*ನೀರು* (ಪುಟ್ಕತೆ)

- Advertisement -
- Advertisement -

‘ಬೇಕೇ ಬೇಕು ನೀರೂ ಬೇಕು’ ಹೀಗೆ ಸುತ್ತ ಎಂಬತ್ತಾರು ಹಳ್ಳಿ ಜನ ಘೋಷಣೆ ಕೂಗುತ್ತ ಸತ್ಯಾಗ್ರಹಕ್ಕೆ ಕುಳಿತಿದ್ದರು. ಕುಡಿಯೊ ನೀರಿಗಾಗಿ ಎಂಟು ವರ್ಷದಿಂದ ಅರ್ಜಿ ಕೊಟ್ಟು ಸಾಕಾಗಿ ಹೋಗಿತ್ತು. ಇನ್ನೆರಡು ತಿಂಗಳಲ್ಲಿ ಚುನಾವಣೆ. ನೂರನೇ ದಿನದ ಸತ್ಯಾಗ್ರಹಕ್ಕೆ ಮಿನಿಸ್ಟರ್, ಅಧಿಕಾರಿಗಳು ಬಂದರು. ಜನರ ಗದ್ದಲ ಹೆಚ್ಚಾಯಿತು. ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದು ನಿಶ್ಯಬ್ಧರಾದರು.

ಮಿನಿಸ್ಟರ್ ಮೈಕ್ ಹಿಡಿದು ‘ಮಹಾಜನಗಳೇ, ನಿಮ್ಮ ನೋವು ನನಗರ್ಥವಾಗತ್ತೆ. ಈ ಮಣ್ಣಿಗೆ ನೀರು ತರದೆ ನಾನು ಸಾಯಲಾರೆ’ ಎಂದು ಸ್ವಲ್ಪ ಹೊತ್ತು ಸುಮ್ಮನಾದರು. ಮಿನಿಸ್ಟರ್ ಹಿಂಬಾಲಕರು, ಅಧಿಕಾರಿಗಳನ್ನು ಬಿಟ್ಟು ಯಾರೂ ಚಪ್ಪಾಳೆ ತಟ್ಟಲಿಲ್ಲ. ‘ಇನ್ನೆರಡೇ ತಿಂಗಳು. ನನಗೆ ಮತ್ತೆ ಅಧಿಕಾರ ಕೊಡಿ. ನಿಮ್ಮ ಋಣ ತೀರಿಸದೇ ಸಾಯೋದಿಲ್ಲ’ ಎಂದರು. ಅಷ್ಟರಲ್ಲಿ ಮದ್ಯೆ ಬಾಯಿ ಹಾಕಿದ ಜನತೆ.

‘ಸಾಯೆಬ್ರೆ ಎಂಟು ವರ್ಷದಿಂದ ಒಂದು ಹನಿ ಮಳೆ ಬಿದ್ದಿಲ್ಲ’

‘ಸಾಯೆಬ್ರೆ ಕುಡಿಯೋ ನೀರಿಗೆ ಏಳು ಮೈಲಿ ನಡಿಬೇಕಾಗ್ಯದ’

‘ಸಾಯೆಬ್ರೆ ಮಕ್ಕಳು ಸಾಲಿ ಬಿಟ್ಟು ನೀರು ಹೊರಾಕತ್ತೇರ’

‘ಸಾಯೆಬ್ರೆ ಎಂಟು ವರ್ಷ ಆತ್ರಿ. ನಿಮ್ಮನ್ನ ಎರಡು ಸಲ ಗೆಲ್ಸಿವಿ ನೆಪ್ಪಿರ್ಲಿ’

ಪೊಲೀಸ್ ಎಲ್ಲರನ್ನು ಗದರಿಸಿ ಕೂರಿಸಿದರು.
ಮಿನಿಸ್ಟರ್ : ಮಹಾಜನಗಳೆ 100 ಕಿಲೋಮೀಟರಿಂದ ನದಿ ನೀರು ತರಬೇಕಂದ್ರೆ ಅಷ್ಟು ಸುಲಭವಲ್ಲ. ಆದ್ರೂ ನಾನು ಪ್ರಾಮಾಣಿಕ ಪ್ರಯತ್ನ ಮಾಡಿ ಫೈಲ್ ಮೂವ್ ಮಾಡ್ಸಿದಿನಿ. ಸರ್ಕಾರ ಹಣ ಬಿಡುಗಡೆ ಮಾಡಿದ ತಕ್ಷಣ ಕಾಮಗಾರಿ ಚಾಲೂ ಮಾಡ್ತಿನಿ’

