Homeಮುಖಪುಟಅತ್ತ ಸಿನಿಮಾನೂ ಇಲ್ಲ, ಇತ್ತ ರಾಜಕೀಯದಲ್ಲೂ ಸ್ಪಷ್ಟತೆ ಇಲ್ಲ; ಎಡಬಿಡಂಗಿ ಪವನ್ ಕಲ್ಯಾಣ್ ಏನು ನಿಮ್ಮ...

ಅತ್ತ ಸಿನಿಮಾನೂ ಇಲ್ಲ, ಇತ್ತ ರಾಜಕೀಯದಲ್ಲೂ ಸ್ಪಷ್ಟತೆ ಇಲ್ಲ; ಎಡಬಿಡಂಗಿ ಪವನ್ ಕಲ್ಯಾಣ್ ಏನು ನಿಮ್ಮ ಲೀಲೆ?

ಕಳೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಾರ್ಟಿ ಚುನಾವಣೆಗೆ ಸ್ಪರ್ಧಿಸಿತಾದರೂ ಗಳಿಸಿದ್ದು ಮಾತ್ರ ಕೇವಲ 1 ಸ್ಥಾನ. ಆದರೆ, ತನ್ನ ರಾಜಕೀಯ ಹೋರಾಟವನ್ನು ಪವನ್ ಕಲ್ಯಾಣ್ ಹೀಗೆ ನಡೆಸಿದ್ದರೂ ಸಹ ಜನರ ಪ್ರಶಂಸೆಗೆ ಪಾತ್ರರಾಗುತ್ತಿದ್ದರೇನೋ?

- Advertisement -
- Advertisement -

ಪವನ್ ಕಲ್ಯಾಣ್.. ಈತ ತೆಲುಗು ಸಿನಿಮಾ ರಂಗದ ಪವರ್ ಸ್ಟಾರ್. ಅದಕ್ಕೂ ಮೇಲಾಗಿ ಮೆಗಾ ಸ್ಟಾರ್ ಹಾಗೂ ಮಾಜಿ ಕೇಂದ್ರ ಸಚಿವ ಚಿರಂಜೀವಿ ಅವರ ಖಾಸಾ ತಮ್ಮ. ಮಾಡಿದ್ದು ಕೇವಲ 25 ಚಿತ್ರಗಳು. ಈ ಪೈಕಿ ಹಿಟ್ ಸಾಲಿಗೆ ಸೇರುವ ಚಿತ್ರಗಳ ಸಂಖ್ಯೆ ಮೂರು ಮತ್ತೊಂದು ಮಾತ್ರ. ಹೀಗಿದ್ದೂ ಈತ ಪವರ್ ಸ್ಟಾರ್ ಪಟ್ಟಕ್ಕೆ ಏರಿದ್ದು ಹೇಗೆ? ಎಂಬುದು ಈಗಲೂ ಉತ್ತರವಿಲ್ಲದ ಪ್ರಶ್ನೆಯೇ ಸರಿ.

ಆದರೆ, ಈತ ಕೇವಲ ಸಿನಿ ರಂಗದಲ್ಲೇ ಮುಂದುವರೆದಿದ್ದರೆ ಸಮಸ್ಯೆ ಇರುತ್ತಿರಲಿಲ್ಲವೇನೋ? ಆದರೆ, ರಾಜಕೀಯಕ್ಕೂ ಧುಮುಕಿರುವ ಈತನ ಕೆಲವು ಎಡಬಿಡಂಗಿ ನಿಲುವುಗಳು ಇದೀಗ ಪೇಚಿಗೆ ಸಿಲುಕುವಂತಾಗಿದೆ. ಸ್ವತಃ ಈತನ ಅಭಿಮಾನಿಗಳೇ ಗೊಂದಲದಲ್ಲಿದ್ದಾರೆ.

