Homeರಾಜಕೀಯಅಧ್ಯಕ್ಷ ಮ್ಯಾಕ್ರೋನ್ ವಿರುದ್ಧ ಫ್ರಾನ್ಸ್ ನಲ್ಲಿ ಪ್ರತಿರೋಧದ ಅಲೆ

ಅಧ್ಯಕ್ಷ ಮ್ಯಾಕ್ರೋನ್ ವಿರುದ್ಧ ಫ್ರಾನ್ಸ್ ನಲ್ಲಿ ಪ್ರತಿರೋಧದ ಅಲೆ

- Advertisement -
- Advertisement -
  • ಡಾ. ಸ್ವಾತಿ ಶುಕ್ಲಾ |

ಮೇ 25ರ ಶನಿವಾರ, ಫ್ರಾನ್ಸ್‍ನ ಬೀದಿಗಳಲ್ಲಿ ಲಕ್ಷಾಂತರ ಜನರ ‘ಜನಪ್ರಿಯ ಅಲೆ’ಯ ಪ್ರತಿರೋಧ. ಫ್ರಾನ್ಸ್‍ನ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್‍ರ ಕಾರ್ಮಿಕ ವಿರೋಧಿ ಸುಧಾರಣೆಗಳು ಆ ಜನರನ್ನು ಬೀದಿಗೆ ತಂದಿದ್ದವು. ಸಿಜಿಟಿ ಎಂಬ ಅಲ್ಲಿನ ಅತೀ ದೊಡ್ಡ ಕಾರ್ಮಿಕ ಸಂಘಟನೆಗಳ ಒಕ್ಕೂಟವು ಈ ಪ್ರತಿಭಟನೆಗೆ ಕರೆ ಕೊಟ್ಟಿತ್ತು. ಅಧ್ಯಕ್ಷರ ಪ್ರಸ್ತಾಪಿತ ಜನವಿರೋಧಿ ಆರ್ಥಿಕ ಸುಧಾರಣೆಗಳ ವಿರುದ್ಧ ಶಿಕ್ಷಕರು, ಪೊಲೀಸ್ ಅಧಿಕಾರಿಗಳು ಮತ್ತು ಸಾರಿಗೆ ನೌಕರರು ಪ್ರತಿಭಟಿಸುತ್ತಲೇ ಇದ್ದಾರೆ. ಕಳೆದ ಮೇನಲ್ಲಿ ಮ್ಯಾಕ್ರೋನ್ ಅಧಿಕಾರಕ್ಕೆ ಬಂದ ನಂತರ ಸರ್ಕಾರೀ ಸೇವೆಯಲ್ಲಿನ ನೌಕರರ ಮೂರನೇ ಅತೀ ದೊಡ್ಡ ಮುಷ್ಕರ ಇದಾಗಿದೆ.

ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯಲು ತಂದಿರುವ ಹೊಸ ನಿಯಮಗಳು, ವಲಸೆ ಕುರಿತ ಕಾನೂನುಗಳು ಮತ್ತು ಪೊಲೀಸರಿಗೆ ಹೆಚ್ಚು ಅಧಿಕಾರವನ್ನು ನೀಡುವ ನೀತಿಯ ವಿರುದ್ಧ ಶನಿವಾರದ ಪ್ರತಿಭಟನೆ ದನಿಯೆತ್ತಿತ್ತು. ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಸರ್ಕಾರೀ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯುವುದಕ್ಕೆ ಹೊಸ ನಿಯಮಗಳು ಅಡ್ಡಿಯಾಗಿದ್ದವು ಮತ್ತು ಪೊಲೀಸರಿಗೆ ನೀಡಲಾದ ಹೆಚ್ಚಿನ ಅಧಿಕಾರವು ಅಲ್ಲಿನ ಶೋಷಿತ ಸಮುದಾಯಗಳ ವಸತಿ ಪ್ರದೇಶಗಳಲ್ಲಿ ಪೊಲೀಸ್ ದೌರ್ಜನ್ಯವನ್ನು ಹೆಚ್ಚಿಸುವ ಸಾಧ್ಯತೆ ಇದೆ. ಇದುವರೆಗಿನ ಕಾರ್ಮಿಕ ಕಾನೂನುಗಳು ಮತ್ತು ಕಾರ್ಮಿಕ ಸಂಘಗಳಿಂದ ಕಾರ್ಮಿಕರಿಗೆ ಸಿಗುವ ರಕ್ಷಣೆಯ ಕಾರಣದಿಂದಲೇ ಫ್ರಾನ್ಸ್‍ನಲ್ಲಿ ಹೆಚ್ಚು ಆರ್ಥಿಕ ವ್ಯವಹಾರವೂ ನಡೆಯುತ್ತಿಲ್ಲ ಮತ್ತು ಉದ್ಯೋಗ ಸೃಷ್ಟಿಯೂ ಆಗುತ್ತಿಲ್ಲವೆಂದು ಹೇಳುವ ಮ್ಯಾಕ್ರೋನ್ ಕಾರ್ಮಿಕಪರ ಕಾನೂನುಗಳನ್ನು ಕಿತ್ತುಹಾಕುವ ‘ಮಹತ್ವದ’ ಕ್ರಮಕ್ಕೆ ಮುಂದಾಗಿದ್ದಾರೆ. ಹೊಸ ನೀತಿಯ ಪ್ರಕಾರ, ಕಂಪೆನಿಗಳು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇದುವರೆಗೆ ಇರುವ ಒಪ್ಪಂದಗಳನ್ನು ಪಾಲಿಸಬೇಕಿಲ್ಲ; ಹೊಸ ಆರ್ಥಿಕ ನೀತಿಯ ವಿಧಾನಗಳಾದ ಹೈರ್ & ಫೈರ್ – ಬೇಕೆಂದಾಗ ತೆಗೆದುಕೋ ಇಲ್ಲವಾದರೆ ಮನೆಗೆ ಕಳಿಸು – ನೀತಿಯನ್ನೂ, ಕೆಲಸದ ಸ್ಥಳದ ಸೌಲಭ್ಯಗಳನ್ನೂ ಮತ್ತು ಕೆಲಸದ ಅವಧಿಯನ್ನೂ ತಮಗೆ ಇಷ್ಟಬಂದ ರೀತಿಯಲ್ಲಿ ಬದಲಾಯಿಸಬಹುದು. ಏಕಪಕ್ಷೀಯವಾಗಿ ಕೆಲಸದಿಂದ ಕಿತ್ತು ಹಾಕಿದಾಗ ಕೊಡಬೇಕಿದ್ದ ಪರಿಹಾರದ ಮೊತ್ತವನ್ನೂ ಕಡಿಮೆ ಮಾಡಿರುವುದು ಯೂನಿಯನ್ನುಗಳಲ್ಲಿ ಆಕ್ರೋಶ ಮೂಡಿಸಿದೆ. ವಿದೇಶೀ ನೆಲೆಯ ಕಂಪೆನಿಗಳಲ್ಲೂ ಕಾರ್ಮಿಕರನ್ನು ಬೇಕಾಬಿಟ್ಟಿ ಕಿತ್ತು ಹಾಕುವುದಕ್ಕೆ ಇದು ಅವಕಾಶ ಮಾಡಿಕೊಟ್ಟಿದೆ. ಮ್ಯಾಕ್ರೋನ್ ಪ್ರಕಾರ ಇವೆಲ್ಲದರಿಂದ ಫ್ರಾನ್ಸ್‍ನ ಜಾಗತಿಕ ಸ್ಪರ್ಧಾ ಸಾಮಥ್ರ್ಯ ಹೆಚ್ಚಲಿದೆ.

ಪ್ಯಾರಿಸ್, ಮರ್ಸೆಲ್ಲಿ ಮತ್ತು ನ್ಯಾಂಟೆಸ್ ಒಳಗೊಂಡಂತೆ 160 ಕಡೆಗಳಲ್ಲಿ ಪ್ರತಿಭಟನೆಗಳು ನಡೆದವು. ಪ್ಯಾರಿಸ್ ಒಂದರಲ್ಲೇ 80,000 ಜನರು ಪಾಲ್ಗೊಂಡರು. ಪ್ರತಿಭಟನಾಕಾರರು ಹಿಂಸೆಗಿಳಿಯಬಹುದೆಂಬ ಸಂಶಯದ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದರು ಮತ್ತು ಅಶ್ರುವಾಯು ಸಿಡಿಸಿದರು. 43 ಜನರನ್ನು ಬಂಧಿಸಿ, 26 ಜನರನ್ನು ಇನ್ನೂ ತಮ್ಮ ವಶದಲ್ಲೇ ಇರಿಸಿಕೊಂಡಿದ್ದಾರೆ.

