Homeಕರ್ನಾಟಕಅನಂತ್ಮಾಣಿ v/s ಸೂಲಿಬೆಲೆ, ಇದು ಟಿಕೆಟ್ ಕೈತಪ್ಪಿದ ಕದನ

ಅನಂತ್ಮಾಣಿ v/s ಸೂಲಿಬೆಲೆ, ಇದು ಟಿಕೆಟ್ ಕೈತಪ್ಪಿದ ಕದನ

- Advertisement -
- Advertisement -

| ಶುದ್ಧೋದನ |

ಉತ್ತರಕನ್ನಡದ ಸೋಶಿಯಲ್ ಮೀಡಿಯಾದಲ್ಲೀಗ ಕೇಸರಿ ಕುಮಾರರಿಬ್ಬರ ಗುದಮುರಗಿ ಜೋರು ಸದ್ದು ಮಾಡುತ್ತಿದೆ. ಬಿಜೆಪಿ ಸಂಸದ ಅನಂತ್‍ಕುಮಾರ್ ಹೆಗ್ಡೆ ಮತ್ತು ಕೇಸರಿ ಭಾಷಣ`ಕೋರ’ ಚಕ್ರವರ್ತಿ ಸೂಲಿಬೆಲೆ ಒಬ್ಬರಿಗೊಬ್ಬರು ಕೆಸರು ಎರಚಿಕೊಳ್ಳುತ್ತಿರೋದು ರೋಚಕವಿದೆ. ಹಾಗೆ ನೋಡಿದರೆ ಮೊನ್ನೆ ಮುಗಿದ ಇಲೆಕ್ಷನ್ ಸಂದರ್ಭದಲ್ಲೇ ಮಾಣಿಗೆ ಟಿಕೆಟ್ ಕೊಡಬಾರದೆಂದು ದೊಡ್ಡ ಕೂಗೆದ್ದಿತ್ತು. ಆತನ ಬದಲಿಗೆ ನಮೋ ಬ್ರಿಗೇಡ್‍ನ ಪ್ರೊಪ್ರೇಟರ್ ಚಕ್ರವರ್ತಿ ಸೂಲಿಬೆಲೆ ಹೆಸರು ತೇಲಿ ಬಂದಿತ್ತು. ಸ್ಥಳೀಯ ಆರೆಸ್ಸೆಸ್-ಹಿಂಜಾವೇ ಪಡೆಯೇ ಮಾಣಿ ವಿರುದ್ಧ ಮುರಕೊಂಡು ಬಿದ್ದಿತ್ತು. ಮತದಾರರು ಮತ್ತು ಬಿಜೆಪಿ ಕಾರ್ಯಕರ್ತರ ತಿರಸ್ಕಾರ, ತಾತ್ಸಾರಕ್ಕೆ ತುತ್ತಾಗಿರುವ ಮಾಣಿಗೆ ಟಿಕೆಟ್ ಕೊಡಬಾರದೆಂದು ಉತ್ತರ ಕನ್ನಡದ ಆರೆಸ್ಸೆಸ್‍ನ ಒಂದು ತಂಡ ಪ್ರಬಲ ಹೋರಾಟ ಮಾಡಿತ್ತು. ಉತ್ತರ ಕನ್ನಡ ಸಂಘಪರಿವಾರದ ಕಲ್ಲಡ್ಕ, ಹನ್ಮಂತ ಶಾನಭಾಗ್ ಎರಡೂ ಕಡೆ “ಆಟ” ಆಡಿದ್ದರು.

