Homeರಾಜಕೀಯಅನಂತಕುಮಾರ್ ಏಕೆ ಎಲ್ಲರ ಶ್ರದ್ಧಾಂಜಲಿ ಪಡೆದರು?

ಅನಂತಕುಮಾರ್ ಏಕೆ ಎಲ್ಲರ ಶ್ರದ್ಧಾಂಜಲಿ ಪಡೆದರು?

- Advertisement -
- Advertisement -

ಕೇಂದ್ರ ಸಚಿವ, ಕರ್ನಾಟಕದ ಭಾಜಪ ನಾಯಕ ಅನಂತಕುಮಾರ್ ಅವರು ಅಕಾಲಿಕ ನಿಧನ ಹೊಂದಿದ್ದಾರೆ. ಅವರ ಸಾವಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ, ಶ್ರದ್ಧಾಂಜಲಿಗಳ ಮಹಾಪೂರವೇ ಹರಿದು ಬರುತ್ತಿದೆ. ಅಚ್ಚರಿ ಎಂದರೆ ಅವರ ಭಾಜಪ ಅಭಿಮಾನಿಗಳಷ್ಟೆÃ ಅವರ ತಾತ್ವಿಕ ವಿರೋಧಿಗಳೂ ನಮನ ಸಲ್ಲಿಸುತ್ತಿದ್ದಾರೆ. ಸಾವಿನ ಸಂದರ್ಭದಲ್ಲಿ ಕುಹಕದ ವಿಕೃತಿಗಳು ಇರಕೂಡದು ಎಂಬ ನಡವಳಿಕೆ ಎಲ್ಲಾ ನಾಗರಿಕತೆಗಳಲ್ಲೂ ಇದೆ. ನಮ್ಮಲ್ಲೂ ಅಳಿದಿಲ್ಲ ಎಂಬುದು ಗಮನಾರ್ಹ.
ಈ ಗೌರವ ಸಲ್ಲಿಕೆ ಅನಂತಕುಮಾರ್ ಅವರ ರಾಜಕೀಯ, ತಾತ್ವಿಕ ವಿರೋಧಿಗಳಿಂದ ಬಂದಿದೆ ಎಂಬುದು ಈ ಮಂದಿಯ ಸಾಂಸದಿಕ ನಡವಳಿಕೆಯನ್ನು ತೋರಿಸುತ್ತದೆ. ಹಲವರು ಗಮನಿಸಿದಂತೆ, ಇದೇ ಕಾಂಗ್ರೆಸ್‌ನ ಯಾರಾದರೂ ಸತ್ತಿದ್ದರೆ, ಭಾಜಪ/ ಹಿಂದುತ್ವ ಬಳಗದ ವಿಕೃತರ ಪೈಶಾಚಿಕ ಪೋಸ್ಟ್ಗಳು ಹೇಗಿರುತ್ತಿದ್ದವು ಎಂದು ಊಹಿಸಲೂ ಸಾಧ್ಯವಿಲ್ಲ. ಅಷ್ಟರಮಟ್ಟಿಗೆ ಈ ಸಂತಾಪ ತೋರಿದ ಭಾಜಪ ವಿರೋಧಿಗಳೇ ಈ ದೇಶದ ಪ್ರಜಾಸತ್ತೆಯನ್ನು ಉಳಿಸುವ ಶಕ್ತಿ.
ಅನಂತಕುಮಾರ್ ಅವರಿಗೆ ಈ ಶ್ರದ್ಧಾಂಜಲಿ ಹೇಗೆ ಹರಿದುಬಂತು? ಕಾಟಾಚಾರಕ್ಕೊÃ, ಹಿಂದುತ್ವದ ವಿಕೃತರ ಎದುರು, ‘ನಾವು ನೋಡಿ ಎಷ್ಟು ಶಿಷ್ಟವಾಗಿ ಪ್ರತಿಕ್ರಿಯಿಸುತ್ತಿದ್ದೆÃವೆ’ ಎಂಬ ತೋರುಗಾಣಿಕೆ ಈ ಪೋಸ್ಟುಗಳಲ್ಲಿ ಕಾಣಿಸಲಿಲ್ಲ. ಇದರರ್ಥ ಅನಂತಕುಮಾರ್ ವ್ಯಕ್ತಿತ್ವ ಯಾವುದೋ ಬಗೆಯಲ್ಲಿ ನಮ್ಮನ್ನು ತಟ್ಟಿದೆ.