ಫ್ರಾನ್ಸ್‍ನ ಎಡ ಪಕ್ಷದ ನಾಯಕ ಜ್ಚಾನ್ -ಲು ಮೆಲೆನ್ಕೋ ದಕ್ಷಿಣದ ಬಂದರು ನಗರ ಮರ್ಸೆಲ್ಲಿಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಹೇಳಿದ ಮಾತುಗಳು ಹೀಗಿವೆ. ‘ಬಡವರ, ಶೋಷಿತರ, ಸೂರು ರಹಿತರ ಮತ್ತು ನಿರುದ್ಯೋಗಿಗಳ ಪರವಾಗಿ ನಾವಿಂದು ಹೇಳುವ ಮಾತು ಒಂದೇ. ಸಾಕು, ಸಾಕು, ಸಾಕು. ಈ ರೀತಿಯ ಜಗತ್ತು ನಮಗೆ ಸಾಕಾಗಿದೆ’.

ಈ ಮಧ್ಯೆ ಸರ್ಕಾರದ ನೀತಿಯ ವಿರುದ್ಧ ಫ್ರಾನ್ಸ್‍ನ ರೈಲು ಚಾಲಕರ ಮುಷ್ಕರ ಮೂರನೆಯ ತಿಂಗಳಿಗೆ ಕಾಲಿಟ್ಟಿದೆ. ಅವರ ಸೇವಾ ನಿಯಮಗಳನ್ನು ಬದಲಿಸುವ, ಬದುಕಿರುವ ಕಾಲ ಭದ್ರತೆ ಕಲ್ಪಿಸುತ್ತಿದ್ದ ಅನುಕೂಲ ಕಿತ್ತು ಹಾಕುವ ಮತ್ತು ಅವಧಿಪೂರ್ವವಾಗಿ ನಿವೃತ್ತಗೊಳಿಸುವ ನೀಯ ವಿರುದ್ಧ ಅವರು ಮುಷ್ಕರ ಹೂಡಿದ್ದಾರೆ. ಇತ್ತೀಚೆಗಿನ ಪ್ರತಿಭಟನೆಗಳಲ್ಲಿ ಅವರ ಜೊತೆ ಏರ್‍ಫ್ರಾನ್ಸ್‍ನ ಸಿಬ್ಬಂದಿ ವಿದ್ಯಾರ್ಥಿಗಳು ಮತ್ತು ಮ್ಯಾಕ್ರೋನ್‍ರ ನೀತಿಯನ್ನು ವಿರೋಧಿಸುವ ಇತರ ಕಾರ್ಮಿಕರೂ ಸಹಾ ಸೇರಿಕೊಂಡಿದ್ದಾರೆ.

ಫ್ರಾನ್ಸ್‍ನ ಇತಿಹಾಸದಲ್ಲೇ ಅತೀ ಕಿರಿಯ ಅಧ್ಯಕ್ಷರಾಗಿರುವ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರಿಗೆ 40 ವರ್ಷ ವಯಸ್ಸು. ನಡುಪಂಥೀಯರಾದ ಅವರು, ಈ ಹಿಂದೆ ಬ್ಯಾಂಕಿಂಗ್ ಉದ್ದಿಮೆಯಲ್ಲಿದ್ದರು. ‘ಎಲ್ಲರಿಗೂ ಉದ್ಯೋಗ’ದ ಭರವಸೆ ಮತ್ತು ಆರ್ಥಿಕತೆಯ ಪುನಶ್ಚೇತನದ ಘೋಷಣೆಯೊಂದಿಗೆ ಅವರು ಅಧಿಕಾರಕ್ಕೆ ಬಂದರು. ಪ್ರಪಂಚದ ಮಟ್ಟದಲ್ಲಿ ಒಬ್ಬ ಪ್ರಮುಖ ನಾಯಕನಾಗಿ ಗುರುತಿಸಲ್ಪಡುತ್ತಿರುವ ಆತ, ಆಗಾಗ್ಗೆ ಇತರ ವಿಶ್ವ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಿರುತ್ತಾರೆ. ಆದರೆ, ತನ್ನ ತವರಿನಲ್ಲೇ ದೊಡ್ಡ ಸವಾಲನ್ನು ಎದುರಿಸಬೇಕಾಗಿ ಬಂದಿದೆ. ನಿವೃತ್ತಿ ವೇತನ ಪಡೆಯುತ್ತಿರುವವರಿಗೆ ತೆರಿಗೆ ಹಾಕಿ ಸರ್ಕಾರೀ ಸಾಲವನ್ನು ತೀರಿಸಬೇಕೆಂದು ಹೇಳುವ ಆತ, ಶ್ರೀಮಂತರಿಗೆ ತೆರಿಗೆ ಕಡಿಮೆ ಮಾಡಬೇಕೆಂಬ ನೀತಿಯನ್ನು ಪ್ರತಿಪಾದಿಸುತ್ತಾರೆ. ಇವೆಲ್ಲದರಿಂದ ಆತನನ್ನು ‘ಶ್ರೀಮಂತರ ಅಧ್ಯಕ್ಷ’ ಎಂದು ಕರೆಯಲಾಗುತ್ತದೆ. ಕಾರ್ಮಿಕ ವಿರೋಧಿ ನೀತಿಗಳು ಮತ್ತು ವಿಶ್ವವಿದ್ಯಾಲಯಗಳಿಗೆ ದಾಖಲಾತಿಯನ್ನು ಕಷ್ಟವಾಗಿಸಿರುವುದರಿಂದ, ವಯಸ್ಸಾದವರು ಮತ್ತು ಯುವಜನರೆಲ್ಲರಿಂದ ವಿರೋಧ ಎದುರಿಸಬೇಕಾಗಿ ಬಂದಿದ್ದು, ಆತನ ಮಾನ್ಯತೆ ಕಡಿಮೆಯಾಗುತ್ತಿದೆ.