ಅಂತಿಮವಾಗಿ ಮಾಣಿಗೇ ಟಿಕೆಟ್ ಸಿಕ್ಕಿತು. ಆತ ಗೆದ್ದೂ ಬಿಟ್ಟ. ಆದರೆ ಬಿಜೆಪಿ ಒಳಮನೆಯ ಬೇಗುದಿ ಕಮ್ಮಿ ಆಗಲಿಲ್ಲ. ಸೂಲಿಬೆಲೆ ಟೀಮಂತೂ ಮೋದಿ ಮತ ಭಿಕ್ಷೆಯಿಂದ ಗೆದ್ದಿರುವ ಮಾಣಿ ಧೀಮಾಕಿಂದ ಬೀಗುವುದು ಬೇಕಾಗಿಲ್ಲ ಎಂಬ ರಹಸ್ಯ ಅಭಿಯಾನವನ್ನೇ ಹುಟ್ಟುಹಾಕಿತು! ಮಾಣಿ ಮಾಡಿದ ಜನದ್ರೋಹದ ಪಾಪಕ್ಕೇ ಮಂತ್ರಿಯಾಗದೆ ಮೂಲೆ ಪಾಲಾಗಿದ್ದಾನೆಂದು ಆತನ ವಿರೋಧಿ ಬಳಗ ತಿವಿಯತೊಡಗಿತ್ತು. ಇದೆಲ್ಲದರಿಂದ ಮಾಣಿ ಕೊತಕೊತ ಕುದಿಯುತ್ತಲೇ ಇದ್ದ. ತನಗೆ ಅಡ್ಡಗಾಲು ಹಾಕಿದವರನ್ನೆಲ್ಲಾ ಒಬ್ಬೊಬ್ಬರಾಗಿ ಸಂಹರಿಸಲು ಆತ ಸ್ಕೆಚ್ ರೆಡಿಮಾಡಿಕೊಂಡಿದ್ದ. ಸಂಘಪರಿವಾರದಲ್ಲಿ ತನಗಿರುವ ಸಂಪರ್ಕ ಬಳಸಿಕೊಂಡು ಮಾಣಿ ಈಗ ಜಿಲ್ಲಾ ಚೆಡ್ಡಿ ಪಡೆಯಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸುತ್ತಿದ್ದಾನೆ. ತನಗೆ ವಿರೋಧ ಮಾಡಿದ ಜಿಲ್ಲಾ ಆರೆಸ್ಸೆಸ್, ಹಿಂಜಾವೇ ಮುಖಂಡರನ್ನು ಸಂಘಟನೆಯ ಹುದ್ದೆಗಳಿಂದ ಕಿತ್ತುಹಾಕಿಸುತ್ತಿದ್ದಾನೆ. ಈಗಾಗಲೇ ಜಿಲ್ಲಾಮಟ್ಟದ ಒಬ್ಬ ಕಾರ್ಯವಾಹಕ ಮತ್ತು ಭಟ್ಕಳದ ಆರೆಸ್ಸೆಸ್ ಲೀಡರ್‍ಗೆ ಸ್ಥಾನ ಚ್ಯುತಿ ಮಾಡಲಾಗಿದೆ. ಎಲ್ಲಾ ತಾಲ್ಲೂಕಿನ ಬಿಜೆಪಿ-ಆರೆಸ್ಸೆಸ್‍ನಲ್ಲಿ ಮಾಣಿ ಮಾರಿಹಬ್ಬ ನಡೆಯಲಿದೆ!

