Homeರಾಜಕೀಯಅನಂತಕುಮಾರ್ ಏಕೆ ಎಲ್ಲರ ಶ್ರದ್ಧಾಂಜಲಿ ಪಡೆದರು?

ಅನಂತಕುಮಾರ್ ಏಕೆ ಎಲ್ಲರ ಶ್ರದ್ಧಾಂಜಲಿ ಪಡೆದರು?

- Advertisement -
- Advertisement -

ಕೇಂದ್ರ ಸಚಿವ, ಕರ್ನಾಟಕದ ಭಾಜಪ ನಾಯಕ ಅನಂತಕುಮಾರ್ ಅವರು ಅಕಾಲಿಕ ನಿಧನ ಹೊಂದಿದ್ದಾರೆ. ಅವರ ಸಾವಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ, ಶ್ರದ್ಧಾಂಜಲಿಗಳ ಮಹಾಪೂರವೇ ಹರಿದು ಬರುತ್ತಿದೆ. ಅಚ್ಚರಿ ಎಂದರೆ ಅವರ ಭಾಜಪ ಅಭಿಮಾನಿಗಳಷ್ಟೆÃ ಅವರ ತಾತ್ವಿಕ ವಿರೋಧಿಗಳೂ ನಮನ ಸಲ್ಲಿಸುತ್ತಿದ್ದಾರೆ. ಸಾವಿನ ಸಂದರ್ಭದಲ್ಲಿ ಕುಹಕದ ವಿಕೃತಿಗಳು ಇರಕೂಡದು ಎಂಬ ನಡವಳಿಕೆ ಎಲ್ಲಾ ನಾಗರಿಕತೆಗಳಲ್ಲೂ ಇದೆ. ನಮ್ಮಲ್ಲೂ ಅಳಿದಿಲ್ಲ ಎಂಬುದು ಗಮನಾರ್ಹ.
ಈ ಗೌರವ ಸಲ್ಲಿಕೆ ಅನಂತಕುಮಾರ್ ಅವರ ರಾಜಕೀಯ, ತಾತ್ವಿಕ ವಿರೋಧಿಗಳಿಂದ ಬಂದಿದೆ ಎಂಬುದು ಈ ಮಂದಿಯ ಸಾಂಸದಿಕ ನಡವಳಿಕೆಯನ್ನು ತೋರಿಸುತ್ತದೆ. ಹಲವರು ಗಮನಿಸಿದಂತೆ, ಇದೇ ಕಾಂಗ್ರೆಸ್‌ನ ಯಾರಾದರೂ ಸತ್ತಿದ್ದರೆ, ಭಾಜಪ/ ಹಿಂದುತ್ವ ಬಳಗದ ವಿಕೃತರ ಪೈಶಾಚಿಕ ಪೋಸ್ಟ್ಗಳು ಹೇಗಿರುತ್ತಿದ್ದವು ಎಂದು ಊಹಿಸಲೂ ಸಾಧ್ಯವಿಲ್ಲ. ಅಷ್ಟರಮಟ್ಟಿಗೆ ಈ ಸಂತಾಪ ತೋರಿದ ಭಾಜಪ ವಿರೋಧಿಗಳೇ ಈ ದೇಶದ ಪ್ರಜಾಸತ್ತೆಯನ್ನು ಉಳಿಸುವ ಶಕ್ತಿ.
ಅನಂತಕುಮಾರ್ ಅವರಿಗೆ ಈ ಶ್ರದ್ಧಾಂಜಲಿ ಹೇಗೆ ಹರಿದುಬಂತು? ಕಾಟಾಚಾರಕ್ಕೊÃ, ಹಿಂದುತ್ವದ ವಿಕೃತರ ಎದುರು, ‘ನಾವು ನೋಡಿ ಎಷ್ಟು ಶಿಷ್ಟವಾಗಿ ಪ್ರತಿಕ್ರಿಯಿಸುತ್ತಿದ್ದೆÃವೆ’ ಎಂಬ ತೋರುಗಾಣಿಕೆ ಈ ಪೋಸ್ಟುಗಳಲ್ಲಿ ಕಾಣಿಸಲಿಲ್ಲ. ಇದರರ್ಥ ಅನಂತಕುಮಾರ್ ವ್ಯಕ್ತಿತ್ವ ಯಾವುದೋ ಬಗೆಯಲ್ಲಿ ನಮ್ಮನ್ನು ತಟ್ಟಿದೆ.
