*ನೀರು* (ಪುಟ್ಕತೆ)

- Advertisement -
- Advertisement -

‘ಬೇಕೇ ಬೇಕು ನೀರೂ ಬೇಕು’ ಹೀಗೆ ಸುತ್ತ ಎಂಬತ್ತಾರು ಹಳ್ಳಿ ಜನ ಘೋಷಣೆ ಕೂಗುತ್ತ ಸತ್ಯಾಗ್ರಹಕ್ಕೆ ಕುಳಿತಿದ್ದರು. ಕುಡಿಯೊ ನೀರಿಗಾಗಿ ಎಂಟು ವರ್ಷದಿಂದ ಅರ್ಜಿ ಕೊಟ್ಟು ಸಾಕಾಗಿ ಹೋಗಿತ್ತು. ಇನ್ನೆರಡು ತಿಂಗಳಲ್ಲಿ ಚುನಾವಣೆ. ನೂರನೇ ದಿನದ ಸತ್ಯಾಗ್ರಹಕ್ಕೆ ಮಿನಿಸ್ಟರ್, ಅಧಿಕಾರಿಗಳು ಬಂದರು. ಜನರ ಗದ್ದಲ ಹೆಚ್ಚಾಯಿತು. ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದು ನಿಶ್ಯಬ್ಧರಾದರು.

ಮಿನಿಸ್ಟರ್ ಮೈಕ್ ಹಿಡಿದು ‘ಮಹಾಜನಗಳೇ, ನಿಮ್ಮ ನೋವು ನನಗರ್ಥವಾಗತ್ತೆ. ಈ ಮಣ್ಣಿಗೆ ನೀರು ತರದೆ ನಾನು ಸಾಯಲಾರೆ’ ಎಂದು ಸ್ವಲ್ಪ ಹೊತ್ತು ಸುಮ್ಮನಾದರು. ಮಿನಿಸ್ಟರ್ ಹಿಂಬಾಲಕರು, ಅಧಿಕಾರಿಗಳನ್ನು ಬಿಟ್ಟು ಯಾರೂ ಚಪ್ಪಾಳೆ ತಟ್ಟಲಿಲ್ಲ. ‘ಇನ್ನೆರಡೇ ತಿಂಗಳು. ನನಗೆ ಮತ್ತೆ ಅಧಿಕಾರ ಕೊಡಿ. ನಿಮ್ಮ ಋಣ ತೀರಿಸದೇ ಸಾಯೋದಿಲ್ಲ’ ಎಂದರು. ಅಷ್ಟರಲ್ಲಿ ಮದ್ಯೆ ಬಾಯಿ ಹಾಕಿದ ಜನತೆ.

‘ಸಾಯೆಬ್ರೆ ಎಂಟು ವರ್ಷದಿಂದ ಒಂದು ಹನಿ ಮಳೆ ಬಿದ್ದಿಲ್ಲ’

‘ಸಾಯೆಬ್ರೆ ಕುಡಿಯೋ ನೀರಿಗೆ ಏಳು ಮೈಲಿ ನಡಿಬೇಕಾಗ್ಯದ’

‘ಸಾಯೆಬ್ರೆ ಮಕ್ಕಳು ಸಾಲಿ ಬಿಟ್ಟು ನೀರು ಹೊರಾಕತ್ತೇರ’

‘ಸಾಯೆಬ್ರೆ ಎಂಟು ವರ್ಷ ಆತ್ರಿ. ನಿಮ್ಮನ್ನ ಎರಡು ಸಲ ಗೆಲ್ಸಿವಿ ನೆಪ್ಪಿರ್ಲಿ’

ಪೊಲೀಸ್ ಎಲ್ಲರನ್ನು ಗದರಿಸಿ ಕೂರಿಸಿದರು.
ಮಿನಿಸ್ಟರ್ : ಮಹಾಜನಗಳೆ 100 ಕಿಲೋಮೀಟರಿಂದ ನದಿ ನೀರು ತರಬೇಕಂದ್ರೆ ಅಷ್ಟು ಸುಲಭವಲ್ಲ. ಆದ್ರೂ ನಾನು ಪ್ರಾಮಾಣಿಕ ಪ್ರಯತ್ನ ಮಾಡಿ ಫೈಲ್ ಮೂವ್ ಮಾಡ್ಸಿದಿನಿ. ಸರ್ಕಾರ ಹಣ ಬಿಡುಗಡೆ ಮಾಡಿದ ತಕ್ಷಣ ಕಾಮಗಾರಿ ಚಾಲೂ ಮಾಡ್ತಿನಿ’