ಇನ್ನೊಂದೆಡೆ ಮಾಣಿ ಬಂಡವಾಳ ಬಯಲು ಮಾಡುವ ಆನ್‍ಲೈನ್ ಕಸರತ್ತು ನಡೆಯಲಾರಂಭಿಸಿದೆ. ಚಕ್ರವರ್ತಿ ಸೂಲಿಬೆಲೆ, ಮಾಣಿ ಅಯೋಗ್ಯತೆಯನ್ನು ವ್ಯವಸ್ಥಿತವಾಗಿ ಜಗಜ್ಜಾಹೀರು ಮಾಡುತ್ತಿದ್ದಾನೆ. ಉತ್ತರ ಕನ್ನಡದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಯ ಸೋಷಿಯಲ್ ಮೀಡಿಯಾ ಅಭಿಯಾನ ತನ್ನ ತೇಜೋವಧೆ ಮಾಡುವ ಹಿಕಮತ್ತೆಂಬ ಭಾವನೆ ಮಾಣಿಯದು. ಆಸ್ಪತ್ರೆ ಆಗದಿರುವುದು ಸಂಸದನ ಅಸಾಮಥ್ರ್ಯ ಬಿಂಬಿಸುತ್ತಿದೆ ಎಂಬಂತೆ ಪ್ರಚಾರ ಮಾಡಲಾಗಿತ್ತು. ಇದರ ಹಿಂದೆ ತನ್ನ ಹಿತಶತೃ ಸೂಲಿಬೆಲೆ ಇದ್ದಾನೆಂಬ ಖಚಿತ ನಂಬಿಕೆ ಮಾಣಿಯದು. ಹಾಗಾಗಿ ಆತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಇಡುವವರನ್ನೇ ತನ್ನ ಟ್ವಿಟರ್ ಖಾತೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು. ಅಷ್ಟೇ ಅಲ್ಲ, ಆಸ್ಪತ್ರೆಗಾಗಿ ಮನವಿ ಹಿಡಿದುಕೊಂಡು ಬಂದ ಹುಡುಗರಿಗೆ ರೇಗಿ ಸೋಷಿಯಲ್ ಮೀಡಿಯಾದವರಿಂದಲೇ ಆಸ್ಪತ್ರೆ ಮಾಡಿಸಿಕೊಳ್ಳಿ ಎಂದಬ್ಬರಿಸಿದ್ದ.

ಈ ಜಗಳ ಸೂಲಿಬೆಲೆ ಮತ್ತು ಅನಂತ್ಮಾಣಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಾಚಾಮಗೋಚರವಾಗಿ ಬೈದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ. ಇವರ ಕಾಲೆಳೆದಾಟ ಫೇಸ್ಬುಕ್, ವಾಟ್ಸಾಪ್‍ನಲ್ಲಿ ಕದನ ಕುತೂಹಲ ಕೆರಳಿಸಿದೆ. ಗೆದ್ದವರ ಈ ಗದ್ದಲ ವಿರೋಧ ಪಕ್ಷಗಳಿಗೆ ಮಜಾ ನೀಡುತ್ತಿದ್ದರೆ, ಬಿಜೆಪಿಯಲ್ಲಿ ಮುಜುಗರ ಮೂಡಿಸಿದೆ.

ಇದೆಲ್ಲದರಿಂದ ಒಂದು ಹಂತದಲ್ಲಿ ತಬ್ಬಿಬ್ಬಾದ ಸೂಲಿಬೆಲೆ ಜಗಳ ಸಾಕು, ಕೆಲಸ ಮಾಡೋಣ ಎಂಬ ಟ್ವೀಟ್ ಮಾಡಿದರೂ ಆರೋಪ-ಪ್ರತ್ಯಾರೋಪದ ಬಯಲಾಟ ಮಾತ್ರ ನಿಂತಿಲ್ಲ. ಮೋದಿ ಮತ ಭಿಕ್ಷೆಯಿಂದ ಗೆದ್ದ ಸಂಸದರು ಧಿಮಾಕು ತೋರಿಸದೆ ಕೆಲಸ ಮಾಡಬೇಕು ಎಂದು ಸೂಲಿಬೆಲೆ ಟ್ವಿಟಿಸಿದ್ದೇ ಬಿಜೆಪಿಯಲ್ಲಿ ಕಂಪನ ಸೃಷ್ಠಿಯಾಗಲು ಮೂಲಕಾರಣ. ಸದಾನಂದ ಗೌಡ, ಶೋಭಾ ಕರಂದ್ಲಾಜೆಯಂಥ ದೊಡ್ಡವರೆ ಸೂಲಿಬೆಲೆ ಮಾತಿಂದ ಕೆರಳಿ ಕೆಂಡವಾದರು. ನಮಗೆ ಬುದ್ಧಿ ಹೇಳಲು ಚಕ್ರವರ್ತಿ ಯಾರು? ಎಂದು ಎಗರಾಡಿದರು.