ನಮ್ಮ ಸಾಮಾಜಿಕ ,ರಾಜಕೀಯ ಬದುಕಿನಲ್ಲಿ ದಿನಗಳೆದಂತೆ ಕೆಡುತ್ತಿದೆ, ಮೌಲ್ಯಗಳು ಶಿಥಿಲವಾಗುತ್ತಿದೆ ಎಂಬ ನಂಬಿಕೆ ದೃಢವಾಗುವಂಥಾ ಪುರಾವೆಗಳು ಹಿಡಿಯುತ್ತಲೇ ಇವೆ. ಇದನ್ನು ಠಿಡಿogಡಿessive ಆegeಟಿeಡಿಚಿಣioಟಿ ಅಂತ ಕರೆಯುವುದಿದೆ. ಅಂದರೆ ಒಂದು ನಾಗರಿಕತೆ ವಿಕಾಸಗೊಂಡು ಉತ್ತಮವಾಗುವ ಬದಲು ದಿನೇ ದಿನೇ ಇನ್ನಷ್ಟು ಕೆಡುತ್ತಾ, ಕೊಳೆಯುತ್ತಾ ಹೋಗುತ್ತಿದೆ ಎಂಬ ಹತಾಶೆ ಇದು. ಹಿಂದಿನ ಕಾಲ ಎಷ್ಟು ಚೆನ್ನಾಗಿತ್ತು ಎಂಬ ಹಿನ್ನೊÃಟದ ಹಳಹಳಿಕೆ ಎಲ್ಲಾ ತಲೆಮಾರಿಗೂ ಇದೆ. ಆದರೆ ಈ ದುಗುಡ ಅದಕ್ಕಿಂತ ಗುಣಾತ್ಮಕವಾಗಿ ಭಿನ್ನ. ಅಂದರೆ ಹಿಂದಿನದ್ದಕ್ಕಿಂತ ಈಗಿರುವುದು ಇನ್ನಷ್ಟು ಕೆಡುಕಾಗಿ ತೋರುವ ಬಗೆ. ಗುಂಡೂರಾವ್ ಬಂದಾಗ ಅರಸು ಬೆಟರ್ ಅನ್ನಿಸುತ್ತೆ. ಮೋದಿ ಕಂಡಾಗ ಇಂದಿರಾ ಕೊಡುಗೆ ಕಾಡುತ್ತದೆ. ಹೀಗೆ.. (ಸ್ವತಃ ಮೋದಿಯಂಥವರಿಗೆ ಈ ಚಾರಿತ್ರಿಕ ಗ್ರಹಿಕೆ ಅರ್ಥವಾಗುವುದಿಲ್ಲ, ಅದು ಬೇರೆ ಮಾತು.)
ನಾಗರಿಕತೆಯ ಮಾನದಂಡದಲ್ಲಿ ಹಿಂದಿನದ್ದು ಉತ್ತಮ ಎಂಬ ಗ್ರಹಿಕೆಗೆ ಇಂಬು ನೀಡುವಂಥಾ ನಡಾವಳಿಗಳು ಜರುಗಿದಷ್ಟೂ ಸಾಮೂಹಿಕ ಸ್ಮೃತಿಯಲ್ಲಿ ಇದು ಗಟ್ಟಿಯಾಗುತ್ತಾ ಹೋಗುತ್ತದೆ. ಈ ಮಾನದಂಡವನ್ನು ಪ್ರಜೆಗಳು ನಿರ್ವಚಿಸುವ ರೀತಿ ಸುಲಭ ಅಕಡೆಮಿಕ್ ಗ್ರಹಿಕೆಗೆ ನಿಲುಕುವಂಥಾದ್ದಲ್ಲ.
