

ಆದರೆ, ಪವನ್ ಕಲ್ಯಾಣ್ ತನ್ನ ಅಣ್ಣನ ಈ ನಡೆಯನ್ನು ತೀವ್ರವಾಗಿ ವಿರೋಧಿಸಿದ್ದರು. ಅಲ್ಲದೆ, ತನ್ನ ಅಣ್ಣನಿಂದ ದೂರವಾಗಿ 2014 ಮಾರ್ಚ್ 14 ರಂದು “ಜನಸೇನಾ ಪಾರ್ಟಿ” ಎಂಬ ಮತ್ತೊಂದು ಹೊಸ ಪಕ್ಷವನ್ನು ಸ್ಥಾಪಿಸಿದರು. ರಾಜ್ಯವ್ಯಾಪಿ ಮಿಂಚಿನ ಸಂಚಾರ ನಡೆಸಿ ಪ್ರಚಾರ ನಡೆಸಿದ್ದರು. ಅಸಲಿಗೆ ಈ ಪ್ರಚಾರ ಜನಸೇನಾ ಪಕ್ಷದ ಚುನಾವಣೆಗೆ ಮಾತ್ರ ಸೀಮಿತವಾಗಿದ್ದರೆ ಸಮಸ್ಯೆ ಇರಲಿಲ್ಲ. ಆದರೆ, ಈ ಪ್ರಚಾರ ಪವನ್ ಕಲ್ಯಾಣ್ ಅವರ ರಾಜಕೀಯ ಅಪಕ್ವತೆ ಹಾಗೂ ಎಡಬಿಡಂಗಿ ತನವನ್ನು ಎದ್ದು ಕಾಣುವಂತೆ ಮಾಡಿತ್ತು.

ಪವನ್ ಕಲ್ಯಾಣ್.

ಪವನ್ ರಾಜಕೀಯ ಎಡಬಿಡಂಗಿ ತನಕ್ಕೆ ಕೊನೆ ಎಂದು?;

2014ರಲ್ಲಿ ಪವನ್ ಕಲ್ಯಾಣ್ ರಾಜಕೀಯ ಪ್ರವೇಶಿಸಿದಾಗ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲದೆ ಸ್ವತಂತ್ರ್ಯವಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದೇ ಊಹಿಸಲಾಗಿತ್ತು.

ಆದರೆ, ಈ ಸಂದರ್ಭದಲ್ಲಿ ತಮ್ಮ ದ್ವನಿ ಬದಲಿಸಿದ್ದ ಪವನ್, ನೇರಾನೇರ ಪ್ರಧಾನಿ ನರೇಂದ್ರ ಮೋದಿಯ ಪರ ಬ್ಯಾಟಿಂಗ್ ನಡೆಸಿದ್ದರು. ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಅನಿವಾರ್ಯ ಎಂದು ಹೋದಲ್ಲಿ ಬಂದಲ್ಲೆಲ್ಲಾ ಬೊಬ್ಬೆ ಹೊಡೆದಿದ್ದರು. ಹೀಗಾಗಿ ಚಿರಂಜೀವಿಯಂತೆ ಪವನ್ ಕಲ್ಯಾಣ್ ಸಹ ತಮ್ಮ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸುವುದು ಖಚಿತ ಎನ್ನುವ ಮಾತು ಚಾಲ್ತಿಗೆ ಬರಲಾರಂಭಿಸಿತು.

2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಜನಸೇನಾ ಪಕ್ಷ ಚುನಾವಣೆಗೆ ಸ್ಪರ್ಧಿಸಲಿದೆ ಎಂದೇ ಬಿಂಬಿಸಲಾಗಿತ್ತು. ಆದರೆ, ಈ ವೇಳೆ ಉಲ್ಟಾ ಹೊಡೆದಿದ್ದ ಪವನ್ ಕಲ್ಯಾಣ್, “ಬಿಜೆಪಿ ದೇಶಕ್ಕೆ ಮಾರಕ. ಇವರಿಗೆ ಮತ ಹಾಕಬೇಡಿ. ಕೆಲವು ಬಿಜೆಪಿ ನಾಯಕರು ಚುನಾವಣೆ ಸಂದರ್ಭದಲ್ಲಿ ಯುದ್ಧ ಘೋಷಣೆ ಮಾಡುವ ಮೂಲಕ ಮತಗಳನ್ನು ಸೆಳೆಯುತ್ತೇವೆ ಎಂದು ಸ್ವತಃ ನನ್ನ ಬಳಿಯೇ ಹೇಳಿದ್ದಾರೆ. ಇವರು ಗೆಲ್ಲುವುದಕ್ಕಾಗಿ ಏನುಬೇಕಾದರೂ ಮಾಡಿಯಾರು. ಹೀಗಾಗಿ ಎರಡನೇ ಅವಧಿಗೂ ಬಿಜೆಪಿ ಗೆಲುವು ಸಾಧಿಸಿದರೆ ಭಾರತವನ್ನು ಯಾರಿಂದಲೂ ಕಾಪಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಇಡೀ ದೇಶವನ್ನೇ ಅಚ್ಚರಿಗೆ ದೂಡಿದ್ದರು.