ನಮ್ಮ ಸಾಮಾಜಿಕ ,ರಾಜಕೀಯ ಬದುಕಿನಲ್ಲಿ ದಿನಗಳೆದಂತೆ ಕೆಡುತ್ತಿದೆ, ಮೌಲ್ಯಗಳು ಶಿಥಿಲವಾಗುತ್ತಿದೆ ಎಂಬ ನಂಬಿಕೆ ದೃಢವಾಗುವಂಥಾ ಪುರಾವೆಗಳು ಹಿಡಿಯುತ್ತಲೇ ಇವೆ. ಇದನ್ನು ಠಿಡಿogಡಿessive ಆegeಟಿeಡಿಚಿಣioಟಿ ಅಂತ ಕರೆಯುವುದಿದೆ. ಅಂದರೆ ಒಂದು ನಾಗರಿಕತೆ ವಿಕಾಸಗೊಂಡು ಉತ್ತಮವಾಗುವ ಬದಲು ದಿನೇ ದಿನೇ ಇನ್ನಷ್ಟು ಕೆಡುತ್ತಾ, ಕೊಳೆಯುತ್ತಾ ಹೋಗುತ್ತಿದೆ ಎಂಬ ಹತಾಶೆ ಇದು. ಹಿಂದಿನ ಕಾಲ ಎಷ್ಟು ಚೆನ್ನಾಗಿತ್ತು ಎಂಬ ಹಿನ್ನೊÃಟದ ಹಳಹಳಿಕೆ ಎಲ್ಲಾ ತಲೆಮಾರಿಗೂ ಇದೆ. ಆದರೆ ಈ ದುಗುಡ ಅದಕ್ಕಿಂತ ಗುಣಾತ್ಮಕವಾಗಿ ಭಿನ್ನ. ಅಂದರೆ ಹಿಂದಿನದ್ದಕ್ಕಿಂತ ಈಗಿರುವುದು ಇನ್ನಷ್ಟು ಕೆಡುಕಾಗಿ ತೋರುವ ಬಗೆ. ಗುಂಡೂರಾವ್ ಬಂದಾಗ ಅರಸು ಬೆಟರ್ ಅನ್ನಿಸುತ್ತೆ. ಮೋದಿ ಕಂಡಾಗ ಇಂದಿರಾ ಕೊಡುಗೆ ಕಾಡುತ್ತದೆ. ಹೀಗೆ.. (ಸ್ವತಃ ಮೋದಿಯಂಥವರಿಗೆ ಈ ಚಾರಿತ್ರಿಕ ಗ್ರಹಿಕೆ ಅರ್ಥವಾಗುವುದಿಲ್ಲ, ಅದು ಬೇರೆ ಮಾತು.)
ನಾಗರಿಕತೆಯ ಮಾನದಂಡದಲ್ಲಿ ಹಿಂದಿನದ್ದು ಉತ್ತಮ ಎಂಬ ಗ್ರಹಿಕೆಗೆ ಇಂಬು ನೀಡುವಂಥಾ ನಡಾವಳಿಗಳು ಜರುಗಿದಷ್ಟೂ ಸಾಮೂಹಿಕ ಸ್ಮೃತಿಯಲ್ಲಿ ಇದು ಗಟ್ಟಿಯಾಗುತ್ತಾ ಹೋಗುತ್ತದೆ. ಈ ಮಾನದಂಡವನ್ನು ಪ್ರಜೆಗಳು ನಿರ್ವಚಿಸುವ ರೀತಿ ಸುಲಭ ಅಕಡೆಮಿಕ್ ಗ್ರಹಿಕೆಗೆ ನಿಲುಕುವಂಥಾದ್ದಲ್ಲ.