ಜನತೆ : ಅಲ್ಲಿಮಟ ನಮ್ಕತಿ? ಸಾಯೆಬ್ರೆ ಅಂತರ್ಜಲ ಇಲ್ಲದಂಗಾಗ್ಯದ. ಬೋರ್ ಬಾವಿ ಬರಿದಾಗ್ಯವ. ಕೆರೆ, ಕುಂಟೆ ಬಾಯ್ಬಿಟ್ಕಂಡ್ ನೀರು ನೀರು ಅಂತಾವೆ. ದನಕರುಗಳಿಗಾದ್ರೂ ಕುಡಿಯೋ ನೀರು ವ್ಯವಸ್ಥೆ ಮಾಡ್ರಿ

ಮಿನಿಸ್ಟರ್: ಅದಕ್ಕೆ ಇನ್ನೂರು ಕೋಟಿ ಬೇಕು. ಸರ್ಕಾರ ಸಾಲದಲ್ಲಿದೆ. ಯಾವ್ದುಕ್ಕೂ ಎರಡು ತಿಂಗಳು ಸಮಯ ಕೊಡಿ ದಯಮಾಡಿ

ಜನತೆ ಮಾತಾಡಬೇಕೆಂದುಕೊಂಡರೂ ಪೊಲೀಸ್ ಬಿಡಲಿಲ್ಲ. ಅಧಿಕಾರಿಗಳು ಮಿನಿಸ್ಟರ್ ಕಿವಿಲಿ ಏನೋ ಹೇಳಿದಾಗ
ಮಿನಿಸ್ಟರ್: ಮಹಾಜನಗಳೇ ನಿಮಗೊಂದು ಸಂತಸದ ಸುದ್ಧಿ.

ಮಿನಿಸ್ಟರ್ ಮಾತು ಕೇಳಿ ಅಲ್ಲಿದ್ದ ರೈತರಿಗೆ ಬೆಳೆ ಕಂಡಂಗಾಯ್ತು. ಕೂಲಿ ಜನಗಳಿಗೆ ಕೆಲಸ ಕಂಡಂಗಾಯ್ತು. ಮಹಿಳೆಯರಿಗೆ ಮೋಡ ಕಟ್ಟಿದಂಗಾಯ್ತು. ಮಕ್ಕಳಿಗೆ ಬರಿಮೈಲಿ ಈಜು ಹೊಡೆದಂಗಾಯ್ತು. ಜನರ ಕಿವಿಗಳೆಲ್ಲ ನೆಟ್ಟಗಾದವು.

ಮಿನಿಸ್ಟರ್: ಈ ಸಾಧನೆ ಅಮೆರಿಕಾ, ಚೀನಾ, ರಷ್ಯಾ ಅಷ್ಟೇ ಮಾಡಿದ್ದು. ಈಗ ಆ ಸಾಧನೇನ ನಮ್ಮ ದೇಶ ಮಾಡುತ್ತಿದೆ. ಇವತ್ತು ರಾತ್ರಿ ಚಂದ್ರನ ಮೇಲೆ ಉಪಗ್ರಹ ಕಳಿಸುತ್ತಿದ್ದಾರೆ. ಸಾವಿರ ಕೋಟಿ ಪ್ರಾಜೆಕ್ಟ್ ಈ ಚಂದ್ರಯಾನ. ಎಲ್ಲರೂ ನೋಡಿ ಹಾರೈಸಿ. ದೇಶದ ಕೀರ್ತಿ ಪ್ರಚಾರ ಮಾಡಿ.

ಮಿನಿಸ್ಟರ್ ಮಾತು ಕೇಳಿ ಜನತೆಯಲ್ಲೊಬ್ಬ ‘ಸಾಯೆಬ್ರೆ ಸಾವ್ರ ಕೋಟಿಯಾ’ ಎಂದೊಡನೆ ಅದ್ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದರು. ಮಿನಿಸ್ಟರ್ ಕಾರು ಹತ್ತುವವರೆಗೆ ಘೋಷಣೆ ಮೊಳಗುತ್ತಲೇ ಇತ್ತು. ಅಲ್ಲೆ ಸಂದಿಯಲ್ಲಿ ನುಗ್ಗಿ ಸೂಟು ತೊಟ್ಟ ಅಧಿಕಾರಿಯೊಬ್ಬರ ಕೈ ಹಿಡಿದುಕೊಂಡ ಶಾಲೆ ಯೂನಿಪಾರ್ಮ್ ತೊಟ್ಟ ಹುಡುಗಿ ‘ಸಾರ್ ಚಂದ್ರಯಾನ ಯಾಕೆ’ ಎಂದು ಕೇಳಿದಳು. ಅಧಿಕಾರಿ ಹೆಮ್ಮೆಯಿಂದ ಹೇಳಿದ ‘ ಚಂದ್ರನಲ್ಲಿ ನೀರು ಹುಡುಕೋಕೆ ಪುಟ್ಟ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...