Homeಮುಖಪುಟಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಮರಣದಂಡನೆ ಘೋಷಣೆಯಾಗಿದ್ದ ವ್ಯಕ್ತಿಯೊಬ್ಬರನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ. ‘ಪ್ರಕರಣದ ವಿಚಾರಣೆ ಸರಿಯಾದ ರೀತಿಯಲ್ಲಿ ನಡೆದಿಲ್ಲ’ ಎಂದು ತೀರ್ಪು ಪ್ರಕಟಿಸುವ ವೇಳೆ ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ವಿಚಾರಣಾ ನ್ಯಾಯಾಧೀಶರು ತನಿಖಾಧಿಕಾರಿಗೆ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಮುಖ್ಯ ವಿಚಾರಣೆಯ ಸಮಯದಲ್ಲಿ ಹೇಳಲು ನಿಯಮ ಮೀರಿ ಅವಕಾಶ ಕೊಟ್ಟಿದ್ದಾರೆ ಮತ್ತು ಆ ಹೇಳಿಕೆಗಳನ್ನು ಸಾಕ್ಷಿಯಾಗಿ ಒಪ್ಪಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ವ್ಯಕ್ತಿಗೆ ಐಪಿಸಿ ಸೆಕ್ಷನ್ 376ಎ (ಅತ್ಯಾಚಾರ ಸಾವಿಗೆ ಕಾರಣವಾಗುವುದು), 302 (ಕೊಲೆ), 366 (ಅಪಹರಣ), 363 (ಅಪ್ರಾಪ್ತ ವಯಸ್ಕರನ್ನು ಅಪಹರಿಸುವುದು), 201 (ಸಾಕ್ಷ್ಯ ನಾಶ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 5/6 ರ ಅಡಿಯಲ್ಲಿ ಮರಣದಂಡನೆ ವಿಧಿಸಲಾಗಿತ್ತು.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಕೆಳ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದು, ತನಿಖಾಧಿಕಾರಿಯಿಂದ ನಿರೂಪಿಸಲ್ಪಟ್ಟ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಸಾಕ್ಷ್ಯವಾಗಿ ಸ್ವೀಕರಿಸಿದ ವಿಚಾರಣಾ ನ್ಯಾಯಾಧೀಶರ ನಿರ್ಧಾರವು ಸಾಕ್ಷ್ಯ ಕಾನೂನಿನ ಉಲ್ಲಂಘನೆಯಾಗಿದೆ. ಏಕೆಂದರೆ ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ, ಪೊಲೀಸರ ಸಮ್ಮುಖದಲ್ಲಿಯೂ ಕೂಡ ಮ್ಯಾಜಿಸ್ಟ್ರೇಟ್ ದಾಖಲಿಸಿದ ತಪ್ಪೊಪ್ಪಿಗೆ ಹೇಳಿಕೆಗಳು ಮಾತ್ರ ಕಾನೂನುಬದ್ಧವಾಗಿ ಸ್ವೀಕಾರಾರ್ಹವಾಗಿವೆ ಎಂದು ಹೇಳಿದೆ.

ಡಿಎನ್‌ಎ ಪರೀಕ್ಷೆ ನಡೆಸಿದ ವೈಜ್ಞಾನಿಕ ತಜ್ಞರ ಬಗ್ಗೆ ಮಾಹಿತಿ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯವು ಎತ್ತಿ ತೋರಿಸಿದೆ. ತಜ್ಞರು ಡಿಎನ್‌ಎ ಪರೀಕ್ಷೆ ವೇಳೆ ಅನುಸರಿಸಿದ ವಿಧಾನದ ಬಗ್ಗೆ ಪರೀಶಿಲನೆ ನಡೆಸದ ಕಾರಣ ಡಿಎನ್‌ಎ ವರದಿ ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. ಇದು ಸಾಕ್ಷ್ಯ ಕಾಯ್ದೆಯ ಸೆಕ್ಷನ್ 45 ಮತ್ತು ರಾಹುಲ್ vs ದೆಹಲಿ ಸರ್ಕಾರ ಪ್ರಕರಣದಲ್ಲಿ ನೀಡಿದ ತೀರ್ಪಿನ ಉಲ್ಲಂಘನೆ ಎಂದಿದೆ.

ರಾಹುಲ್ vs ದೆಹಲಿ ಸರ್ಕಾರ ಪ್ರಕರಣದಲ್ಲಿ, ಡಿಎನ್‌ಎ ಪರೀಕ್ಷೆ ವೇಳೆ ತಜ್ಞರು ವೈಜ್ಞಾನಿಕ ವಿಧಾನಗಳನ್ನು ವಿಶ್ವಾಸಾರ್ಹವಾಗಿ ಅನ್ವಯಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ಸಾಬೀತುಪಡಿಸುವುದು ಅವಶ್ಯಕ, ಇಲ್ಲದಿದ್ದರೆ ಸೆಕ್ಷನ್ 293 ಸಿಆರ್‌ಪಿಸಿ ಪ್ರಕಾರ ಡಿಎನ್‌ಎ ವರದಿಯನ್ನು ಸಾಕ್ಷ್ಯವಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ನ್ಯಾಯಾಲಯ ಹೇಳಿತ್ತು.