ಅನಂತಕುಮಾರ್ ಅವರ ಸಾವಿನ ಹಿನ್ನೆಲೆಯಲ್ಲಿ ಇದು ಪ್ರಸ್ತುತ. ಸ್ವತಃ ಅನಂತಕುಮಾರ್, ಅಧ್ವಾನಿಯವರು ಕಟ್ಟೆಯೊಡೆದು ಬಿಟ್ಟ ರೂಕ್ಷ ಕೋಮು ಧ್ರುವೀಕರಣದ ಕೂಸು. ಆದರೆ ಅನಂತಕುಮಾರ್ ಈ ಕೋಮು ಕಿರುಚಾಟದ ಭಾಗವಾಗಿರಲಿಲ್ಲ. ಅದರ ಸೂತ್ರಧಾರರಾಗಿದ್ದರು. ಹಲವರು ಗುರುತಿಸಿದಂತೆ ಅವರು ತೆರೆಮರೆಯ ಕೆಲಸಗಾರ. ‘90ರ ದಶಕದಲ್ಲಿ ನಿಷ್ಕರುಣ ಲೆಕ್ಕಾಚಾರದ ರಾಜಕಾರಣದ ಪ್ರತೀಕವಾಗಿ ಕಂಡಿದ್ದ ಅದ್ವಾನಿ ಮೋದಿ ಆಗಮನದ ಬಳಿಕ ಬಸವಳಿದ ಪಾಳೇಗಾರನ ತರ ಕಾಣುತ್ತಿದ್ದಾರೆ. ಅದ್ವಾನಿಯ ಸಂಸದೀಯ ನಡವಳಿಕೆ ಆಪ್ಯಾಯಮಾನವಾಗಿ ಕಾಣುತ್ತಿದೆ. ಅನಂತಕುಮಾರ ಕೂಡಾ ಅಷ್ಟೆÃ. ಬಾಯಿಗೆ ಬಂದ ಹಾಗೆ ಮಾತಾಡುವ, ಬೆಂಕಿ ಇಡುವ ಅಸಭ್ಯ ಮಾತೇ ನಾಯಕತ್ವದ ಲಕ್ಷಣ ಎಂಬಂತೆ ವರ್ತಿಸುವ ಹಿಂದುತ್ವದ ಪಡ್ಡೆ ಸ್ವಭಾವದೆದುರು, ಅನಂತಕುಮಾರ್ ತಾವು ರೂಢಿಸಿಕೊಂಡು ಬಂದಿದ್ದ ತಾಳ್ಮೆ, ಭಾಷೆಯ ಸಂಯಮ, ಸಂವಾದದ ಜಾಣ್ಮೆಯ ಕಾರಣಕ್ಕೆ ಈಗ ಹಿತವಾಗಿ ಕಾಣಿಸುತ್ತಿದ್ದಾರೆ. ನಮ್ಮ ಕಾಲದ ಪ್ರಭಾವ ಇದು. ನಾಲಗೆ ಅಷ್ಟಾಗಿ ಸಡಿಲು ಬಿಡದ ಅನಂತಕುಮಾರ್ ವಿವಾದಾತ್ಮಕ ವಿಷಯಗಳು ಬಂದಾಗ ಮೆತ್ತಗೆ ದೂರ ಉಳಿವ ಜಾಣ್ಮೆ ಉಳ್ಳವರು. ಮೈಕ್ ಕಂಡ ತಕ್ಷಣ ಬೆದೆಗೆ ಬಂದ ಹೋರಿಗಳ ತರ ಆಡುವ ಇತರರ ಎದುರು ಅನಂತಕುಮಾರ್ ಪರವಾಗಿಲ್ಲ ಅನ್ನಿಸುತ್ತದೆ.
ಇನ್ನು ಆಡಳಿತಾತ್ಮಕ ದಕ್ಷತೆ ಇತ್ಯಾದಿಗಳು ಹೀಗೆ ನೀಗಿಕೊಂಡಾಗ ಮುನ್ನೆಲೆಗೆ ಬರುವ ಸಂಗತಿ. ಮೋದಿ ಸರ್ಕಾರದ ದುಸ್ಥಿತಿ ಹೇಗಿದೆಯೆಂದರೆ ಬೆರಳೆಣಿಕೆಯ ಸಚಿವರು ಬಿಟ್ಟರೆ ಉಳಿದವರ ಹೆಸರೂ ಜನರಿಗೆ ಗೊತ್ತಿಲ್ಲ. ಈ ದೃಷ್ಟಿಯಲ್ಲಿ ಅನಂತ್ ಕುಮಾರ್ ಸುಮಾರಾಗಿ ಕೆಲಸ ನಿರ್ವಹಿಸಿದ್ದಾರೆ. ಅದಕ್ಕಿಂತಲೂ ಈಗ ಅವರ ಬಗ್ಗೆ ಸದಭಿಪ್ರಾಯ ಮೂಡಿರುವುದು ದೆಹಲಿಯ ಚಕ್ರವ್ಯೂಹದಲ್ಲಿ ಕನ್ನಡ/ ಕರ್ನಾಟಕದ ಕೆಲಸಗಳ ಬಗ್ಗೆ ವೈಯಕ್ತಿಕ ನೆಲೆಯಲ್ಲಿ ಸ್ಪಂದಿಸಿದ ಬಗ್ಗೆ. ಹಲವಾರು ಹೆಸರಾಂತ ವ್ಯಕ್ತಿಗಳ ಜೊತೆ ಅನಾಮಿಕರೂ ತಮಗೆ ಅನಂತಕುಮಾರ್ ಸ್ಪಂದಿಸಿದ ಬಗ್ಗೆ ಬರೆದಿದ್ದಾರೆ. ಈ ಗುಡ್‌ವಿಲ್ ರಾಜಕಾರಣಿಗೆ ಆಪತ್ಕಾಲದ ಗಂಟು. ಮುಖ್ಯತಃ ಪಕ್ಷ/ ಸೈದ್ಧಾಂತಿಕ ವಿರೋಧಿಗಳ ಜೊತೆಯೂ ಒಂದು ಕಿಂಡಿ ಸದಾ ತೆರೆÀದಿಟ್ಟುಕೊಂಡ ವ್ಯಕ್ತಿ ಅನಂತಕುಮಾರ್.