ಅನಂತಕುಮಾರ್ ಅವರ ಸಾವಿನ ಹಿನ್ನೆಲೆಯಲ್ಲಿ ಇದು ಪ್ರಸ್ತುತ. ಸ್ವತಃ ಅನಂತಕುಮಾರ್, ಅಧ್ವಾನಿಯವರು ಕಟ್ಟೆಯೊಡೆದು ಬಿಟ್ಟ ರೂಕ್ಷ ಕೋಮು ಧ್ರುವೀಕರಣದ ಕೂಸು. ಆದರೆ ಅನಂತಕುಮಾರ್ ಈ ಕೋಮು ಕಿರುಚಾಟದ ಭಾಗವಾಗಿರಲಿಲ್ಲ. ಅದರ ಸೂತ್ರಧಾರರಾಗಿದ್ದರು. ಹಲವರು ಗುರುತಿಸಿದಂತೆ ಅವರು ತೆರೆಮರೆಯ ಕೆಲಸಗಾರ. ‘90ರ ದಶಕದಲ್ಲಿ ನಿಷ್ಕರುಣ ಲೆಕ್ಕಾಚಾರದ ರಾಜಕಾರಣದ ಪ್ರತೀಕವಾಗಿ ಕಂಡಿದ್ದ ಅದ್ವಾನಿ ಮೋದಿ ಆಗಮನದ ಬಳಿಕ ಬಸವಳಿದ ಪಾಳೇಗಾರನ ತರ ಕಾಣುತ್ತಿದ್ದಾರೆ. ಅದ್ವಾನಿಯ ಸಂಸದೀಯ ನಡವಳಿಕೆ ಆಪ್ಯಾಯಮಾನವಾಗಿ ಕಾಣುತ್ತಿದೆ. ಅನಂತಕುಮಾರ ಕೂಡಾ ಅಷ್ಟೆÃ. ಬಾಯಿಗೆ ಬಂದ ಹಾಗೆ ಮಾತಾಡುವ, ಬೆಂಕಿ ಇಡುವ ಅಸಭ್ಯ ಮಾತೇ ನಾಯಕತ್ವದ ಲಕ್ಷಣ ಎಂಬಂತೆ ವರ್ತಿಸುವ ಹಿಂದುತ್ವದ ಪಡ್ಡೆ ಸ್ವಭಾವದೆದುರು, ಅನಂತಕುಮಾರ್ ತಾವು ರೂಢಿಸಿಕೊಂಡು ಬಂದಿದ್ದ ತಾಳ್ಮೆ, ಭಾಷೆಯ ಸಂಯಮ, ಸಂವಾದದ ಜಾಣ್ಮೆಯ ಕಾರಣಕ್ಕೆ ಈಗ ಹಿತವಾಗಿ ಕಾಣಿಸುತ್ತಿದ್ದಾರೆ. ನಮ್ಮ ಕಾಲದ ಪ್ರಭಾವ ಇದು. ನಾಲಗೆ ಅಷ್ಟಾಗಿ ಸಡಿಲು ಬಿಡದ ಅನಂತಕುಮಾರ್ ವಿವಾದಾತ್ಮಕ ವಿಷಯಗಳು ಬಂದಾಗ ಮೆತ್ತಗೆ ದೂರ ಉಳಿವ ಜಾಣ್ಮೆ ಉಳ್ಳವರು. ಮೈಕ್ ಕಂಡ ತಕ್ಷಣ ಬೆದೆಗೆ ಬಂದ ಹೋರಿಗಳ ತರ ಆಡುವ ಇತರರ ಎದುರು ಅನಂತಕುಮಾರ್ ಪರವಾಗಿಲ್ಲ ಅನ್ನಿಸುತ್ತದೆ.
ಇನ್ನು ಆಡಳಿತಾತ್ಮಕ ದಕ್ಷತೆ ಇತ್ಯಾದಿಗಳು ಹೀಗೆ ನೀಗಿಕೊಂಡಾಗ ಮುನ್ನೆಲೆಗೆ ಬರುವ ಸಂಗತಿ. ಮೋದಿ ಸರ್ಕಾರದ ದುಸ್ಥಿತಿ ಹೇಗಿದೆಯೆಂದರೆ ಬೆರಳೆಣಿಕೆಯ ಸಚಿವರು ಬಿಟ್ಟರೆ ಉಳಿದವರ ಹೆಸರೂ ಜನರಿಗೆ ಗೊತ್ತಿಲ್ಲ. ಈ ದೃಷ್ಟಿಯಲ್ಲಿ ಅನಂತ್ ಕುಮಾರ್ ಸುಮಾರಾಗಿ ಕೆಲಸ ನಿರ್ವಹಿಸಿದ್ದಾರೆ. ಅದಕ್ಕಿಂತಲೂ ಈಗ ಅವರ ಬಗ್ಗೆ ಸದಭಿಪ್ರಾಯ ಮೂಡಿರುವುದು ದೆಹಲಿಯ ಚಕ್ರವ್ಯೂಹದಲ್ಲಿ ಕನ್ನಡ/ ಕರ್ನಾಟಕದ ಕೆಲಸಗಳ ಬಗ್ಗೆ ವೈಯಕ್ತಿಕ ನೆಲೆಯಲ್ಲಿ ಸ್ಪಂದಿಸಿದ ಬಗ್ಗೆ. ಹಲವಾರು ಹೆಸರಾಂತ ವ್ಯಕ್ತಿಗಳ ಜೊತೆ ಅನಾಮಿಕರೂ ತಮಗೆ ಅನಂತಕುಮಾರ್ ಸ್ಪಂದಿಸಿದ ಬಗ್ಗೆ ಬರೆದಿದ್ದಾರೆ. ಈ ಗುಡ್‌ವಿಲ್ ರಾಜಕಾರಣಿಗೆ ಆಪತ್ಕಾಲದ ಗಂಟು. ಮುಖ್ಯತಃ ಪಕ್ಷ/ ಸೈದ್ಧಾಂತಿಕ ವಿರೋಧಿಗಳ ಜೊತೆಯೂ ಒಂದು ಕಿಂಡಿ ಸದಾ ತೆರೆÀದಿಟ್ಟುಕೊಂಡ ವ್ಯಕ್ತಿ ಅನಂತಕುಮಾರ್.