ಅಸಲಿಗೆ ಆಂಧ್ರಪ್ರದೇಶದಲ್ಲಿ ಪರ್ಯಾಯ ರಾಜಕೀಯ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆಯ ಉದ್ದೇಶದಿಂದ ನಟ ಚಿರಂಜೀವಿ 2008ರಲ್ಲಿ ತಿರುಪತಿಯಲ್ಲಿ ಮದರ್ ತೆರೆಸಾ ಅವರ ಹುಟ್ಟುಹಬ್ಬದ ದಿನವಾದ ಆಗಸ್ಟ್ 2 ರಂದು ಅದ್ದೂರಿಯಾಗಿ “ಪ್ರಜಾರಾಜ್ಯಂ” ಎಂಬ ಪಕ್ಷವನ್ನು ಸ್ಥಾಪಿಸಿ ಚುನಾವಣೆ ಎದುರಿಸಿದ್ದರು. ಈ ಸಂದರ್ಭದಲ್ಲಿ ಪವನ್ ಕಲ್ಯಾಣ್ ತನ್ನ ಅಣ್ಣನ ಬೆನ್ನಿಗೆ ನಿಂತಿದ್ದರು. ಆದರೆ, ಪ್ರಜಾರಾಜ್ಯಂ ನಿರೀಕ್ಷಿತ ಸ್ಥಾನ ಗಳಿಸುವಲ್ಲಿ ವಿಫಲವಾಗಿತ್ತು. ಪರಿಣಾಮ ಕಾಂಗ್ರೆಸ್ ಪಕ್ಷದ ಜೊತೆಗೆ ತನ್ನ ಪ್ರಜಾರಾಜ್ಯಂ ಪಕ್ಷವನ್ನು ವಿಲೀನ ಮಾಡಿದ್ದ ಜಿರಂಜೀವಿ, ಸೋನಿಯಾ ಗಾಂಧಿ ಅವರ ಕೃಪಕಟಾಕ್ಷದಿಂದ ಕೇಂದ್ರ ಸಚಿವ ಹುದ್ದೆಗೆ ಏರುವ ಮೂಲಕ ರಾಜಕೀಯವಾಗಿ ತಣ್ಣಗಾಗಿದ್ದರು.

ಆದರೆ, ಪವನ್ ಕಲ್ಯಾಣ್ ತನ್ನ ಅಣ್ಣನ ಈ ನಡೆಯನ್ನು ತೀವ್ರವಾಗಿ ವಿರೋಧಿಸಿದ್ದರು. ಅಲ್ಲದೆ, ತನ್ನ ಅಣ್ಣನಿಂದ ದೂರವಾಗಿ 2014 ಮಾರ್ಚ್ 14 ರಂದು “ಜನಸೇನಾ ಪಾರ್ಟಿ” ಎಂಬ ಮತ್ತೊಂದು ಹೊಸ ಪಕ್ಷವನ್ನು ಸ್ಥಾಪಿಸಿದರು. ರಾಜ್ಯವ್ಯಾಪಿ ಮಿಂಚಿನ ಸಂಚಾರ ನಡೆಸಿ ಪ್ರಚಾರ ನಡೆಸಿದ್ದರು. ಅಸಲಿಗೆ ಈ ಪ್ರಚಾರ ಜನಸೇನಾ ಪಕ್ಷದ ಚುನಾವಣೆಗೆ ಮಾತ್ರ ಸೀಮಿತವಾಗಿದ್ದರೆ ಸಮಸ್ಯೆ ಇರಲಿಲ್ಲ. ಆದರೆ, ಈ ಪ್ರಚಾರ ಪವನ್ ಕಲ್ಯಾಣ್ ಅವರ ರಾಜಕೀಯ ಅಪಕ್ವತೆ ಹಾಗೂ ಎಡಬಿಡಂಗಿ ತನವನ್ನು ಎದ್ದು ಕಾಣುವಂತೆ ಮಾಡಿತ್ತು.

ಪವನ್ ಕಲ್ಯಾಣ್.