ತನಗೆ ಟಿಕೆಟ್ ತಪ್ಪಲು ಕಾರಣವಾದ ನಾಯಕರನ್ನು ನಿರ್ದಿಷ್ಟವಾಗಿ ಗುರಿಮಾಡಿಕೊಂಡೇ ಸೂಲಿಬೆಲೆ ಸಂಸದರ ಬಣ್ಣ ಬಯಲಾಗಿಸುತ್ತಿದ್ದಾನೆ. ಇದು ಬಿಜೆಪಿಯ ಅಧಿಕಾರಸ್ಥರ ಚೇಲಾಗಳನ್ನು ಕೆರಳಿಸಿದೆ. ಜನಪ್ರತಿನಿಧಿಗಳು ಕೆಲಸ ಮಾಡಲಿ ಎಂದು ಹೇಳೋದು ತಪ್ಪೇನಲ್ಲ. ಆದರೆ ಹಾಗೆ ಹೇಳಿದ್ದು ಸೂಲಿಬೆಲೆಯಾದ್ದರಿಂದ ಬಿಜೆಪಿಯಲ್ಲಿ ಬೆಂಕಿಹೊತ್ತಿಕೊಂಡಿತು. ತನ್ನಿಂದಾಗಿಯೇ ಕರ್ನಾಟಕದಲ್ಲಿ ಬಿಜೆಪಿಯ 25 ಸಂಸದರು ಗೆದ್ದಿದ್ದಾರೆಂದು ಸೂಲಿಬೆಲೆ ಹೇಳಿದ್ದಾನೆಂದು ಕಿಡಿ ಹೊತ್ತಿಸಲಾಯಿತು. ಸೂಲಿಬೆಲೆ ಹಾಗೆ ಹೇಳಿಯೇ ಇಲ್ಲವೆಂದು ಆತನ ಬೆಂಬಲಿಗ ನೆಟ್ಟಿಗರ ವಾದ. ಅಸಲಿಗೆ ಆತ ಹಾಗೆ ಹೇಳಿಯೂ ಇರಲಿಲ್ಲ, ಅಂಥ ಸಂದೇಶವೂ ಲಭ್ಯವಿಲ್ಲ. ಆರು ಸಲ ಸಂಸದರಾದವರಿಗೆ, ಎಂಟು ಸಲ ಮಂತ್ರಿಯಾದವರಿಗೆ ಜನಸಾಮಾನ್ಯರ ಅಳಲಿಗೆ ಸ್ಪಂದಿಸಲಾಗದಾ? ಎಂದಾತ ಟ್ವಿಟಿಸಿದ್ದನಷ್ಟೇ. ಇದು ಮಾಣಿಗೆ ಚೆಡ್ಡಿಯೊಳಗೆ ಇರುವೆ ಕಡಿದಂತೆ ಚಡಪಡಿಕೆ ತಂದಿದೆ.

ಇದರ ಬೆನ್ನಿಗೇ ಕೊಡಗಿನಲ್ಲೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿತ್ತು. ಅದಕ್ಕೆ ಅಲ್ಲಿಯ ಸಂಸದ ತಕ್ಷಣ ಸ್ಪಂದಿಸಿದ್ದಾರೆ. ಉ.ಕನ್ನಡದ ಎಂಪಿ ಒಣ ರುಬಾಬು ಮಾಡುತ್ತ ತಲೆ ತಪ್ಪಿಸಿಕೊಳ್ಳುತ್ತಿದ್ದ. ಈ ಹೊತ್ತಲ್ಲಿ ಸೂಲಿಬೆಲೆ ಮಾಡಿದ ಟ್ವೀಟ್ ಮಾಣಿ ಬೆಂಬಲಿಗರಲ್ಲಿ ಆಕ್ರೋಶ ಮೂಡಿಸಿದೆ. ಈಗ ಟ್ರೋಲ್‍ಗಳು ಬರಪೂರ ನಡೆಯುತ್ತಿದೆ. ಬಿಜೆಪಿಯೊಳಗಿನ ಬಡಿದಾಟ ದಿನಕ್ಕೊಂದು ಆಯಾಮ ಪಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...