“ಬರಡು ಬಯಲಲ್ಲಿ ತುಂಬೆ ಗಿಡವೂ ಮರವೇ..” ಎಂಬ ಮಾತಿದೆ. ಹಿಂದುತ್ವದ ಅಮಾನುಷ ವಿಕೃತಿಯ ಪ್ರೆÃತಕುಣಿತದ ನಡುವೆ ಸೌಜನ್ಯದ ಸಂವಾದದ ಕಲೆ ರೂಢಿಸಿಕೊಂಡಿದ್ದ ಅನಂತಕುಮಾರ್ ಹೊಂಗೆ ಮರದ ಹಾಗೆ ಕಂಡಿದ್ದು ಅಚ್ಚರಿ ಅಲ್ಲ. ದೊಡ್ಡ ನಾಯಕನ ವಿಶಿಷ್ಟ ಗುಣ ಅವರಲ್ಲಿ ಕಾಣಿಸಲಿಲ್ಲ. ದಿವಾನರ ಶೈಲಿಯ ಪ್ರಭಾವಿ ಗುಣವಷ್ಟೆÃ ಅವರಲ್ಲಿದ್ದದ್ದು. ಯುವಜನರಿಗೆ ಸ್ಪಂದಿಸುವ ಸುವರ್ಣಾವಕಾಶ ತಟ್ಟೆಯಲ್ಲಿಟ್ಟು ಕೊಟ್ಟಾಗಲೂ ಕೆಡವಿ ಕೂತ ಅನಂತಕುಮಾರ ಹೆಗ್ಡೆಯಂಥಾ ಅಪ್ರಬುದ್ಧರನ್ನು ಕಂಡಾಗ ಈ ಸೀನಿಯರ್ ಅನಂತಕುಮಾರ್ ಗಮನ ಸೆಳೆಯುತ್ತಾರೆ!!! ಪುಣ್ಯಕ್ಕೆ ಅವರು ಅಧ್ವಾನಿ, ಯೆಡಿಯೂರಪ್ಪನವರ ತರ ನಿಸ್ತೆÃಜಗೊಂಡು ನಿರ್ಗಮನದ ಸಿದ್ಧತೆಯಲ್ಲಿರುವ ನಾಯಕನ ತರ ಕಾಣಿಸಲಿಲ್ಲ. ಉತ್ತುಂಗದಲ್ಲಿ ನಿರ್ಗಮಿಸಬೇಕು ಎನ್ನುವ ಆಸೆ ಮನುಷ್ಯನಿಗಿರುತ್ತದೆ. ಆದರೆ ಅದು ಕೈಗೂಡುವುದು ಕಡಿಮೆ. ಈ ಕಾಲದಲ್ಲಿ ಹರಿ ಚಿತ್ತವೆಂಬುದು ಪ್ರಜಾ ಚಿತ್ತ. ಆದರೆ ಅನಂತಕುಮಾರ್ ವಿಷಯದಲ್ಲಿ ವಿಧಿ ಕೊಂಚ ಕ್ರೂರವಾಯಿತು.

  • ಕೆ.ಪಿ.ಸುರೇಶ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...