ಪವನ್ ರಾಜಕೀಯ ಎಡಬಿಡಂಗಿ ತನಕ್ಕೆ ಕೊನೆ ಎಂದು?;

2014ರಲ್ಲಿ ಪವನ್ ಕಲ್ಯಾಣ್ ರಾಜಕೀಯ ಪ್ರವೇಶಿಸಿದಾಗ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲದೆ ಸ್ವತಂತ್ರ್ಯವಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದೇ ಊಹಿಸಲಾಗಿತ್ತು.

ಆದರೆ, ಈ ಸಂದರ್ಭದಲ್ಲಿ ತಮ್ಮ ದ್ವನಿ ಬದಲಿಸಿದ್ದ ಪವನ್, ನೇರಾನೇರ ಪ್ರಧಾನಿ ನರೇಂದ್ರ ಮೋದಿಯ ಪರ ಬ್ಯಾಟಿಂಗ್ ನಡೆಸಿದ್ದರು. ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಅನಿವಾರ್ಯ ಎಂದು ಹೋದಲ್ಲಿ ಬಂದಲ್ಲೆಲ್ಲಾ ಬೊಬ್ಬೆ ಹೊಡೆದಿದ್ದರು. ಹೀಗಾಗಿ ಚಿರಂಜೀವಿಯಂತೆ ಪವನ್ ಕಲ್ಯಾಣ್ ಸಹ ತಮ್ಮ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸುವುದು ಖಚಿತ ಎನ್ನುವ ಮಾತು ಚಾಲ್ತಿಗೆ ಬರಲಾರಂಭಿಸಿತು.

2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಜನಸೇನಾ ಪಕ್ಷ ಚುನಾವಣೆಗೆ ಸ್ಪರ್ಧಿಸಲಿದೆ ಎಂದೇ ಬಿಂಬಿಸಲಾಗಿತ್ತು. ಆದರೆ, ಈ ವೇಳೆ ಉಲ್ಟಾ ಹೊಡೆದಿದ್ದ ಪವನ್ ಕಲ್ಯಾಣ್, “ಬಿಜೆಪಿ ದೇಶಕ್ಕೆ ಮಾರಕ. ಇವರಿಗೆ ಮತ ಹಾಕಬೇಡಿ. ಕೆಲವು ಬಿಜೆಪಿ ನಾಯಕರು ಚುನಾವಣೆ ಸಂದರ್ಭದಲ್ಲಿ ಯುದ್ಧ ಘೋಷಣೆ ಮಾಡುವ ಮೂಲಕ ಮತಗಳನ್ನು ಸೆಳೆಯುತ್ತೇವೆ ಎಂದು ಸ್ವತಃ ನನ್ನ ಬಳಿಯೇ ಹೇಳಿದ್ದಾರೆ. ಇವರು ಗೆಲ್ಲುವುದಕ್ಕಾಗಿ ಏನುಬೇಕಾದರೂ ಮಾಡಿಯಾರು. ಹೀಗಾಗಿ ಎರಡನೇ ಅವಧಿಗೂ ಬಿಜೆಪಿ ಗೆಲುವು ಸಾಧಿಸಿದರೆ ಭಾರತವನ್ನು ಯಾರಿಂದಲೂ ಕಾಪಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಇಡೀ ದೇಶವನ್ನೇ ಅಚ್ಚರಿಗೆ ದೂಡಿದ್ದರು.

ಅಲ್ಲದೆ, ನಮ್ಮ ಪಕ್ಷ ನೇರವಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬದಲಾಗಿ ಯಾರೂ ಬಿಜೆಪಿ ಮತಹಾಕಬೇಡಿ ಎಂದು ಪ್ರಚಾರ ನಡೆಸುತ್ತೇವೆ ಎಂದು ಹೇಳುವ ಮೂಲಕ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗುರಿಯಾಗಿದ್ದರು.