ಜನತೆ : ಅಲ್ಲಿಮಟ ನಮ್ಕತಿ? ಸಾಯೆಬ್ರೆ ಅಂತರ್ಜಲ ಇಲ್ಲದಂಗಾಗ್ಯದ. ಬೋರ್ ಬಾವಿ ಬರಿದಾಗ್ಯವ. ಕೆರೆ, ಕುಂಟೆ ಬಾಯ್ಬಿಟ್ಕಂಡ್ ನೀರು ನೀರು ಅಂತಾವೆ. ದನಕರುಗಳಿಗಾದ್ರೂ ಕುಡಿಯೋ ನೀರು ವ್ಯವಸ್ಥೆ ಮಾಡ್ರಿ

ಮಿನಿಸ್ಟರ್: ಅದಕ್ಕೆ ಇನ್ನೂರು ಕೋಟಿ ಬೇಕು. ಸರ್ಕಾರ ಸಾಲದಲ್ಲಿದೆ. ಯಾವ್ದುಕ್ಕೂ ಎರಡು ತಿಂಗಳು ಸಮಯ ಕೊಡಿ ದಯಮಾಡಿ

ಜನತೆ ಮಾತಾಡಬೇಕೆಂದುಕೊಂಡರೂ ಪೊಲೀಸ್ ಬಿಡಲಿಲ್ಲ. ಅಧಿಕಾರಿಗಳು ಮಿನಿಸ್ಟರ್ ಕಿವಿಲಿ ಏನೋ ಹೇಳಿದಾಗ
ಮಿನಿಸ್ಟರ್: ಮಹಾಜನಗಳೇ ನಿಮಗೊಂದು ಸಂತಸದ ಸುದ್ಧಿ.

ಮಿನಿಸ್ಟರ್ ಮಾತು ಕೇಳಿ ಅಲ್ಲಿದ್ದ ರೈತರಿಗೆ ಬೆಳೆ ಕಂಡಂಗಾಯ್ತು. ಕೂಲಿ ಜನಗಳಿಗೆ ಕೆಲಸ ಕಂಡಂಗಾಯ್ತು. ಮಹಿಳೆಯರಿಗೆ ಮೋಡ ಕಟ್ಟಿದಂಗಾಯ್ತು. ಮಕ್ಕಳಿಗೆ ಬರಿಮೈಲಿ ಈಜು ಹೊಡೆದಂಗಾಯ್ತು. ಜನರ ಕಿವಿಗಳೆಲ್ಲ ನೆಟ್ಟಗಾದವು.

ಮಿನಿಸ್ಟರ್: ಈ ಸಾಧನೆ ಅಮೆರಿಕಾ, ಚೀನಾ, ರಷ್ಯಾ ಅಷ್ಟೇ ಮಾಡಿದ್ದು. ಈಗ ಆ ಸಾಧನೇನ ನಮ್ಮ ದೇಶ ಮಾಡುತ್ತಿದೆ. ಇವತ್ತು ರಾತ್ರಿ ಚಂದ್ರನ ಮೇಲೆ ಉಪಗ್ರಹ ಕಳಿಸುತ್ತಿದ್ದಾರೆ. ಸಾವಿರ ಕೋಟಿ ಪ್ರಾಜೆಕ್ಟ್ ಈ ಚಂದ್ರಯಾನ. ಎಲ್ಲರೂ ನೋಡಿ ಹಾರೈಸಿ. ದೇಶದ ಕೀರ್ತಿ ಪ್ರಚಾರ ಮಾಡಿ.

ಮಿನಿಸ್ಟರ್ ಮಾತು ಕೇಳಿ ಜನತೆಯಲ್ಲೊಬ್ಬ ‘ಸಾಯೆಬ್ರೆ ಸಾವ್ರ ಕೋಟಿಯಾ’ ಎಂದೊಡನೆ ಅದ್ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದರು. ಮಿನಿಸ್ಟರ್ ಕಾರು ಹತ್ತುವವರೆಗೆ ಘೋಷಣೆ ಮೊಳಗುತ್ತಲೇ ಇತ್ತು. ಅಲ್ಲೆ ಸಂದಿಯಲ್ಲಿ ನುಗ್ಗಿ ಸೂಟು ತೊಟ್ಟ ಅಧಿಕಾರಿಯೊಬ್ಬರ ಕೈ ಹಿಡಿದುಕೊಂಡ ಶಾಲೆ ಯೂನಿಪಾರ್ಮ್ ತೊಟ್ಟ ಹುಡುಗಿ ‘ಸಾರ್ ಚಂದ್ರಯಾನ ಯಾಕೆ’ ಎಂದು ಕೇಳಿದಳು. ಅಧಿಕಾರಿ ಹೆಮ್ಮೆಯಿಂದ ಹೇಳಿದ ‘ ಚಂದ್ರನಲ್ಲಿ ನೀರು ಹುಡುಕೋಕೆ ಪುಟ್ಟ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...