ಡಿಎನ್‌ಎ ವರದಿಯನ್ನು ಸಿದ್ಧಪಡಿಸುವಲ್ಲಿ ವೈಜ್ಞಾನಿಕ ತಜ್ಞರು ಬಳಸಿದ ವಿಧಾನಗಳ ಬಗ್ಗೆ ಸ್ಪಷ್ಟತೆ ಇಲ್ಲದಿರುವಾಗ, ಅಂತಹ ಪುರಾವೆಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಏಕೆಂದರೆ, ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸುವ ಮೊದಲು ಅದನ್ನು ಪೊಲೀಸರ ವಶದಲ್ಲಿ ಇರಿಸಿದಾಗ ಅವುಗಳನ್ನು ತಿರುಚುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದಿದೆ.

ವಿಧಿವಿಜ್ಞಾನ ಮಾದರಿಗಳ ಸಮಗ್ರತೆಯನ್ನು ಸ್ಥಾಪಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿದೆ ನಂತರ, ವೈದ್ಯಕೀಯ ಅಧಿಕಾರಿ ಸೀಲಿಂಗ್ ಮಾದರಿಗಳನ್ನು ದೃಢೀಕರಿಸಿಲ್ಲ ಮತ್ತು ಪೊಲೀಸ್ ಸಾಕ್ಷಿಗಳನ್ನು ಎಫ್‌ಎಸ್‌ಎಲ್‌ಗೆ ಸುರಕ್ಷಿತವಾಗಿ ತಲುಪಿಸಲಾಗಿದೆ ಎಂಬುವುದನ್ನು ಸಾಬೀತುಪಡಿಸಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಮೇಲಿನ ಎಲ್ಲಾ ಅಂಶಗಳನ್ನು ಉಲ್ಲೇಖಿಸಿದ ನ್ಯಾಯಾಲಯ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ದೋಷಮುಕ್ತಗೊಳಿಸಿ ಮಹತ್ವದ ತೀರ್ಪು ನೀಡಿದೆ.

ಏನಿದು ಪ್ರಕರಣ?

ಉತ್ತರಾಖಂಡದ ಉಧಾಂಸಿಂಗ್ ನಗರ ಜಿಲ್ಲೆಯಲ್ಲಿ 2016ರ ಜೂನ್‌ನಲ್ಲಿ ಈ ಘಟನೆ ನಡೆದಿದ್ದು, ಜಾಗರಣೆ ವೇಳೆ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಳಿಕ ಆಕೆಯ ಮೃತದೇಹ ಪಕ್ಕದ ಹೊಲದಲ್ಲಿ ಪತ್ತೆಯಾಗಿತ್ತು. ಒಂದು ದಿನದ ಬಳಿಕ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದರು. ಎಫ್ಐಆರ್ ದಾಖಲಿಸುವ ವೇಳೆ, ಬಾಲಕಿಯನ್ನು ಆರೋಪಿಯ ಜೊತೆ ನೋಡಿದ್ದಾಗಿ ಹೇಳುವ ಯಾವ ಸಾಕ್ಷಿಯೂ ಪೊಲೀಸರ ಬಳಿ ಇರಲಿಲ್ಲ. ಆತ ಜಾಗರಣ ಕಾರ್ಯಕ್ರಮದ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯ ಜವಾಬ್ದಾರಿ ಹೊತ್ತಿದ್ದ. ಆದರೆ ಪೊಲೀಸರು ಆತನ ವಿರುದ್ಧ ಆರೋಪ ಹೊರಿಸಿದ್ದರು.

ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರನ್ನು ಪಾಟೀಸವಾಲಿಗೆ ಗುರಿಪಡಿಸಿಲ್ಲ ಮತ್ತು ಯಾವ ಪೊಲೀಸ್‌ಗೆ ಮಾದರಿಗಳನ್ನು ಹಸ್ತಾಂತರಿಸಲಾಗಿದೆ ಎಂಬ ಮಾಹಿತಿಯನ್ನೂ ಬಹಿರಂಗಪಡಿಸಿಲ್ಲ. ಮಾದರಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸುರಕ್ಷಿತವಾಗಿ ನೀಡಲಾಗಿದೆ ಎಂದೂ ಹೇಳಿಲ್ಲ. ಆರೋಪಿಯಿಂದ ತಪ್ಪೊಪ್ಪಿಗೆ ಹೇಳಿಕೆ ಪಡೆದ ಪೊಲೀಸರು ಅದಕ್ಕೇ ಅಂಟಿಕೊಂಡರು ಎಂದು ನ್ಯಾಯಾಲಯ ವಿಶ್ಲೇಷಿಸಿದೆ.

ಪೊಲೀಸರು ನೀಡಿರುವ ಪುರಾವೆ ಸಂಪೂರ್ಣ ನಂಬಲಸಾಧ್ಯ. ಸಂಗ್ರಹಿಸಿದ ಪುರಾವೆಗಳು ಕೂಡಾ ಸುಳ್ಳು. ಅರ್ಜಿದಾರನಿಗೆ ಸಾಕ್ಷಿಗಳನ್ನು ನಾಶಪಡಿಸುವ ಎಲ್ಲ ಅವಕಾಶವೂ ಇತ್ತು. ಘಟನೆ ನಡೆದ ಎರಡು ದಿನಗಳ ಬಳಿಕವೂ ಪೊಲೀಸರು ವಶಪಡಿಸಿಕೊಂಡ ಬಟ್ಟೆಗಳನ್ನು ಇಟ್ಟುಕೊಳ್ಳುವ ಅಗತ್ಯವಿರಲಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸಿದ ಕೇಂದ್ರದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...