ನಂತರ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಾರ್ಟಿ ಚುನಾವಣೆಗೆ ಸ್ಪರ್ಧಿಸಿತಾದರೂ ಗಳಿಸಿದ್ದು ಮಾತ್ರ ಕೇವಲ 1 ಸ್ಥಾನ. ಆದರೆ, ತನ್ನ ರಾಜಕೀಯ ಹೋರಾಟವನ್ನು ಪವನ್ ಕಲ್ಯಾಣ್ ಹೀಗೆ ನಡೆಸಿದ್ದರೂ ಸಹ ಜನರ ಪ್ರಶಂಸೆಗೆ ಪಾತ್ರರಾಗುತ್ತಿದ್ದರೇನೋ?

ಪವನ್ ಕಲ್ಯಾಣ್.

ಆದರೆ, ಕಳೆದ ಎರಡು ವರ್ಷದಿಂದ ಪವನ್ ಕಲ್ಯಾಣ್ ಯಾವ ಪಕ್ಷದ ನಾಯಕರ ವಿರುದ್ಧ ಹೋರಾಟ ನಡೆಸಿದ್ದರೋ ಇದೀಗ ಮತ್ತೆ ಅದೇ ಬಿಜೆಪಿ ನಾಯಕರ ಜೊತೆಗೆ ಕೈಜೋಡಿಸಿದ್ದಾರೆ. ಬಿಜೆಪಿ ಪರ ಬ್ಯಾಟ್ ಬೀಸುವ ಕೆಲಸವನ್ನು ಶಿರಸಾವಹಿಸಿ ಪಾಲಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ ಪಕ್ಷದ ನೂತನ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿರುವ ಜೆ.ಪಿ. ನಡ್ಡಾ ಅವರನ್ನು ಇಂದು ಖುದ್ದು ಭೇಟಿ ಮಾಡಿ ಅಭಿನಂದನೆಗಳನ್ನೂ ಸಲ್ಲಿಸಿದ್ದಾರೆ.

ಅತ್ತ ಒಳ್ಳೆಯ ಚಿತ್ರಗಳನ್ನೂ ನೀಡದ ಪವನ್ ಕಲ್ಯಾಣ್, ಇತ್ತ ರಾಜಕೀಯವಾಗಿಯೂ ಸರಿಯಾದ ಗುರಿ ಹಾಗೂ ನಿಲುವುಗಳಿಲ್ಲದ ಇಲ್ಲದ ರಾಜಕೀಯ ಎಡಬಿಡಂಗಿ ತನವನ್ನು ಕಂಡು ಸ್ವತಃ ಆಂಧ್ರಪ್ರದೇಶದ ಅವರ ಅಭಿಮಾನಿ ಬಳಗವೇ ಪವನ್ ಕಲ್ಯಾಣ್ ಏನಪ್ಪಾ ನಿನ್ನ ಲೀಲೆ? ಎಂದು ಪ್ರಶ್ನಿಸುವಂತಾಗಿರುವುದು ಮಾತ್ರ ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುರುತು ಬಹಿರಂಗ ಆರೋಪ; ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರಿಂದ ಗೂಗಲ್‌ ವಿರುದ್ಧ ಮೊಕದ್ದಮೆ

ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರು ಗೂಗಲ್ ವಿರುದ್ಧ ಯುಎಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಅದರ ಸರ್ಚ್ ಇಂಜಿನ್ ಮತ್ತು ಎಐ ಪರಿಕರಗಳಲ್ಲಿ ತಮ್ಮ ಹೆಸರುಗಳು, ಇಮೇಲ್‌ಗಳು ಮತ್ತು ಫೋನ್ ಸಂಖ್ಯೆಗಳನ್ನು ಪ್ರಸಾರ ಮಾಡುತ್ತಿವೆ...

ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!

ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು 'ಟೆರರಿಸ್ಟ್' ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ...

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ...

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...