ಫ್ರಾನ್ಸ್‍ನ ಕಾರ್ಮಿಕ ಸಂಘಗಳೆಂದರೆ ಯಾರೂ ಮುಟ್ಟಲಾಗದ ಶಕ್ತಿಶಾಲಿ ಸಂಘಗಳಾಗಿ ದಶಕಗಳಿಂದ ಸ್ಥಾಪಿತವಾಗಿವೆ. 1995ರಲ್ಲಿ ಸಂಪ್ರದಾಯವಾದಿ ನಾಯಕತ್ವವು ತರಲು ಹೊರಟಿದ್ದ ಇದೇ ಬಗೆಯ ಜನವಿರೋಧಿ ನೀತಿಗಳನ್ನು ರಾಷ್ಟ್ರವ್ಯಾಪಿ ಮುಷ್ಕರಗಳು ಹಿಮ್ಮೆಟ್ಟಿಸಿದ್ದವು. 1968ರ ನಂತರ ನಡೆದ ಅತೀ ದೊಡ್ಡ ಸಾಮಾಜಿಕ ಹೋರಾಟ ಅದಾಗಿದ್ದು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಒಟ್ಟು ಸೇರಿ ಸರ್ಕಾರವನ್ನೇ ಕೆಳಗಿಳಿಸುವ ಮಟ್ಟ ತಲುಪಿದ್ದವು.

ಆದರೆ, ಈ ಸಾರಿಯ ಗೆಲುವಿನ ತಕ್ಕಡಿ ಮ್ಯಾಕ್ರೋನ್ ಕಡೆಗೇ ಬಾಗುವ ಸಾಧ್ಯತೆ ಇದೆ. ಏಕೆಂದರೆ, ಸತತ ಮುಷ್ಕರಗಳಿಂದ ಇತರ ಸಾರ್ವಜನಿಕರ ಬೆಂಬಲವು ಕಡಿಮೆಯಾಗುತ್ತಿದೆ ಮತ್ತು ಈಗಲೂ ಮ್ಯಾಕ್ರೋನ್ ಒಬ್ಬ ಒಳ್ಳೆಯ ಸುಧಾರಣಾವಾದಿ ಎಂದು ನಂಬುವವರ ಸಂಖ್ಯೆಯೂ ಸಾಕಷ್ಟಿದೆ. ಕಾರ್ಮಿಕ ಸಂಘಗಳೂ ಈ ಹಿಂದಿನಷ್ಟು ಸದೃಢವಾಗಿಲ್ಲ. 60 ವರ್ಷಗಳ ಹಿಂದೆ ಒಟ್ಟು ಕಾರ್ಮಿಕರಲ್ಲಿ ಮೂರನೇ ಒಂದು ಭಾಗದಷ್ಟು ಕಾರ್ಮಿಕ ಸಂಘಗಳ ಸದಸ್ಯತ್ವ ಪಡೆದುಕೊಂಡಿದ್ದರೆ, ಈಗದು ಬಹಳ ಕಡಿಮೆಯಾಗಿದೆ.

ಮ್ಯಾಕ್ರೋನ್ ಇವೆಲ್ಲದರಿಂದ ಅಲುಗಾಡಿದಂತಿಲ್ಲ ಮತ್ತು ‘ಈ ಆಂದೋಲನಗಳು ನನ್ನನ್ನು ತಡೆಯಲು ಸಾಧ್ಯವಿಲ್ಲ’ ಎಂದು ಘೋಷಿಸಿದ್ದಾರೆ. ಏನಾಗಬಹುದು ಎಂಬುದಕ್ಕೆ ಕಾಲವೇ ಉತ್ತರವನ್ನು ಹೇಳಬಲ್ಲದು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...