“ಬರಡು ಬಯಲಲ್ಲಿ ತುಂಬೆ ಗಿಡವೂ ಮರವೇ..” ಎಂಬ ಮಾತಿದೆ. ಹಿಂದುತ್ವದ ಅಮಾನುಷ ವಿಕೃತಿಯ ಪ್ರೆÃತಕುಣಿತದ ನಡುವೆ ಸೌಜನ್ಯದ ಸಂವಾದದ ಕಲೆ ರೂಢಿಸಿಕೊಂಡಿದ್ದ ಅನಂತಕುಮಾರ್ ಹೊಂಗೆ ಮರದ ಹಾಗೆ ಕಂಡಿದ್ದು ಅಚ್ಚರಿ ಅಲ್ಲ. ದೊಡ್ಡ ನಾಯಕನ ವಿಶಿಷ್ಟ ಗುಣ ಅವರಲ್ಲಿ ಕಾಣಿಸಲಿಲ್ಲ. ದಿವಾನರ ಶೈಲಿಯ ಪ್ರಭಾವಿ ಗುಣವಷ್ಟೆÃ ಅವರಲ್ಲಿದ್ದದ್ದು. ಯುವಜನರಿಗೆ ಸ್ಪಂದಿಸುವ ಸುವರ್ಣಾವಕಾಶ ತಟ್ಟೆಯಲ್ಲಿಟ್ಟು ಕೊಟ್ಟಾಗಲೂ ಕೆಡವಿ ಕೂತ ಅನಂತಕುಮಾರ ಹೆಗ್ಡೆಯಂಥಾ ಅಪ್ರಬುದ್ಧರನ್ನು ಕಂಡಾಗ ಈ ಸೀನಿಯರ್ ಅನಂತಕುಮಾರ್ ಗಮನ ಸೆಳೆಯುತ್ತಾರೆ!!! ಪುಣ್ಯಕ್ಕೆ ಅವರು ಅಧ್ವಾನಿ, ಯೆಡಿಯೂರಪ್ಪನವರ ತರ ನಿಸ್ತೆÃಜಗೊಂಡು ನಿರ್ಗಮನದ ಸಿದ್ಧತೆಯಲ್ಲಿರುವ ನಾಯಕನ ತರ ಕಾಣಿಸಲಿಲ್ಲ. ಉತ್ತುಂಗದಲ್ಲಿ ನಿರ್ಗಮಿಸಬೇಕು ಎನ್ನುವ ಆಸೆ ಮನುಷ್ಯನಿಗಿರುತ್ತದೆ. ಆದರೆ ಅದು ಕೈಗೂಡುವುದು ಕಡಿಮೆ. ಈ ಕಾಲದಲ್ಲಿ ಹರಿ ಚಿತ್ತವೆಂಬುದು ಪ್ರಜಾ ಚಿತ್ತ. ಆದರೆ ಅನಂತಕುಮಾರ್ ವಿಷಯದಲ್ಲಿ ವಿಧಿ ಕೊಂಚ ಕ್ರೂರವಾಯಿತು.

  • ಕೆ.ಪಿ.ಸುರೇಶ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...