ಅಲ್ಲದೆ, ನಮ್ಮ ಪಕ್ಷ ನೇರವಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬದಲಾಗಿ ಯಾರೂ ಬಿಜೆಪಿ ಮತಹಾಕಬೇಡಿ ಎಂದು ಪ್ರಚಾರ ನಡೆಸುತ್ತೇವೆ ಎಂದು ಹೇಳುವ ಮೂಲಕ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗುರಿಯಾಗಿದ್ದರು.

ನಂತರ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಾರ್ಟಿ ಚುನಾವಣೆಗೆ ಸ್ಪರ್ಧಿಸಿತಾದರೂ ಗಳಿಸಿದ್ದು ಮಾತ್ರ ಕೇವಲ 1 ಸ್ಥಾನ. ಆದರೆ, ತನ್ನ ರಾಜಕೀಯ ಹೋರಾಟವನ್ನು ಪವನ್ ಕಲ್ಯಾಣ್ ಹೀಗೆ ನಡೆಸಿದ್ದರೂ ಸಹ ಜನರ ಪ್ರಶಂಸೆಗೆ ಪಾತ್ರರಾಗುತ್ತಿದ್ದರೇನೋ?

ಪವನ್ ಕಲ್ಯಾಣ್.

ಆದರೆ, ಕಳೆದ ಎರಡು ವರ್ಷದಿಂದ ಪವನ್ ಕಲ್ಯಾಣ್ ಯಾವ ಪಕ್ಷದ ನಾಯಕರ ವಿರುದ್ಧ ಹೋರಾಟ ನಡೆಸಿದ್ದರೋ ಇದೀಗ ಮತ್ತೆ ಅದೇ ಬಿಜೆಪಿ ನಾಯಕರ ಜೊತೆಗೆ ಕೈಜೋಡಿಸಿದ್ದಾರೆ. ಬಿಜೆಪಿ ಪರ ಬ್ಯಾಟ್ ಬೀಸುವ ಕೆಲಸವನ್ನು ಶಿರಸಾವಹಿಸಿ ಪಾಲಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ ಪಕ್ಷದ ನೂತನ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿರುವ ಜೆ.ಪಿ. ನಡ್ಡಾ ಅವರನ್ನು ಇಂದು ಖುದ್ದು ಭೇಟಿ ಮಾಡಿ ಅಭಿನಂದನೆಗಳನ್ನೂ ಸಲ್ಲಿಸಿದ್ದಾರೆ.

ಅತ್ತ ಒಳ್ಳೆಯ ಚಿತ್ರಗಳನ್ನೂ ನೀಡದ ಪವನ್ ಕಲ್ಯಾಣ್, ಇತ್ತ ರಾಜಕೀಯವಾಗಿಯೂ ಸರಿಯಾದ ಗುರಿ ಹಾಗೂ ನಿಲುವುಗಳಿಲ್ಲದ ಇಲ್ಲದ ರಾಜಕೀಯ ಎಡಬಿಡಂಗಿ ತನವನ್ನು ಕಂಡು ಸ್ವತಃ ಆಂಧ್ರಪ್ರದೇಶದ ಅವರ ಅಭಿಮಾನಿ ಬಳಗವೇ ಪವನ್ ಕಲ್ಯಾಣ್ ಏನಪ್ಪಾ ನಿನ್ನ ಲೀಲೆ? ಎಂದು ಪ್ರಶ್ನಿಸುವಂತಾಗಿರುವುದು ಮಾತ್ರ ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...